ಬ್ರಹ್ಮಾವರ ಬ್ಲಾಕ್ ಕಾಂಗ್ರೆಸ್ ಮಗ ಎನ್ಐಎ ವಶಕ್ಕೆ ; ಕಾಂಗ್ರೆಸ್ ತನ್ನ ಕಾರ್ಯಕರ್ತನ ಬಗ್ಗೆ ಸ್ಪಷ್ಟನೆ ನೀಡಬೇಕು - ರಘುಪತಿ ಭಟ್ 

06-01-23 04:39 pm       Udupi Correspondent   ಕರಾವಳಿ

ಬ್ರಹ್ಮಾವರ ಬ್ಲಾಕ್ ಕಾಂಗ್ರೆಸ್ ಮುಖಂಡನ ಮಗನನ್ನು ಎನ್ಐಎ ಅಧಿಕಾರಿಗಳು ಬಂಧಿಸಿದ್ದು, ಇದೀಗ ಒಂದೊಂದೇ ಆತಂಕಕಾರಿ ವಿಚಾರಗಳು ತನಿಖೆಯಲ್ಲಿ ಹೊರಗೆ ಬರುತ್ತಿದೆ, ತನಿಖೆಯನ್ನು ಇನ್ನಷ್ಟು ತೀವ್ರಗೊಳಿಸಬೇಕು. ಜೊತೆಗೆ ಕಾಂಗ್ರೆಸ್ ತನ್ನ ಪಕ್ಷದ ಮಖಂಡನ ಬಗ್ಗೆ ಸ್ಪಷ್ಟನೆ ನೀಡಬೇಕು ಎಂದು ಶಾಸಕ ರಘುಪತಿ ಭಟ್ ಆಗ್ರಹಿಸಿದ್ದಾರೆ. 

ಉಡುಪಿ, ಜ.6 : ಬ್ರಹ್ಮಾವರ ಬ್ಲಾಕ್ ಕಾಂಗ್ರೆಸ್ ಮುಖಂಡನ ಮಗನನ್ನು ಎನ್ಐಎ ಅಧಿಕಾರಿಗಳು ಬಂಧಿಸಿದ್ದು, ಇದೀಗ ಒಂದೊಂದೇ ಆತಂಕಕಾರಿ ವಿಚಾರಗಳು ತನಿಖೆಯಲ್ಲಿ ಹೊರಗೆ ಬರುತ್ತಿದೆ, ತನಿಖೆಯನ್ನು ಇನ್ನಷ್ಟು ತೀವ್ರಗೊಳಿಸಬೇಕು. ಜೊತೆಗೆ ಕಾಂಗ್ರೆಸ್ ತನ್ನ ಪಕ್ಷದ ಮಖಂಡನ ಬಗ್ಗೆ ಸ್ಪಷ್ಟನೆ ನೀಡಬೇಕು ಎಂದು ಶಾಸಕ ರಘುಪತಿ ಭಟ್ ಆಗ್ರಹಿಸಿದ್ದಾರೆ. 

ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ತಾಜುದ್ದೀನ್ ಅವರು ಬ್ರಹ್ಮಾವರ ಬ್ಲಾಕ್ ಕಾಂಗ್ರೆಸ್ ನಲ್ಲಿ ಸಕ್ರಿಯ ಕಾರ್ಯಕರ್ತ. ಬ್ಲಾಕ್ ಕಾಂಗ್ರೆಸ್ ವಿಭಾಗದ ಪ್ರಧಾನ ಕಾರ್ಯದರ್ಶಿ ಕೂಡ. ಅಲ್ಲದೆ ಸಿದ್ದರಾಮಯ್ಯ, ಡಿಕೆಶಿ, ಯು.ಟಿ ಖಾದರ್ ಪರಮಾಪ್ತನಾಗಿದ್ದು ಈ ಬಗ್ಗೆ ರಾಜ್ಯ ಕಾಂಗ್ರೆಸ್ ಸ್ಪಷ್ಟನೆ ಕೊಡಬೇಕು. ಕಾಂಗ್ರೆಸ್ ಪಕ್ಷ ಇದರ ಜವಾಬ್ದಾರಿಯನ್ನು ಹೊರಬೇಕು, ಎನ್ಐಎ ತಾಜುದ್ದೀನ್ ಅವರ ಮಗ ರಿಶಾನ್ ನ್ನು ವಶಕ್ಕೆ ಪಡೆದಿದ್ದು, ಇದೀಗ ಕಾಂಗ್ರೆಸ್ ಅವರಿಗೆ ಪ್ರಮೋಷನ್ ಕೊಟ್ಟು ಬ್ಲಾಕ್ ಅಧ್ಯಕ್ಷನನ್ನಾಗಿ ಮಾಡುತ್ತಾ? ಅಥವಾ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನದಿಂದ ಉಚ್ಛಾಟನೆ ಮಾಡ್ತಾತ್ತಾ? ಎಂದು ಪ್ರಶ್ನಿಸಿದರು.

NIA files charge sheet against six accused in targeted killing case |  Deccan Herald

ಈಗಾಗಲೇ ತಾಜುದ್ದೀನ್ ಕಾಂಗ್ರೆಸ್ ನಾಯಕರ ಜೊತೆಗಿರುವ ಫೋಟೋವನ್ನು ಬಿಡುಗಡೆ ಮಾಡಿದ್ದೇನೆ, ರಿಶಾನ್ ಕುಟುಂಬದ ಬಗ್ಗೆ ಕೂಡ ತನಿಖೆ ಮಾಡಬೇಕು ಎಂದರು. ತಾಜುದ್ದೀನ್ ಆರ್ಥಿಕ ಪರಿಸ್ಥಿತಿ ಈ ಹಿಂದೆ ಹದಗೆಟ್ಟಿತ್ತು. ಏಕಾಏಕಿ ಇತ್ತೀಚೆಗೆ ಶ್ರೀಮಂತನಾದ ಬಗ್ಗೆ ಸ್ಥಳೀಯರು ಗುಮಾನಿ ವ್ಯಕ್ತಪಡಿಸಿದ್ದಾರೆ ಎಂದು ರಘುಪತಿ ಭಟ್ ಹೇಳಿದ್ದಾರೆ.

NIA raids PA college in Mangalore, the arrested student is a congress leaders son alleges Raghupati Bhat.  The Congress should clarify that whether it will give promotion to its Brahmavar block Congress secretary Tajuddin or expel him from the party as his son was arrested by the National Investigation Agency (NIA) officials for having links with cooker blast and other cases,” said Raghupati Bhat, MLA Udupi.