ಬ್ರೇಕಿಂಗ್ ನ್ಯೂಸ್
03-01-23 02:15 pm Mangalore Correspondent ಕರಾವಳಿ
ಮಂಗಳೂರು, ಜ.3: ಭಾನುವಾರ ಸಂಜೆ ತಣ್ಣೀರುಬಾವಿಯಲ್ಲಿ ಆರನೇ ಕ್ಲಾಸ್ ವಿದ್ಯಾರ್ಥಿಗೆ ಪೊಲೀಸರು ಲಾಠಿಯೇಟು ಕೊಟ್ಟು ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ಪೊಲೀಸ್ ಕಮಿಷನರ್ ಶಶಿಕುಮಾರ್ ಪಣಂಬೂರು ಠಾಣೆಯ ಸುನಿಲ್ ಎಂಬ ಪೇದೆಯನ್ನು ಸಸ್ಪೆಂಡ್ ಮಾಡಿದ್ದಾರೆ.
ಭಾನುವಾರ ಸಂಜೆ ತಣ್ಣೀರುಬಾವಿಯಲ್ಲಿ ಭಾರೀ ಸಂಖ್ಯೆಯಲ್ಲಿ ಪ್ರವಾಸಿಗರು ಇದ್ದುದರಿಂದ ರಸ್ತೆ ಪೂರ್ತಿ ಬ್ಲಾಕ್ ಆಗಿತ್ತು. ಕರ್ತವ್ಯದಲ್ಲಿದ್ದ ಪಣಂಬೂರು ಪೊಲೀಸರು ರಸ್ತೆಯ ಟ್ರಾಫಿಕ್ ಕ್ಲಿಯರ್ ಮಾಡುವುದರಲ್ಲಿ ನಿರತರಾಗಿದ್ದರು. ಈ ವೇಳೆ, ಕ್ರಿಕೆಟ್ ಆಡಿ ಬೈಕಿನಲ್ಲಿ ಮರಳುತ್ತಿದ್ದ ಹುಡುಗರ ಮೇಲೆ ಪೊಲೀಸರು ದರ್ಪ ತೋರಿದ್ದಾರೆ.
ಐದಾರು ಮಂದಿ ಯುವಕರ ಮೇಲೆ ಲಾಠಿ ಚಾರ್ಜ್ ಮಾಡಿದ್ದರು. ಈ ಪೈಕಿ ಆರನೇ ಕ್ಲಾಸ್ ವಿದ್ಯಾರ್ಥಿ ಮತ್ತು ಪಿಯುಸಿ ವಿದ್ಯಾರ್ಥಿಯೂ ಸೇರಿದ್ದರು. ಸಣ್ಣ ಹುಡುಗನಿಗೆ ಲಾಠಿಯಿಂದ ಕೈ, ಬೆನ್ನು, ಕಾಲಿಗೆ ಪೆಟ್ಟು ಬಿದ್ದಿದ್ದರಿಂದ ಸ್ಥಳದಲ್ಲೇ ಕುಸಿದು ಬಿದ್ದಿದ್ದ. ಹುಡುಗನನ್ನು ಸ್ಥಳೀಯರು ಎತ್ತಿಕೊಂಡು ಆಸ್ಪತ್ರೆಗೆ ಸಾಗಿಸಿದ್ದರು. ಇದೇ ವೇಳೆ, ಸ್ಥಳದಲ್ಲಿ ಜಮಾಯಿಸಿದ್ದ ಯುವಕರು ಪೊಲೀಸರನ್ನು ತರಾಟೆಗೆತ್ತಿಕೊಂಡು ದಬಾಯಿಸಿದ್ದಾರೆ. ನೀವು ಲಾಠಿ ಚಾರ್ಜ್ ಮಾಡಿದ್ದು ಯಾಕೆ, ನೀವು ಭಾರೀ ಲಾಠಿ ಬೀಸುತ್ತೀರಾ ಎಂದು ಪೊಲೀಸರನ್ನು ಪ್ರಶ್ನೆ ಮಾಡಿದ್ದರು.
ಘಟನೆ ಬಗ್ಗೆ ಶಾಸಕ ವೇದವ್ಯಾಸ ಕಾಮತ್ ಗಮನಕ್ಕೆ ತಂದು ಪೊಲೀಸ್ ಕಮಿಷನರಿಗೆ ದೂರು ನೀಡುವಂತೆ ಮಾಡಿದ್ದರು. ಶಾಸಕರ ಸೂಚನೆಯಂತೆ, ಇಲಾಖಾ ತನಿಖೆ ನಡೆದು ಲಾಠಿ ಬೀಸಿದ್ದ ಪೇದೆ ಸುನೀಲ್ ಎಂಬವರನ್ನು ಕರ್ತವ್ಯದಿಂದ ಅಮಾನತು ಮಾಡಲಾಗಿದೆ. ಪಣಂಬೂರು ಎಸ್ಐ ಸ್ಥಳದಲ್ಲಿ ಇದ್ದಾಗಲೇ ಲಾಠಿಯಲ್ಲಿ ದೌರ್ಜನ್ಯ ಎಸಗಲಾಗಿತ್ತು. ಎಸ್ಐ ಬಂದು ಯಾಕೆ ಲಾಠಿ ಚಾರ್ಜ್ ಮಾಡಿದ್ದು ಎಂದು ಪೊಲೀಸರನ್ನು ಪ್ರಶ್ನೆ ಮಾಡಿದ್ದರು. ಬಳಿಕ ಎಸ್ಐ ಸೇರಿ ಹಿರಿಯಧಿಕಾರಿಗಳು ಬಂದು ಸ್ಥಳೀಯರನ್ನು ಸಮಾಧಾನಪಡಿಸುವ ಕೆಲಸ ಮಾಡಿದ್ದರು.
Mangalore Police atrocity at Tannirbhavi beach, Constable Sunil Suspended. The police here allegedly lathi-charged youths at Tannirbhavi beach to clear the traffic block. A class 6 student and PU students also reportedly received blows during the atrocity from the police. Locals took the cops to task. A class 6 student was injured seriously and admitted to the hospital. Local public gheraoed the police and took three cops on spot to task.
21-05-25 09:16 pm
Bangalore Correspondent
CM Siddaramaiah, Rain, Visit: ಮಳೆ ಹಾನಿ ಪ್ರದೇಶ...
21-05-25 05:42 pm
Kumki elephants, Pawan Kalyan, Cm Siddaramaia...
21-05-25 02:35 pm
ED Raids, Parameshwar College, Ranya Rao: ಹೋಂ...
21-05-25 01:50 pm
KG Halli Police Sub inspector Nagraj, Wife su...
21-05-25 12:12 pm
21-05-25 12:57 pm
HK News Desk
ಅಕ್ರಮ ಬಾಂಗ್ಲಾ ವಲಸಿಗರ ಪತ್ತೆಗೆ ಪ್ರತಿ ಜಿಲ್ಲೆಯಲ್ಲ...
20-05-25 02:36 pm
Operation Sindhoor, Rahul Gandhi,.Pakistan: ಆ...
20-05-25 01:42 pm
ಆಡಲು ಹೋಗಿದ್ದಾಗ ಮಳೆ ಬಂತೆಂದು ನಿಲ್ಲಿಸಿದ್ದ ಕಾರಿನ...
19-05-25 02:25 pm
ಚಾರ್ಮಿನಾರ್ ಬಳಿಯ ಗುಲ್ಜಾರ್ ಹೌಸ್ನಲ್ಲಿ ಬೆಂಕಿ ಅವ...
19-05-25 01:46 pm
21-05-25 11:09 pm
HK News Desk
Mangalore Beltangady, Akanksha Suicide, Updat...
21-05-25 10:45 pm
MP Kota Srinivas Poojary, Mangalore: ಇಂದಿರಾ ಗ...
21-05-25 09:30 pm
Dr M A Saleem New DG&IGP: ಡಿಜಿಪಿ ಅಲೋಕ್ ಮೋಹನ್...
21-05-25 07:17 pm
Tiranga Yatra, Mangalore: ಮಂಗಳೂರಿನಲ್ಲಿ ತಿರಂಗಾ...
20-05-25 11:12 pm
19-05-25 09:38 pm
Mangalore Correspondent
Belagavi Murder, Mother in law: ಸೊಸೆಗೆ ಮಕ್ಕಳಾ...
19-05-25 03:35 pm
Reshma Bariga, FIR, Mangalore; ಆಪರೇಶನ್ ಸಿಂಧೂರ...
18-05-25 07:45 pm
Suhas Shetty, BJP Corporator Shweta Poojary,...
18-05-25 07:35 pm
Bangalore Cigarette Murder, Video Viral: ಕಾರಿ...
17-05-25 05:00 pm