ಬ್ರೇಕಿಂಗ್ ನ್ಯೂಸ್
04-08-20 12:27 pm Udupi Reporter ಕರಾವಳಿ
ಉಡುಪಿ, ಆ. 04: ನಾಳೆ ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ಶ್ರೀ ರಾಮ ಮಂದಿರ ನಿರ್ಮಾಣಕ್ಕಾಗಿ ಭೂಮಿ ಪೂಜೆ ನಡೆಯಲಿರುತ್ತದೆ. ಈ ಸಮಯದಲ್ಲಿ ಉಡುಪಿ ಜಿಲ್ಲಾ ವ್ಯಾಪ್ತಿಯಲ್ಲಿ ಯಾವುದೇ ರೀತಿಯ ಅಹಿತಕರ ಘಟನೆ ನಡೆಯದಂತೆ ಶಾಂತಿ ಸುವ್ಯವಸ್ಥೆಯನ್ನು ಕಾಪಾಡುವ ಸಲುವಾಗಿ, ಉಡುಪಿ ಜಿಲ್ಲೆಯಲ್ಲಿ ಆಗಸ್ಟ್ 4ರ ರಾತ್ರಿ 8 ಘಂಟೆಯಿಂದ ಆಗಸ್ಟ್ 6 ರ ಬೆಳಿಗ್ಗೆ 6 ಘಂಟೆಯವರೆಗೆ ಮುಂಜಾಗ್ರತಾ ಕ್ರಮವಾಗಿ, ಸಿಆರ್ಪಿಸಿ ಕಲಂ 144ರ ಅನ್ವಯ ಪ್ರತಿಬಂಧಕಾಜ್ಞೆಯನ್ನು ಜಾರಿಗೊಳಿಸಿ, ಜಿಲ್ಲಾಧಿಕಾರಿ ಜಿ.ಜಗದೀಶ್ ಆದೇಶ ಹೊರಡಿಸಿದ್ದಾರೆ.
ನಿಷೇಧಾಜ್ಞೆ ಜಾರಿ ಇರುವ ಅವಧಿಯಲ್ಲಿ ಶಸ್ತ್ರಗಳು, ದೊಣ್ಣೆಗಳು, ಕತ್ತಿಗಳು, ಈಟಿಗಳು, ಗದೆಗಳು, ಬಂದೂಕುಗಳು, ಚಾಕುಗಳು, ಕೋಲುಗಳು, ಲಾಠಿಗಳನ್ನು ಅಥವಾ ದೈಹಿಕ ಹಿಂಸೆಯನ್ನುಂಟು ಮಾಡುವ ಯಾವುದೇ ವಸ್ತುಗಳನ್ನು ಒಯ್ಯುವುದನ್ನು ನಿಷೇಧಿಸಿದೆ. ಪಟಾಕಿ, ಸ್ಪೋಟಕಗಳನ್ನು ಸಿಡಿಸುವುದು ನಿಷೇಧಿಸಿದೆ. ಯಾವುದೇ ರೀತಿಯ ಪ್ರತಿಭಟನೆ, ವಿಜಯೋತ್ಸವ, ಸಾರ್ವಜನಿಕ ಮೆರವಣಿಗೆ, ರ್ಯಾಲಿ, ಸಾರ್ವಜನಿಕ ರಾಜಕೀಯ, ಸಭೆ-ಸಮಾರಂಭಗಳನ್ನು ನಡೆಸುವುದನ್ನು ನಿಷೇಧಿಸಿದೆ. ವ್ಯಕ್ತಿಗಳ ಅಥವಾ ಶವಗಳ, ಆಕೃತಿಗಳ ಪ್ರದರ್ಶನ ಮಾಡುವುದನ್ನು ನಿಷೇಧಿಸಿದೆ. ಸಾರ್ವಜನಿಕ ಸ್ಥಳದಲ್ಲಿ ಎಲ್.ಇ.ಡಿ ಬಳಸಿ ಪ್ರದರ್ಶನ ನಡೆಸುದನ್ನು, ಸಾರ್ವಜನಿಕ ಸ್ಥಳದಲ್ಲಿ ಸಿಹಿ ಹಂಚಿ, ಸಂಭ್ರಮಾಚರಣೆ ಮಾಡುವುದನ್ನು ನಿಷೇಧಿಸಿದೆ. ಸಭ್ಯತೆ ಅಥವಾ ನೀತಿಯನ್ನು, ಅತಿಕ್ರಮಿಸಬಹುದಾದ, ಅಥವಾ ಸಾರ್ವಜನಿಕ ಸುವ್ಯವಸ್ಥೆಗೆ ಬಾಧೆಯನ್ನುಂಟು ಮಾಡಬಹುದಾದ ಅಥವಾ ರಾಜ್ಯದ ಭದ್ರತೆ ಕುಗ್ಗಿಸಬಹುದಾದ, ಅಪರಾಧವನ್ನು ಮಾಡಲು, ಬಹಿರಂಗ ಘೋಷಣೆಗಳನ್ನು ಮಾಡುವುದು, ಹಾಡುಗಳನ್ನು ಹಾಡುವುದು, ಸಂಗೀತವನ್ನು ನುಡಿಸುವುದು, ಆವೇಶಭರಿತ ಭಾಷಣ ಮಾಡುವುದು, ಭಿತ್ತಿ ಪತ್ರಗಳನ್ನು ಅಥವಾ ಇತರ ಯಾವುದೇ ವಸ್ತು, ಅಥವಾ ಪ್ರದರ್ಶಿಸುವುದು, ಪ್ರಸಾರ ಮಾಡುವುದನ್ನು ನಿಷೇಧಿಸಿದೆ.
ಉಡುಪಿ ಜಿಲ್ಲಾ ವ್ಯಾಪ್ತಿಯಲ್ಲಿ ಬರುವ ಪಟಾಕಿ ಮಾರಾಟ ಮಾಡುವ ಪರಾವನಿಗೆದಾರರು ಅಂಗಡಿಗಳನ್ನು ಮುಚ್ಚುವುದು, ಮತ್ತು ಪಟಾಕಿ ಮಾರಾಟ ಮಾಡುವುದನ್ನು ನಿಷೇಧಿಸಲಾಗಿದೆ ಎಂದು ಜಿಲ್ಲಾಧಿಕಾರಿ ಜಿ ಜಗದೀಶ್ ಆದೇಶಿಸಿದ್ದಾರೆ.
19-08-26 09:55 pm
HK News Staffer
ಬೆಂಗಳೂರಿನಲ್ಲಿ ಎಚ್1ಎನ್1 ಸೋಂಕು ಹೆಚ್ಚಳ ; ಖಾಸಗಿ ಶ...
19-08-26 09:52 pm
ಹನೂರು ಎನ್ಕೌಂಟರ್; ತಮಿಳುನಾಡು ಕ್ಯಾತೆ ಬೆನ್ನಲ್ಲೇ...
19-08-26 05:38 pm
ವಂದೇ ಮಾತರಂ ವಿವಾದ ; ಜೈಲಿಗೆ ಹಾಕಿದ್ರೂ ನಾನು ವಂದೇ...
19-08-26 02:15 pm
ಆಹಾರ ಸುರಕ್ಷತೆಗೆ ಖಾದರ್ ಹೊಸ ಪ್ಲ್ಯಾನ್; ಹೋಟೆಲ್ ಆ...
17-08-26 02:26 pm
20-08-26 10:55 am
HK News Staffer
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
ಬಿಜೆಪಿಯ ಯುವ ಮೋರ್ಚಾಗೆ ಹೊಸ ಸಾರಥಿ ; ತೇಜಸ್ವಿ ಸೂರ್...
18-08-26 02:42 pm
20-08-26 05:16 pm
HK News Staffer
ಪುತ್ತೂರು ; ಕಡಿದು ಬಿದ್ದ ವಿದ್ಯುತ್ ತಂತಿಯನ್ನು ಮರು...
19-08-26 08:40 pm
ಜೈಲಿನ ಜಾಮರ್ ಸಮಸ್ಯೆ ಇತ್ಯರ್ಥಕ್ಕೆ ಕಾಲಮಿತಿ ನಿಗದಿಪ...
19-08-26 04:19 pm
ಕರಾವಳಿಯಲ್ಲಿ ನಾಗರ ಪಂಚಮಿ ಸಂಭ್ರಮ ; ನಾಗಬನ, ನಾಗ ಸ...
17-08-26 05:07 pm
ನಾಗರಪಂಚಮಿ ; ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯಲ್ಲಿ ಸ...
16-08-26 09:33 pm
20-08-26 08:06 pm
HK News Staffer
8.50 ಲಕ್ಷ ನಗದು ಹಣದೊಂದಿಗೆ ಬೈಕಿನಲ್ಲಿ ಬರುತ್ತಿದ್ದ...
20-08-26 05:33 pm
ಕೋಟೆಪುರ ಕೊಳೆತ ಶವ ಪತ್ತೆ ಪ್ರಕರಣ ; ವ್ಯಕ್ತಿಯ ಕೊಲೆ...
20-08-26 04:25 pm
ಮಹಾಲಕ್ಷ್ಮೀ ಕೋ ಆಪರೇಟಿವ್ ಬ್ಯಾಂಕ್ನಲ್ಲಿ ಭ್ರಷ್ಟಾಚ...
20-08-26 01:58 pm
4.91 ಕೋಟಿ ರೂ. ಮೌಲ್ಯದ ನಕಲಿ ಔಷಧಿ ದಂಧೆ ಬಯಲು; ಆಸ...
19-08-26 07:25 pm