ಬ್ರೇಕಿಂಗ್ ನ್ಯೂಸ್
04-01-23 08:20 pm Mangalore Correspondent ಕರಾವಳಿ
ಉಳ್ಳಾಲ, ಜ.4 : ಹರೇಕಳದ ಡ್ಯಾಂ ಕಮ್ ಸೇತುವೆ ಸಿದ್ಧರಾಮಯ್ಯ ಮುಖ್ಯಮಂತ್ರಿಯಾಗಿದ್ದ ವೇಳೆ ಮಂಜೂರಾಗಿದ್ದು, ರಸ್ತೆ ಬದಿಯಲ್ಲಿ ಸಮರ್ಪಕ ಮೋರಿ ರಚಿಸೋಕು ಆಗದ ಬಿಜೆಪಿ ಆಡಳಿತವು ಸೇತುವೆ ಮಾಡುವುದು ಕನಸು ಎಂದು ಶಾಸಕ ಯು.ಟಿ ಖಾದರ್ ಬಿಜೆಪಿ ನಾಯಕರ ಬಗ್ಗೆ ವ್ಯಂಗ್ಯವಾಡಿದ್ದಾರೆ.
ಹರೇಕಳದ ನೂತನ ಸೇತುವೆ ಬಿಜೆಪಿ ಸರಕಾರದ್ದೆಂದು ಫ್ಲೆಕ್ಸ್ ಹಾಕಿ ಪ್ರಚಾರ ಪಡೆಯುತ್ತಿದ್ದಾರೆ. ಯಾವ ಸರಕಾರ ಹರೇಕಳದ ಸೇತುವೆ ಕಟ್ಟಿದೆ ಎಂಬುದು ಮಾಧ್ಯಮಗಳ ಸುದ್ದಿ ದಾಖಲಾತಿ ಇದೆ. ಸೇತುವೆ ನಿರ್ಮಾಣದ ನಂತರ ತಾಂತ್ರಿಕ ಅಡೆತಡೆಯಿಂದ ಆದ ಕೆಲವೊಂದು ಅನಾಹುತಕ್ಕೆ ಹದಿನೈದು ಕೋಟಿ ರೂಪಾಯಿ ಬಿಡುಗಡೆ ಮಾಡಿರುವುದು ಬಿಜೆಪಿ ಸರಕಾರ ಹೌದು. ಇನ್ನುಳಿದಂತೆ ಸೇತುವೆ ಮಂಜೂರು ಮಾಡಿದ್ದೇ ಸಿದ್ಧರಾಮಯ್ಯ ಮುಖ್ಯಮಂತ್ರಿ ಆಗಿದ್ದ ದಿನಗಳಲ್ಲಿ ಎಂಬುದನ್ನ ದಾಖಲೆಗಳಿಂದ ಅರಿತುಕೊಳ್ಳಿ ಎಂದು ಬಿಜೆಪಿ ನಾಯಕರಿಗೆ ಶಾಸಕ ಖಾದರ್ ಟಾಂಗ್ ನೀಡಿದ್ದಾರೆ.
ಹರೇಕಳದಲ್ಲಿ ನಡೆದ ಸುದ್ದಿಗೋಷ್ಟಿಯನ್ನುದ್ದೇಶಿಸಿ ಅವರು ಮಾತನಾಡಿದರು. ಮಾಜಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಹರೇಕಳ ಗ್ರಾಮಕ್ಕೆ ನಾಳೆ ಭೇಟಿ ನೀಡಲಿದ್ದು, ಗ್ರಾಮ ಪಂಚಾಯತ್ ಕಚೇರಿ ಕಟ್ಟಡ "ಹರೇಕಳ ಗ್ರಾಮ ಸೌಧ", ಗುತ್ತಿಗೆದಾರ ಡಾ.ಜಿ. ಶಂಕರ್ ಗ್ರಾಮಕ್ಕೆ ಕೊಡುಗೆಯ ರೂಪದಲ್ಲಿ ನಿರ್ಮಿಸಿದ ಆಸ್ಪತ್ರೆ, ಹರೇಕಳ - ಅಡ್ಯಾರ್ ಸಂಪರ್ಕ ಸೇತುವೆ ಹಾಗೂ ಡ್ಯಾಂ ವೀಕ್ಷಣೆ ಮಾಡಲಿದ್ದು ಬಳಿಕ ಹರೇಕಳ ಕಡವಿನ ಬಳಿ ನಡೆಯುವ ಸಾರ್ವಜನಿಕ ಬೃಹತ್ ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದವರು ಹೇಳಿದರು.
ಕೇಂದ್ರ ಹಾಗೂ ರಾಜ್ಯ ಬಿಜೆಪಿ ಸರಕಾರದ ಆಡಳಿತದಿಂದ ಜನತೆ ಭ್ರಮನಿರಸನಗೊಂಡಿದ್ದಾರೆ. ಕೇಂದ್ರದಲ್ಲಿರುವ ನಮ್ಮ ರಾಜ್ಯದ ಮಂತ್ರಿಗಳು, ಸಂಸದರು ಚಕಾರ ಎತ್ತಿಲ್ಲ. ಬೀಡಿ ಕಾರ್ಮಿಕರು, ರೈತರು, ಮೀನುಗಾರರು ಸೇರಿದಂತೆ ಜನಸಾಮ್ಯಾನರ ಬದುಕು ಹೈರಾಣಾಗುತ್ತಿರುವ ಕುರಿತು ಎಲ್ಲೂ ಮಾತನಾಡುತ್ತಿಲ್ಲ. ಸರಕಾರಿ ನೌಕರರಿಗೆ ವೇತನ ನೀಡದೆ ಸಂಕಷ್ಟ ತಂದಿದ್ದಲ್ಲದೆ ರಾಜ್ಯದಲ್ಲಿ ಭ್ರಷ್ಟಾಚಾರ ತಾಂಡವವಾಡುತ್ತಿದ್ದು ಸಾಮಾನ್ಯ ಜನರ ಬದುಕು ಹೈರಾಣಾಗುತ್ತಿದೆ ಎಂದು ಖೇದ ವ್ಯಕ್ತಪಡಿಸಿದರು.
Mangalore No development works from BJP for Harekala dam, only diverting peoples minds slams U T Khader.
11-05-25 01:21 pm
HK News Desk
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
Dk Shivakumar, Congress, Birthday: ಭಯೋತ್ಪಾದನೆ...
10-05-25 12:40 pm
Mandya Post, Modi; ಮಾಜಿ ಪಾಕ್ ಪ್ರಧಾನಿಗೆ ಮೋದಿ ಶ...
10-05-25 11:30 am
Janardhana Reddy disqualified, MLA: ಅಕ್ರಮ ಗಣಿ...
08-05-25 11:07 pm
12-05-25 11:21 pm
HK Staff
Modi, India Pak War: ಪರಮಾಣು ಅಸ್ತ್ರದ ನೆಪದಲ್ಲಿ...
12-05-25 10:21 pm
ಪಾಕಿಸ್ತಾನದ ಒಳಗಡೆಯೇ ತಳಮಳ ; ಸೇನೆ ಮತ್ತು ಸರ್ಕಾರದ...
12-05-25 04:38 pm
ಉತ್ತರ ಪಾಕಿಸ್ತಾನದಲ್ಲಿ ಬಲೂಚಿಸ್ತಾನ್ ಹೋರಾಟ ತೀವ್ರ...
12-05-25 11:23 am
ಪಾಕಿಸ್ತಾನದ ಉಗ್ರರ ನೆಲೆಗಳ ಧ್ವಂಸ ; ಫೋಟೊ ಸಾಕ್ಷ್ಯ...
11-05-25 11:02 pm
12-05-25 08:22 pm
Mangalore Correspondent
Comedy Khiladigalu Rakesh Poojary Death: 'ಕಾಮ...
12-05-25 11:26 am
Mangalore, Pilikula, Dr Suryaprakash Shenoy:...
11-05-25 05:01 pm
Drone Ban, Mangalore, Mysuru: ಮಂಗಳೂರು, ಮೈಸೂರಿ...
10-05-25 07:10 pm
ಹಿಂದು - ಮುಸ್ಲಿಂ ಮಧ್ಯೆ ಪ್ರಚೋದನಕಾರಿ ಪೋಸ್ಟ್ ಹಾಕು...
09-05-25 11:07 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm