ಬ್ರೇಕಿಂಗ್ ನ್ಯೂಸ್
04-01-23 08:20 pm Mangalore Correspondent ಕರಾವಳಿ
ಉಳ್ಳಾಲ, ಜ.4 : ಹರೇಕಳದ ಡ್ಯಾಂ ಕಮ್ ಸೇತುವೆ ಸಿದ್ಧರಾಮಯ್ಯ ಮುಖ್ಯಮಂತ್ರಿಯಾಗಿದ್ದ ವೇಳೆ ಮಂಜೂರಾಗಿದ್ದು, ರಸ್ತೆ ಬದಿಯಲ್ಲಿ ಸಮರ್ಪಕ ಮೋರಿ ರಚಿಸೋಕು ಆಗದ ಬಿಜೆಪಿ ಆಡಳಿತವು ಸೇತುವೆ ಮಾಡುವುದು ಕನಸು ಎಂದು ಶಾಸಕ ಯು.ಟಿ ಖಾದರ್ ಬಿಜೆಪಿ ನಾಯಕರ ಬಗ್ಗೆ ವ್ಯಂಗ್ಯವಾಡಿದ್ದಾರೆ.
ಹರೇಕಳದ ನೂತನ ಸೇತುವೆ ಬಿಜೆಪಿ ಸರಕಾರದ್ದೆಂದು ಫ್ಲೆಕ್ಸ್ ಹಾಕಿ ಪ್ರಚಾರ ಪಡೆಯುತ್ತಿದ್ದಾರೆ. ಯಾವ ಸರಕಾರ ಹರೇಕಳದ ಸೇತುವೆ ಕಟ್ಟಿದೆ ಎಂಬುದು ಮಾಧ್ಯಮಗಳ ಸುದ್ದಿ ದಾಖಲಾತಿ ಇದೆ. ಸೇತುವೆ ನಿರ್ಮಾಣದ ನಂತರ ತಾಂತ್ರಿಕ ಅಡೆತಡೆಯಿಂದ ಆದ ಕೆಲವೊಂದು ಅನಾಹುತಕ್ಕೆ ಹದಿನೈದು ಕೋಟಿ ರೂಪಾಯಿ ಬಿಡುಗಡೆ ಮಾಡಿರುವುದು ಬಿಜೆಪಿ ಸರಕಾರ ಹೌದು. ಇನ್ನುಳಿದಂತೆ ಸೇತುವೆ ಮಂಜೂರು ಮಾಡಿದ್ದೇ ಸಿದ್ಧರಾಮಯ್ಯ ಮುಖ್ಯಮಂತ್ರಿ ಆಗಿದ್ದ ದಿನಗಳಲ್ಲಿ ಎಂಬುದನ್ನ ದಾಖಲೆಗಳಿಂದ ಅರಿತುಕೊಳ್ಳಿ ಎಂದು ಬಿಜೆಪಿ ನಾಯಕರಿಗೆ ಶಾಸಕ ಖಾದರ್ ಟಾಂಗ್ ನೀಡಿದ್ದಾರೆ.



ಹರೇಕಳದಲ್ಲಿ ನಡೆದ ಸುದ್ದಿಗೋಷ್ಟಿಯನ್ನುದ್ದೇಶಿಸಿ ಅವರು ಮಾತನಾಡಿದರು. ಮಾಜಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಹರೇಕಳ ಗ್ರಾಮಕ್ಕೆ ನಾಳೆ ಭೇಟಿ ನೀಡಲಿದ್ದು, ಗ್ರಾಮ ಪಂಚಾಯತ್ ಕಚೇರಿ ಕಟ್ಟಡ "ಹರೇಕಳ ಗ್ರಾಮ ಸೌಧ", ಗುತ್ತಿಗೆದಾರ ಡಾ.ಜಿ. ಶಂಕರ್ ಗ್ರಾಮಕ್ಕೆ ಕೊಡುಗೆಯ ರೂಪದಲ್ಲಿ ನಿರ್ಮಿಸಿದ ಆಸ್ಪತ್ರೆ, ಹರೇಕಳ - ಅಡ್ಯಾರ್ ಸಂಪರ್ಕ ಸೇತುವೆ ಹಾಗೂ ಡ್ಯಾಂ ವೀಕ್ಷಣೆ ಮಾಡಲಿದ್ದು ಬಳಿಕ ಹರೇಕಳ ಕಡವಿನ ಬಳಿ ನಡೆಯುವ ಸಾರ್ವಜನಿಕ ಬೃಹತ್ ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದವರು ಹೇಳಿದರು.



ಕೇಂದ್ರ ಹಾಗೂ ರಾಜ್ಯ ಬಿಜೆಪಿ ಸರಕಾರದ ಆಡಳಿತದಿಂದ ಜನತೆ ಭ್ರಮನಿರಸನಗೊಂಡಿದ್ದಾರೆ. ಕೇಂದ್ರದಲ್ಲಿರುವ ನಮ್ಮ ರಾಜ್ಯದ ಮಂತ್ರಿಗಳು, ಸಂಸದರು ಚಕಾರ ಎತ್ತಿಲ್ಲ. ಬೀಡಿ ಕಾರ್ಮಿಕರು, ರೈತರು, ಮೀನುಗಾರರು ಸೇರಿದಂತೆ ಜನಸಾಮ್ಯಾನರ ಬದುಕು ಹೈರಾಣಾಗುತ್ತಿರುವ ಕುರಿತು ಎಲ್ಲೂ ಮಾತನಾಡುತ್ತಿಲ್ಲ. ಸರಕಾರಿ ನೌಕರರಿಗೆ ವೇತನ ನೀಡದೆ ಸಂಕಷ್ಟ ತಂದಿದ್ದಲ್ಲದೆ ರಾಜ್ಯದಲ್ಲಿ ಭ್ರಷ್ಟಾಚಾರ ತಾಂಡವವಾಡುತ್ತಿದ್ದು ಸಾಮಾನ್ಯ ಜನರ ಬದುಕು ಹೈರಾಣಾಗುತ್ತಿದೆ ಎಂದು ಖೇದ ವ್ಯಕ್ತಪಡಿಸಿದರು.
Mangalore No development works from BJP for Harekala dam, only diverting peoples minds slams U T Khader.
11-02-26 01:34 pm
Bangalore Correspondent
ಸ್ತನ ಕ್ಯಾನ್ಸರ್ ಬಗ್ಗೆ ದೇಶವ್ಯಾಪಿ ಜಾಗೃತಿ ; ಕಲಬರಗ...
11-02-26 01:09 pm
ಛೆ… ಇವಳೆಂಥ ಮಗಳು! ಅಮ್ಮನ ಖಾಸಗಿ ಅಂಗ, ದೊಡ್ಡಮ್ಮನ ಬ...
09-02-26 07:20 pm
ಶಿವಮೊಗ್ಗದ ಕಾರು ಚಾಲಕನಲ್ಲಿ 19 ಬಾಡಿಗೆ ಬ್ಯಾಂಕ್ ಖಾ...
09-02-26 01:30 pm
ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ರ...
09-02-26 12:29 pm
10-02-26 07:31 pm
HK News Desk
ಅಡೂರು ಮೂಲದ ಸೋಶಿಯಲ್ ಮೀಡಿಯಾ ಸ್ಟಾರ್ ಚಿನ್ನು ಪಾಪು...
10-02-26 02:15 pm
ರಾಮ ಮಂದಿರ ಸ್ಫೋಟಕ್ಕೆ ಸಂಚು ರೂಪಿಸಿದ್ದ ಕೈದಿ ಫರೀದಾ...
10-02-26 11:44 am
ಕೆನಡಾದಲ್ಲಿ ಗುಂಡಿಟ್ಟು ಕನ್ನಡಿಗ ಸಾಫ್ಟ್ವೇರ್ ಇಂಜಿ...
09-02-26 10:25 pm
ಜಾಗತಿಕ ಷೇರು ಮಾರುಕಟ್ಟೆಯಲ್ಲಿ 'ಆಂಥ್ರೋಪಿಕ್' AI ಬಿ...
09-02-26 12:27 pm
10-02-26 11:03 pm
Mangalore Correspondent
Mangaore, Marriage Fraud: ಹಲವಾರು ಹೆಂಡಿರ ಮುದ್ದ...
10-02-26 08:27 pm
Oman Accident: ಒಮಾನ್ ನಲ್ಲಿ ಭೀಕರ ಅಪಘಾತ ; ಕಾಪು...
09-02-26 11:20 pm
Mangalore Accident, Bus: ನಂತೂರಿನಲ್ಲಿ ಅಪಘಾತಕ್ಕ...
09-02-26 08:02 pm
ಕೆಪಿಟಿ ಜಂಕ್ಷನ್ ಬಳಿಯ ಹೆದ್ದಾರಿ ಡಿವೈಡರ್ ಮುಚ್ಚಿದ್...
09-02-26 02:50 pm
10-02-26 09:05 pm
Bangalore Correspondent
Peter Caddy, Arrest: ಉದ್ಯಮಿಗಳಿಗೆ ಸಾಲ ಕೊಡಿಸುವು...
10-02-26 04:38 pm
Belthangady Fake Kidnap: ಕಾಲೇಜು ವಿದ್ಯಾರ್ಥಿನಿ...
10-02-26 10:59 am
ಜಾಲತಾಣದಲ್ಲೇ ಪಡ್ಡೆ ಹುಡುಗರಿಗೆ ಬಲೆ, ಖತರ್ನಾಕ್ ಪ್...
09-02-26 02:04 pm
ಬೆಳ್ತಂಗಡಿ ; ಕಾಲೇಜು ತೆರಳುತ್ತಿದ್ದ ಅಪ್ರಾಪ್ತ ಯುವತ...
09-02-26 11:26 am