ಬ್ರೇಕಿಂಗ್ ನ್ಯೂಸ್
07-01-23 10:33 pm Mangalore Correspondent ಕರಾವಳಿ
ಮಂಗಳೂರು, ಜ.7: ಕರಾವಳಿಯಲ್ಲಿ ನಿಷೇಧಿತ ಸ್ಯಾಟಲೈಟ್ ಫೋನ್ ರಿಂಗ್ ಆಗುತ್ತಿರುವುದು ಮೊದಲೇನಲ್ಲ. ಆದರೆ ಈ ಬಾರಿ ಶಿವಮೊಗ್ಗ ಬಾಂಬ್ ಟ್ರಯಲ್ ಪ್ರಕರಣಕ್ಕೆ ಸಂಬಂಧಿಸಿ ಎನ್ಐಎ ಅಧಿಕಾರಿಗಳು ಎರಡು ದಿನಗಳ ಹಿಂದೆ ಮಂಗಳೂರಿನಲ್ಲಿ ಇಂಜಿನಿಯರಿಂಗ್ ವಿದ್ಯಾರ್ಥಿಯನ್ನು ಬಂಧಿಸಿದ ಸಂದರ್ಭದಲ್ಲಿಯೇ ಸ್ಯಾಟಲೈಟ್ ಫೋನ್ ರಿಂಗ್ ಆಗಿದೆ. ಹೀಗಾಗಿ ಇದೊಂದು ಉಗ್ರರ ಜಾಡಿನ ಹೆಜ್ಜೆಯೇ ಎನ್ನುವ ಅನುಮಾನ ವ್ಯಕ್ತವಾಗಿದ್ದು, ಈ ನೆಲೆಯಲ್ಲಿ ಪೊಲೀಸರು ತನಿಖೆ ಆರಂಭಿಸಿದ್ದಾರೆ.
ಕೇರಳ- ಕರ್ನಾಟಕದ ಗಡಿಭಾಗದ ನಿರ್ಜನ ಕಾಡು ಪ್ರದೇಶದಲ್ಲಿ ಈ ಬಾರಿ ಸ್ಯಾಟಲೈಟ್ ಫೋನ್ ಸಕ್ರಿಯವಾಗಿರುವ ಬಗ್ಗೆ ಕೇಂದ್ರೀಯ ತನಿಖಾ ಏಜನ್ಸಿಗಳು ಪತ್ತೆ ಮಾಡಿವೆ. ಪುತ್ತೂರಿನ ಗಡಿಭಾಗ ಪಾಣಾಜೆ ಎಂಬಲ್ಲಿನ ಕಾಡು ಪ್ರದೇಶದಲ್ಲಿ ಸ್ಯಾಟಲೈಟ್ ಫೋನ್ ಸಕ್ರಿಯವಾಗಿದ್ದು, ಯಾರೋ ವಿದೇಶಗಳ ಜೊತೆಗೆ ಸಂಪರ್ಕ ಸಾಧಿಸಿರುವ ಅನುಮಾನ ವ್ಯಕ್ತವಾಗಿದೆ. ಈ ಬಗ್ಗೆ ಕೇರಳ ಸ್ಪೆಷಲ್ ಬ್ರಾಂಚ್ ಪೊಲೀಸರು ಮತ್ತು ದಕ್ಷಿಣ ಕನ್ನಡ ಜಿಲ್ಲೆಯ ಆಂತರಿಕ ಭದ್ರತಾ ವಿಭಾಗದ ಸಿಬಂದಿ ತನಿಖೆ ಆರಂಭಿಸಿದ್ದಾರೆ.
ವಿಶೇಷ ಅಂದ್ರೆ, ಈ ಹಿಂದೆ ಮಂಗಳೂರಿನಲ್ಲಿ ಕುಕ್ಕರ್ ಬಾಂಬ್ ಸ್ಫೋಟ ನಡೆದಿರುವುದಕ್ಕೂ ಹಿಂದಿನ ದಿನ ಸ್ಯಾಟಲೈಟ್ ಫೋನ್ ವರ್ಕ್ ಆಗಿತ್ತು. ನ.18ರಂದು ಸ್ಯಾಟಲೈಟ್ ಫೋನ್ ಬಳಕೆಯಾಗಿರುವುದನ್ನು ಕೇಂದ್ರ ಗುಪ್ತಚರ ತಂಡಗಳು ಪತ್ತೆ ಮಾಡಿವೆ. ಆ ಸಂದರ್ಭದಲ್ಲಿ ಬಂಟ್ವಾಳ ತಾಲೂಕಿನ ಕಾಕುಂಜೆ ಎನ್ನುವ ಕಾಡು ಪ್ರದೇಶದಲ್ಲಿ ಸ್ಯಾಟಲೈಟ್ ಫೋನ್ ವರ್ಕ್ ಆಗಿತ್ತು. ಕಳೆದ ಜೂನ್ ತಿಂಗಳಲ್ಲಿ ಕರಾವಳಿ ಮತ್ತು ಮಲೆನಾಡಿನ ನಾಲ್ಕೈದು ಕಡೆಗಳಲ್ಲಿ ಸ್ಯಾಟಲೈಟ್ ಫೋನ್ ವರ್ಕ್ ಆಗಿರುವುದು ಪತ್ತೆಯಾಗಿತ್ತು. ಮಂಗಳೂರಿನ ಹೊರವಲಯ ಕುಳಾಯಿ, ಕೋಣಾಜೆ ಬಳಿಯ ನಾಟೆಕಲ್, ಶಿರಸಿ ಬಳಿಯ ಯಲ್ಲಾಪುರದಲ್ಲಿ ನಿಷೇಧಿತ ಫೋನ್ ಸಂಪರ್ಕ ಆಗಿದ್ದನ್ನು ಪತ್ತೆ ಮಾಡಲಾಗಿತ್ತು. ಈ ಬಗ್ಗೆ ತನಿಖೆ ನಡೆಸಿದ್ದ ತನಿಖಾ ಏಜನ್ಸಿಗಳು ಯಾವುದೇ ಖಚಿತ ಮಾಹಿತಿಯನ್ನು ಪತ್ತೆ ಮಾಡಲು ಸಾಧ್ಯವಾಗಿರಲಿಲ್ಲ.
Satellite phone signals were detected in the border areas of Karnataka and Kerala on Thursday. This has caused concern as NIA arrested two students in connection with the cooker bomb blast on the same day itself.Satellite phones were found to be active in border areas of Kasaragod and Panaje. The Central Intelligence department has detected the signals. Kerala special branch police and cops of the Dakshina Kannada district are investigating further.
05-09-26 04:53 pm
HK News Staffer
400 ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ; ಪ್ರತಿ ಹ...
02-09-26 05:06 pm
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
ADGP Chandrashekhar, Seemanth Kumar Singh: ಅಧ...
30-08-26 07:31 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
05-09-26 04:58 pm
HK News Staffer
ಬೆಂಗಳೂರು-ಮಂಗಳೂರು ವಂದೇ ಭಾರತ್ಗೆ ಮತ್ತೊಂದು ಟೆಸ್ಟ...
05-09-26 11:59 am
ಕೆಆರ್ ಐಡಿಎಲ್ ಕಮಿಷನ್ ಆರೋಪದಿಂದ ಮಾನಸಿಕ ಕಿರುಕುಳ,...
04-09-26 04:44 pm
Blinkit Raid, Mangalore: ಬ್ಲಿಂಕ್ ಇಟ್ ಆನ್ಲೈನ್...
03-09-26 10:19 pm
ಮುಂದಿನ ಬಾರಿ ಅಶೋಕ ರೈ ವಿರುದ್ಧ ತಾನೇ ಸ್ಪರ್ಧಿಸುತ್ತ...
03-09-26 09:10 pm
05-09-26 08:58 pm
HK News Staffer
ಶಿವಮೊಗ್ಗ ; ಕಾರಿನಲ್ಲಿ ಜಿಂಕೆ ಮಾಂಸ ಮಾರಾಟ ಯತ್ನ ;...
05-09-26 04:55 pm
ಬಡ್ಡಿ ಕಟ್ಟದಿದ್ದಕ್ಕೆ ಮಹಿಳೆಯನ್ನು ಅಪಹರಿಸಿ ಹಲ್ಲೆ...
05-09-26 03:08 pm
ಅಷ್ಟಮಿ ಭಜನಾ ಕಾರ್ಯಕ್ರಮದಲ್ಲಿ ಹೃದಯಾಘಾತ ; ತೊಕ್ಕೂರ...
05-09-26 02:04 pm
ತ್ರಿಶೂರ್ ನಲ್ಲಿ ಗುರುವಾಯೂರು ದರ್ಶನ ಮುಗಿಸಿ ಹೊರಟಿದ...
05-09-26 01:13 pm