ಬ್ರೇಕಿಂಗ್ ನ್ಯೂಸ್
07-01-23 10:33 pm Mangalore Correspondent ಕರಾವಳಿ
ಮಂಗಳೂರು, ಜ.7: ಕರಾವಳಿಯಲ್ಲಿ ನಿಷೇಧಿತ ಸ್ಯಾಟಲೈಟ್ ಫೋನ್ ರಿಂಗ್ ಆಗುತ್ತಿರುವುದು ಮೊದಲೇನಲ್ಲ. ಆದರೆ ಈ ಬಾರಿ ಶಿವಮೊಗ್ಗ ಬಾಂಬ್ ಟ್ರಯಲ್ ಪ್ರಕರಣಕ್ಕೆ ಸಂಬಂಧಿಸಿ ಎನ್ಐಎ ಅಧಿಕಾರಿಗಳು ಎರಡು ದಿನಗಳ ಹಿಂದೆ ಮಂಗಳೂರಿನಲ್ಲಿ ಇಂಜಿನಿಯರಿಂಗ್ ವಿದ್ಯಾರ್ಥಿಯನ್ನು ಬಂಧಿಸಿದ ಸಂದರ್ಭದಲ್ಲಿಯೇ ಸ್ಯಾಟಲೈಟ್ ಫೋನ್ ರಿಂಗ್ ಆಗಿದೆ. ಹೀಗಾಗಿ ಇದೊಂದು ಉಗ್ರರ ಜಾಡಿನ ಹೆಜ್ಜೆಯೇ ಎನ್ನುವ ಅನುಮಾನ ವ್ಯಕ್ತವಾಗಿದ್ದು, ಈ ನೆಲೆಯಲ್ಲಿ ಪೊಲೀಸರು ತನಿಖೆ ಆರಂಭಿಸಿದ್ದಾರೆ.
ಕೇರಳ- ಕರ್ನಾಟಕದ ಗಡಿಭಾಗದ ನಿರ್ಜನ ಕಾಡು ಪ್ರದೇಶದಲ್ಲಿ ಈ ಬಾರಿ ಸ್ಯಾಟಲೈಟ್ ಫೋನ್ ಸಕ್ರಿಯವಾಗಿರುವ ಬಗ್ಗೆ ಕೇಂದ್ರೀಯ ತನಿಖಾ ಏಜನ್ಸಿಗಳು ಪತ್ತೆ ಮಾಡಿವೆ. ಪುತ್ತೂರಿನ ಗಡಿಭಾಗ ಪಾಣಾಜೆ ಎಂಬಲ್ಲಿನ ಕಾಡು ಪ್ರದೇಶದಲ್ಲಿ ಸ್ಯಾಟಲೈಟ್ ಫೋನ್ ಸಕ್ರಿಯವಾಗಿದ್ದು, ಯಾರೋ ವಿದೇಶಗಳ ಜೊತೆಗೆ ಸಂಪರ್ಕ ಸಾಧಿಸಿರುವ ಅನುಮಾನ ವ್ಯಕ್ತವಾಗಿದೆ. ಈ ಬಗ್ಗೆ ಕೇರಳ ಸ್ಪೆಷಲ್ ಬ್ರಾಂಚ್ ಪೊಲೀಸರು ಮತ್ತು ದಕ್ಷಿಣ ಕನ್ನಡ ಜಿಲ್ಲೆಯ ಆಂತರಿಕ ಭದ್ರತಾ ವಿಭಾಗದ ಸಿಬಂದಿ ತನಿಖೆ ಆರಂಭಿಸಿದ್ದಾರೆ.
ವಿಶೇಷ ಅಂದ್ರೆ, ಈ ಹಿಂದೆ ಮಂಗಳೂರಿನಲ್ಲಿ ಕುಕ್ಕರ್ ಬಾಂಬ್ ಸ್ಫೋಟ ನಡೆದಿರುವುದಕ್ಕೂ ಹಿಂದಿನ ದಿನ ಸ್ಯಾಟಲೈಟ್ ಫೋನ್ ವರ್ಕ್ ಆಗಿತ್ತು. ನ.18ರಂದು ಸ್ಯಾಟಲೈಟ್ ಫೋನ್ ಬಳಕೆಯಾಗಿರುವುದನ್ನು ಕೇಂದ್ರ ಗುಪ್ತಚರ ತಂಡಗಳು ಪತ್ತೆ ಮಾಡಿವೆ. ಆ ಸಂದರ್ಭದಲ್ಲಿ ಬಂಟ್ವಾಳ ತಾಲೂಕಿನ ಕಾಕುಂಜೆ ಎನ್ನುವ ಕಾಡು ಪ್ರದೇಶದಲ್ಲಿ ಸ್ಯಾಟಲೈಟ್ ಫೋನ್ ವರ್ಕ್ ಆಗಿತ್ತು. ಕಳೆದ ಜೂನ್ ತಿಂಗಳಲ್ಲಿ ಕರಾವಳಿ ಮತ್ತು ಮಲೆನಾಡಿನ ನಾಲ್ಕೈದು ಕಡೆಗಳಲ್ಲಿ ಸ್ಯಾಟಲೈಟ್ ಫೋನ್ ವರ್ಕ್ ಆಗಿರುವುದು ಪತ್ತೆಯಾಗಿತ್ತು. ಮಂಗಳೂರಿನ ಹೊರವಲಯ ಕುಳಾಯಿ, ಕೋಣಾಜೆ ಬಳಿಯ ನಾಟೆಕಲ್, ಶಿರಸಿ ಬಳಿಯ ಯಲ್ಲಾಪುರದಲ್ಲಿ ನಿಷೇಧಿತ ಫೋನ್ ಸಂಪರ್ಕ ಆಗಿದ್ದನ್ನು ಪತ್ತೆ ಮಾಡಲಾಗಿತ್ತು. ಈ ಬಗ್ಗೆ ತನಿಖೆ ನಡೆಸಿದ್ದ ತನಿಖಾ ಏಜನ್ಸಿಗಳು ಯಾವುದೇ ಖಚಿತ ಮಾಹಿತಿಯನ್ನು ಪತ್ತೆ ಮಾಡಲು ಸಾಧ್ಯವಾಗಿರಲಿಲ್ಲ.
Satellite phone signals were detected in the border areas of Karnataka and Kerala on Thursday. This has caused concern as NIA arrested two students in connection with the cooker bomb blast on the same day itself.Satellite phones were found to be active in border areas of Kasaragod and Panaje. The Central Intelligence department has detected the signals. Kerala special branch police and cops of the Dakshina Kannada district are investigating further.
19-12-25 10:03 pm
HK News Desk
ಪ್ರೀತ್ಸೆ ಪ್ರೀತ್ಸೆ ಎಂದು ಪೊಲೀಸ್ ಅಧಿಕಾರಿ ಹಿಂದೆ ಬ...
19-12-25 01:41 pm
ಡಿಸಿಎಂ ಡಿಕೆಶಿ ಆಪ್ತ ಕಾರ್ಯದರ್ಶಿ ಕಾರು ಅಪಘಾತ ; ಬೈ...
18-12-25 11:05 pm
Byrathi Suresh, Mangalore, Karavali: 'ಕರಾವಳಿಗ...
18-12-25 08:40 pm
ಪರಮೇಶ್ವರ್ ಸಿಎಂ ಆಗಲೆಂದು ಒಕ್ಕಲಿಗ, ಲಿಂಗಾಯತ, ದಲಿತ...
18-12-25 04:31 pm
19-12-25 02:40 pm
HK News Desk
ಜೆಡ್ಡಾದಿಂದ ಕೋಝಿಕ್ಕೋಡ್ ತೆರಳುತ್ತಿದ್ದ ಏರ್ ಇಂಡಿಯ...
18-12-25 04:34 pm
ಸಮವಸ್ತ್ರ ಕಳಪೆಯೆಂದು ಸಹಪಾಠಿಗಳ ಅಣಕ ; ನೊಂದ ನಾಲ್ಕನ...
17-12-25 10:27 pm
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
19-12-25 09:46 pm
Mangalore Correspondent
ಮಹಾನಗರ ಪಾಲಿಕೆ ಪೌರ ಕಾರ್ಮಿಕರ ಖಾಯಮಾತಿಗೆ ಆಗ್ರಹ ;...
19-12-25 08:22 pm
APK File, RTO challan Scam, Mangalore: ಟ್ರಾಫಿ...
19-12-25 04:43 pm
11 ವರ್ಷ ಹಿಂದಿನ ಅಪಘಾತ ಕೇಸಿನಲ್ಲಿ ಆರೋಪಿಗೆ ಸಜೆ, 2...
18-12-25 10:51 pm
ಬಜ್ಪೆ ಪೊಲೀಸರ ಬಗ್ಗೆ ಅವಹೇಳನ, ಆರೋಪಿಗಳಿಗೆ ರಾಜಾತಿಥ...
18-12-25 10:24 pm
18-12-25 04:53 pm
Mangaluru Correspondent
ಫ್ಲಾಟ್, ಜಾಗವನ್ನು ಮಾರಾಟ ಮಾಡಿ ಸೈಬರ್ ವಂಚಕರಿಗೆ 2...
17-12-25 11:14 am
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm