ಬ್ರೇಕಿಂಗ್ ನ್ಯೂಸ್
08-01-23 04:09 pm Mangalore Correspondent ಕರಾವಳಿ
ಉಳ್ಳಾಲ, ಜ.8 : ನಿನ್ನೆ ರಾತ್ರಿ ಕುತ್ತಾರಿನಲ್ಲಿ ನಡೆದ ರಸ್ತೆ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಯುವಕನ ಮೆದುಳು ನಿಷ್ಕ್ರಿಯಗೊಂಡಿದ್ದು ಕುಟುಂಬಸ್ಥರು ಅಂಗಾಗ ದಾನಕ್ಕೆ ಚಿಂತನೆ ನಡೆಸಿದ್ದಾರೆ. ತಂದೆ ಮೃತಪಟ್ಟ ಕೆಲವೇ ತಿಂಗಳಲ್ಲಿ ಎದುರಾದ ದುರಂತಕ್ಕೆ ಕುಟುಂಬಸ್ಥರು ಚಿಂತಾಕ್ರಾಂತರಾಗಿದ್ದಾರೆ.
ತೊಕ್ಕೊಟ್ಟು ಕೆರೆಬೈಲ್ ನಿವಾಸಿ ಭೂಷಣ್ ರೈ (21) ಮೆದುಳು ನಿಷ್ಕ್ರಿಯಗೊಂಡ ಯುವಕ. ನಿನ್ನೆ ರಾತ್ರಿ ಭೂಷಣ್ ಕಲ್ಲಾಪಿನ ಬುರ್ದುಗೋಳಿಯ ಕೊರಗಜ್ಜ- ಗುಳಿಗಜ್ಜ ದೈವದ ವಾರ್ಷಿಕ ಕೋಲದಲ್ಲಿ ಭಾಗವಹಿಸಿ ಸ್ನೇಹಿತನ ಬೈಕಿನಲ್ಲಿ ಕುತ್ತಾರು ಕಡೆ ತೆರಳುತ್ತಿದ್ದ ವೇಳೆ ರಸ್ತೆ ವಿಭಜಕಕ್ಕೆ ಬೈಕ್ ಢಿಕ್ಕಿ ಹೊಡೆದಿದೆ. ಸಹ ಸವಾರನಾಗಿದ್ದ ಭೂಷಣ್ ಗಂಭೀರ ಗಾಯಗೊಂಡಿದ್ದು ಆತನನ್ನ ದೇರಳಕಟ್ಟೆಯ ಯೆನೆಪೋಯ ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಇಂದು ಬೆಳಗ್ಗೆ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಕೆಎಂಸಿ ಆಸ್ಪತ್ರೆಗೆ ಭೂಷಣ್ ನನ್ನು ಸೇರಿಸಿದ್ದು ಅಲ್ಲಿನ ವೈದ್ಯರು ಪರೀಕ್ಷಿಸಿದ ವೈದ್ಯರು ಮೆದುಳು ನಿಷ್ಕ್ರಿಯ ಆಗಿರುವುದಾಗಿ ಹೇಳಿದ್ದಾರೆ. ಹೀಗಾಗಿ ಕುಟುಂಬಸ್ಥರು ಭೂಷಣ್ ಅಂಗಾಂಗ ದಾನಕ್ಕೆ ಚಿಂತನೆ ನಡೆಸಿದ್ದಾರೆ.
ಕಳೆದ ಆಗಸ್ಟ್ 6 ರಂದು ಭೂಷಣ್ ತಂದೆ ಹಿಂದು ಯುವ ಸೇನೆ ಮುಖಂಡರಾಗಿದ್ದ ಮಾರಪ್ಪ ರೈ ಅಲ್ಪಕಾಲದ ಅಸೌಖ್ಯದಿಂದ ಸಾವನ್ನಪ್ಪಿದ್ದರು. ಕಳೆದ 15 ದಿವಸಗಳ ಹಿಂದಷ್ಟೆ ಭೂಷಣ್ ಸಹೋದರಿಯ ವಿವಾಹ ನಡೆದಿತ್ತು. ಇದೀಗ ಮತ್ತೊಬ್ಬ ಮಗ ವಿಧಿವಶನಾಗಿದ್ದಾನೆ.
Mangalore Bike hits divider, 21 year old youth Bushan Rai brain dead, plans for organ donation. A few months ago his father had died of serious illness.
26-04-24 06:14 pm
HK News Desk
Chamarajanagar, villagers, Booth: ಮತದಾನ ಬಹಿಷ್...
26-04-24 04:53 pm
ಚಿತ್ರದುರ್ಗ ; ಲೋ ಬಿಪಿಯಿಂದ ಅಸ್ವಸ್ಥ , ಮತಗಟ್ಟೆಯಲ್...
26-04-24 03:04 pm
Income tax raid, BJP leader, Bangalore: ಬಿಜೆಪ...
25-04-24 11:07 pm
Cm Siddaramaiah Neha house visit: ಹುಬ್ಬಳ್ಳಿ ;...
25-04-24 10:57 pm
26-04-24 02:58 pm
HK News Desk
Road Accident In Telangana: ಹಾಳಾಗಿ ನಿಂತಿದ್ದ ಲ...
25-04-24 03:49 pm
Groom electrocuted in Rajasthan: ರೆಸಾರ್ಟ್ ನಲ್...
24-04-24 05:01 pm
Pm Modi, Muslims: ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ...
22-04-24 10:37 pm
ಮದುವೆ ಮುಗಿಸಿ ವಾಪಾಸ್ ಆಗುವ ವೇಳೆ ಭೀಕರ ಅಪಘಾತ ; ಓ...
21-04-24 03:23 pm
26-04-24 08:42 pm
Mangalore Correspondent
Mangalore live voting percentage: ದಕ್ಷಿಣ ಕನ್ನ...
26-04-24 05:56 pm
Mangalore Live Voting: ದಕ್ಷಿಣ ಕನ್ನಡ ಕ್ಷೇತ್ರ ;...
26-04-24 04:20 pm
Udupi Adamaru swamiji: ದೇಶಕ್ಕೆ ಸ್ವಾತಂತ್ರ್ಯ ಸಿ...
26-04-24 03:48 pm
Mangalore voting live: ದಕ್ಷಿಣ ಕನ್ನಡ ಕ್ಷೇತ್ರ ;...
26-04-24 02:18 pm
26-04-24 03:59 pm
Mangalore Correspondent
Mangalore Fraud, crime, Krishnaprasad Shetty:...
25-04-24 10:18 pm
Bangalore crime, Dacoity gang, 40 lakhs, robb...
25-04-24 03:33 pm
Gang raped in Bengaluru: ಬೆಂಗಳೂರಿನಲ್ಲಿ ಯುವತಿ...
25-04-24 12:19 pm
Glide touist bus, Mangalore, crime: ಬೆಂಗಳೂರು...
24-04-24 10:48 pm