ಬ್ರೇಕಿಂಗ್ ನ್ಯೂಸ್
06-01-23 12:40 pm Mangalore Correspondent ಕರಾವಳಿ
ಮಂಗಳೂರು, ಜ.6 : ಎನ್ಐಎ ಅಧಿಕಾರಿಗಳು ಜ.5ರಂದು ರಾಜ್ಯದ ಆರು ಕಡೆ ದಾಳಿ ಕಾರ್ಯಾಚರಣೆ ನಡೆಸಿದ್ದು, ಐಸಿಸ್ ನೆಟ್ವರ್ಕ್ ಆರೋಪದಲ್ಲಿ ಇಬ್ಬರನ್ನು ಬಂಧಿಸಿದ್ದಾರೆ.
ದಕ್ಷಿಣ ಕನ್ನಡ, ಶಿವಮೊಗ್ಗ, ದಾವಣಗೆರೆ, ಬೆಂಗಳೂರು ಸೇರಿ ರಾಜ್ಯದ ಆರು ಕಡೆಗಳಲ್ಲಿ ಎನ್ಐಎ ಏಕಕಾಲದಲ್ಲಿ ದಾಳಿ ನಡೆಸಿದೆ. ಶಿವಮೊಗ್ಗ ಗ್ರಾಮಾಂತರ ಠಾಣೆಯಲ್ಲಿ ದಾಖಲಾಗಿದ್ದ ಬಾಂಬ್ ಟ್ರಯಲ್ ಪ್ರಕರಣ ಸಂಬಂಧಿಸಿ ಎನ್ಐಎ ಅಧಿಕಾರಿಗಳು ದಾಳಿ ನಡೆಸಿದ್ದರು.

ಮಂಗಳೂರಿನ ಪಿಎ ಇಂಜಿನಿಯರಿಂಗ್ ಕಾಲೇಜಿನಲ್ಲಿ ಇಂಜಿನಿಯರಿಂಗ್ ಓದುತ್ತಿದ್ದ ರೇಶಾನ್ ತಾಜುದ್ದೀನ್(22) ಮತ್ತು ಶಿವಮೊಗ್ಗದಲ್ಲಿ ಹುಝೈರ್ ಫರ್ಹಾನ್ ಎಂಬವರನ್ನು ಬಂಧಿಸಲಾಗಿದೆ. ರೇಶಾನ್, ಉಡುಪಿ ಜಿಲ್ಲೆಯ ಬ್ರಹ್ಮಾವರ ತಾಲೂಕಿನ ವಾರಂಬಳ್ಳಿ ನಿವಾಸಿಯಾಗಿದ್ದು ಹುಝೈರ್, ಶಿವಮೊಗ್ಗ ಜಿಲ್ಲೆಯ ಟಿಪ್ಪು ಸುಲ್ತಾನ್ ನಗರದ 7ನೇ ಕ್ರಾಸ್ ನಿವಾಸಿಯಾಗಿದ್ದ.

ಈ ಹಿಂದೆ ಶಿವಮೊಗ್ಗದ ತುಂಗಾ ತೀರದಲ್ಲಿ ಬಾಂಬ್ ಟ್ರಯಲ್ ನಡೆಸಿದ್ದ ಪ್ರಕರಣದಲ್ಲಿ ಬಂಧಿಸಿದ್ದ ಮಾಜ್ ಮುನೀರ್ ಜೊತೆಗೆ ಇಂಜಿನಿಯರಿಂಗ್ ವಿದ್ಯಾರ್ಥಿ ರೇಶಾನ್ ನಿಕಟ ಸಂಪರ್ಕದಲ್ಲಿದ್ದ. ಮಾಜ್ ಕೂಡ ಪಿಎ ಇಂಜಿನಿಯರಿಂಗ್ ಕಾಲೇಜಿನಲ್ಲಿ ಪದವಿ ಪೂರೈಸಿದ್ದ. ಈ ವೇಳೆ, ರೇಶಾನ್ ಆತನ ಜೊತೆಗೆ ನಿಕಟ ಸಂಪರ್ಕದಲ್ಲಿದ್ದು ಉಗ್ರ ಚಟುವಟಿಕೆಗಾಗಿ ಫಂಡಿಂಗ್ ಪಡೆದುಕೊಂಡಿದ್ದ ಎನ್ನುವುದು ತನಿಖೆಯಲ್ಲಿ ತಿಳಿದುಬಂದಿದೆ.

ರೇಶಾನ್ ತಾಜುದ್ದೀನ್ ಮತ್ತು ಹುಜೈರ್ ಉಗ್ರ ಚಟುವಟಿಕೆ ನಡೆಸುವುದಕ್ಕಾಗಿ ಐಸಿಸ್ ನೆಟ್ವರ್ಕ್ ಕಡೆಯಿಂದ ಕ್ರಿಪ್ಟೋ ಕರೆನ್ಸಿ ಮೂಲಕ ಹಣಕಾಸು ನೆರವು ಪಡೆದಿದ್ದರು. ರಾಜ್ಯದಲ್ಲಿ ದೊಡ್ಡ ಮಟ್ಟದ ವಿಧ್ವಂಸಕ ಕೃತ್ಯ ಎಸಗಲು ಆರೋಪಿಗಳು ಪ್ಲಾನ್ ಹಾಕಿದ್ದರು. ಲಿಕ್ಕರ್ ಶಾಪ್, ಗೋಡೌನ್, ಟ್ರಾನ್ಸ್ ಫಾರ್ಮರ್ ರೀತಿಯ ಫರ್ಮ್ ಗಳನ್ನು ಸ್ಫೋಟಿಸಲು ಸಂಚು ಹೂಡಿದ್ದರು ಎನ್ನುವ ಅಂಶಗಳು ತನಿಖೆಯಲ್ಲಿ ತಿಳಿದುಬಂದಿತ್ತು.
ಎನ್ಐಎ ದಾಳಿ ಸಂದರ್ಭದಲ್ಲಿ ಆರೋಪಿಗಳ ಮನೆಯಿಂದ ಡಿಜಿಟಲ್ ಸಾಕ್ಷ್ಯಗಳು, ಕೆಲವು ದಾಖಲೆಗಳನ್ನು ವಶಕ್ಕೆ ಪಡೆಯಲಾಗಿದೆ. ಬಾಂಬ್ ಟ್ರಯಲ್ ಪ್ರಕರಣದಲ್ಲಿ ಮಾಝ್ ಮುನೀರ್ ಮತ್ತು ಸಯ್ಯದ್ ಯಾಸಿನ್ ಎಂಬುವರನ್ನು ಎನ್ಐಎ ಬಂಧಿಸಿತ್ತು. ಅವರಿಗೆ ಐಸಿಸ್ ನೆಟ್ವರ್ಕ್ ಇರುವುದು ಪತ್ತೆಯಾಗಿತ್ತು. ಮಾಝ್ ಮುನೀರ್ ಎರಡು ವರ್ಷಗಳ ಹಿಂದೆ ಮಂಗಳೂರಿನಲ್ಲಿ ಗೋಡೆ ಬರಹ ಬರೆದಿರುವ ಪ್ರಕರಣದಲ್ಲಿಯೂ ಆರೋಪಿಯಾಗಿದ್ದ.
ಶಿವಮೊಗ್ಗ ಬಾಂಬ್ ಟ್ರಯಲ್, ಕುಕ್ಕರ್ ಬಾಂಬ್ ಪ್ರಕರಣ ; ಪಿಎ ಇಂಜಿನಿಯರಿಂಗ್ ಕಾಲೇಜಿಗೆ ಎನ್ಐಎ ದಾಳಿ, ಪರಿಶೀಲನೆ
ಎನ್ಐಎ ದಾಳಿ ; ಮಂಗಳೂರಿನಲ್ಲಿ ಮತ್ತೊಬ್ಬ ಇಂಜಿನಿಯರಿಂಗ್ ವಿದ್ಯಾರ್ಥಿ ವಶಕ್ಕೆ
The National Investigation Agency (NIA) raided six locations and arrested two suspects including an engineering student for their alleged involvement in Shivamogga Islamic State conspiracy case. The arrested have been identified as Reshaan Thajuddin Sheikh, an engineering student from Varamballi, Bramhavar, Udupi district and Huzair Farhan Baig, Tippu Sultan Nagar, Shivamogga district.
04-11-25 04:38 pm
Bangalore Correspondent
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
04-11-25 10:51 pm
Mangalore Correspondent
Mangalore Police, Panambur Beach: ಗಂಡ - ಹೆಂಡತ...
04-11-25 08:37 pm
ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ಹಣಕ್ಕಾಗಿ...
04-11-25 06:15 pm
ವ್ಯಾಟಿಕನ್ ಸಿಟಿಯ ಭಾರತದ ರಾಯಭಾರಿ ಆ್ಯಂಡ್ರಿಯಾ ಫಾನ್...
04-11-25 05:06 pm
ಧರ್ಮಸ್ಥಳ ಪ್ರಕರಣ ; ಎಸ್ಐಟಿ ತನಿಖಾ ಪ್ರಕ್ರಿಯೆಗೆ ಮಹ...
04-11-25 05:03 pm
04-11-25 02:11 pm
Mangalore Correspondent
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm