ಬ್ರೇಕಿಂಗ್ ನ್ಯೂಸ್
08-01-23 04:09 pm Mangalore Correspondent ಕರಾವಳಿ
ಉಳ್ಳಾಲ, ಜ.8 : ನಿನ್ನೆ ರಾತ್ರಿ ಕುತ್ತಾರಿನಲ್ಲಿ ನಡೆದ ರಸ್ತೆ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಯುವಕನ ಮೆದುಳು ನಿಷ್ಕ್ರಿಯಗೊಂಡಿದ್ದು ಕುಟುಂಬಸ್ಥರು ಅಂಗಾಗ ದಾನಕ್ಕೆ ಚಿಂತನೆ ನಡೆಸಿದ್ದಾರೆ. ತಂದೆ ಮೃತಪಟ್ಟ ಕೆಲವೇ ತಿಂಗಳಲ್ಲಿ ಎದುರಾದ ದುರಂತಕ್ಕೆ ಕುಟುಂಬಸ್ಥರು ಚಿಂತಾಕ್ರಾಂತರಾಗಿದ್ದಾರೆ.
ತೊಕ್ಕೊಟ್ಟು ಕೆರೆಬೈಲ್ ನಿವಾಸಿ ಭೂಷಣ್ ರೈ (21) ಮೆದುಳು ನಿಷ್ಕ್ರಿಯಗೊಂಡ ಯುವಕ. ನಿನ್ನೆ ರಾತ್ರಿ ಭೂಷಣ್ ಕಲ್ಲಾಪಿನ ಬುರ್ದುಗೋಳಿಯ ಕೊರಗಜ್ಜ- ಗುಳಿಗಜ್ಜ ದೈವದ ವಾರ್ಷಿಕ ಕೋಲದಲ್ಲಿ ಭಾಗವಹಿಸಿ ಸ್ನೇಹಿತನ ಬೈಕಿನಲ್ಲಿ ಕುತ್ತಾರು ಕಡೆ ತೆರಳುತ್ತಿದ್ದ ವೇಳೆ ರಸ್ತೆ ವಿಭಜಕಕ್ಕೆ ಬೈಕ್ ಢಿಕ್ಕಿ ಹೊಡೆದಿದೆ. ಸಹ ಸವಾರನಾಗಿದ್ದ ಭೂಷಣ್ ಗಂಭೀರ ಗಾಯಗೊಂಡಿದ್ದು ಆತನನ್ನ ದೇರಳಕಟ್ಟೆಯ ಯೆನೆಪೋಯ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಇಂದು ಬೆಳಗ್ಗೆ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಕೆಎಂಸಿ ಆಸ್ಪತ್ರೆಗೆ ಭೂಷಣ್ ನನ್ನು ಸೇರಿಸಿದ್ದು ಅಲ್ಲಿನ ವೈದ್ಯರು ಪರೀಕ್ಷಿಸಿದ ವೈದ್ಯರು ಮೆದುಳು ನಿಷ್ಕ್ರಿಯ ಆಗಿರುವುದಾಗಿ ಹೇಳಿದ್ದಾರೆ. ಹೀಗಾಗಿ ಕುಟುಂಬಸ್ಥರು ಭೂಷಣ್ ಅಂಗಾಂಗ ದಾನಕ್ಕೆ ಚಿಂತನೆ ನಡೆಸಿದ್ದಾರೆ.

ಕಳೆದ ಆಗಸ್ಟ್ 6 ರಂದು ಭೂಷಣ್ ತಂದೆ ಹಿಂದು ಯುವ ಸೇನೆ ಮುಖಂಡರಾಗಿದ್ದ ಮಾರಪ್ಪ ರೈ ಅಲ್ಪಕಾಲದ ಅಸೌಖ್ಯದಿಂದ ಸಾವನ್ನಪ್ಪಿದ್ದರು. ಕಳೆದ 15 ದಿವಸಗಳ ಹಿಂದಷ್ಟೆ ಭೂಷಣ್ ಸಹೋದರಿಯ ವಿವಾಹ ನಡೆದಿತ್ತು. ಇದೀಗ ಮತ್ತೊಬ್ಬ ಮಗ ವಿಧಿವಶನಾಗಿದ್ದಾನೆ.
Mangalore Bike hits divider, 21 year old youth Bushan Rai brain dead, plans for organ donation. A few months ago his father had died of serious illness.
19-12-25 10:03 pm
HK News Desk
ಪ್ರೀತ್ಸೆ ಪ್ರೀತ್ಸೆ ಎಂದು ಪೊಲೀಸ್ ಅಧಿಕಾರಿ ಹಿಂದೆ ಬ...
19-12-25 01:41 pm
ಡಿಸಿಎಂ ಡಿಕೆಶಿ ಆಪ್ತ ಕಾರ್ಯದರ್ಶಿ ಕಾರು ಅಪಘಾತ ; ಬೈ...
18-12-25 11:05 pm
Byrathi Suresh, Mangalore, Karavali: 'ಕರಾವಳಿಗ...
18-12-25 08:40 pm
ಪರಮೇಶ್ವರ್ ಸಿಎಂ ಆಗಲೆಂದು ಒಕ್ಕಲಿಗ, ಲಿಂಗಾಯತ, ದಲಿತ...
18-12-25 04:31 pm
19-12-25 02:40 pm
HK News Desk
ಜೆಡ್ಡಾದಿಂದ ಕೋಝಿಕ್ಕೋಡ್ ತೆರಳುತ್ತಿದ್ದ ಏರ್ ಇಂಡಿಯ...
18-12-25 04:34 pm
ಸಮವಸ್ತ್ರ ಕಳಪೆಯೆಂದು ಸಹಪಾಠಿಗಳ ಅಣಕ ; ನೊಂದ ನಾಲ್ಕನ...
17-12-25 10:27 pm
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
19-12-25 09:46 pm
Mangalore Correspondent
ಮಹಾನಗರ ಪಾಲಿಕೆ ಪೌರ ಕಾರ್ಮಿಕರ ಖಾಯಮಾತಿಗೆ ಆಗ್ರಹ ;...
19-12-25 08:22 pm
APK File, RTO challan Scam, Mangalore: ಟ್ರಾಫಿ...
19-12-25 04:43 pm
11 ವರ್ಷ ಹಿಂದಿನ ಅಪಘಾತ ಕೇಸಿನಲ್ಲಿ ಆರೋಪಿಗೆ ಸಜೆ, 2...
18-12-25 10:51 pm
ಬಜ್ಪೆ ಪೊಲೀಸರ ಬಗ್ಗೆ ಅವಹೇಳನ, ಆರೋಪಿಗಳಿಗೆ ರಾಜಾತಿಥ...
18-12-25 10:24 pm
18-12-25 04:53 pm
Mangaluru Correspondent
ಫ್ಲಾಟ್, ಜಾಗವನ್ನು ಮಾರಾಟ ಮಾಡಿ ಸೈಬರ್ ವಂಚಕರಿಗೆ 2...
17-12-25 11:14 am
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm