ಬ್ರೇಕಿಂಗ್ ನ್ಯೂಸ್
08-01-23 04:09 pm Mangalore Correspondent ಕರಾವಳಿ
ಉಳ್ಳಾಲ, ಜ.8 : ನಿನ್ನೆ ರಾತ್ರಿ ಕುತ್ತಾರಿನಲ್ಲಿ ನಡೆದ ರಸ್ತೆ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಯುವಕನ ಮೆದುಳು ನಿಷ್ಕ್ರಿಯಗೊಂಡಿದ್ದು ಕುಟುಂಬಸ್ಥರು ಅಂಗಾಗ ದಾನಕ್ಕೆ ಚಿಂತನೆ ನಡೆಸಿದ್ದಾರೆ. ತಂದೆ ಮೃತಪಟ್ಟ ಕೆಲವೇ ತಿಂಗಳಲ್ಲಿ ಎದುರಾದ ದುರಂತಕ್ಕೆ ಕುಟುಂಬಸ್ಥರು ಚಿಂತಾಕ್ರಾಂತರಾಗಿದ್ದಾರೆ.
ತೊಕ್ಕೊಟ್ಟು ಕೆರೆಬೈಲ್ ನಿವಾಸಿ ಭೂಷಣ್ ರೈ (21) ಮೆದುಳು ನಿಷ್ಕ್ರಿಯಗೊಂಡ ಯುವಕ. ನಿನ್ನೆ ರಾತ್ರಿ ಭೂಷಣ್ ಕಲ್ಲಾಪಿನ ಬುರ್ದುಗೋಳಿಯ ಕೊರಗಜ್ಜ- ಗುಳಿಗಜ್ಜ ದೈವದ ವಾರ್ಷಿಕ ಕೋಲದಲ್ಲಿ ಭಾಗವಹಿಸಿ ಸ್ನೇಹಿತನ ಬೈಕಿನಲ್ಲಿ ಕುತ್ತಾರು ಕಡೆ ತೆರಳುತ್ತಿದ್ದ ವೇಳೆ ರಸ್ತೆ ವಿಭಜಕಕ್ಕೆ ಬೈಕ್ ಢಿಕ್ಕಿ ಹೊಡೆದಿದೆ. ಸಹ ಸವಾರನಾಗಿದ್ದ ಭೂಷಣ್ ಗಂಭೀರ ಗಾಯಗೊಂಡಿದ್ದು ಆತನನ್ನ ದೇರಳಕಟ್ಟೆಯ ಯೆನೆಪೋಯ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಇಂದು ಬೆಳಗ್ಗೆ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಕೆಎಂಸಿ ಆಸ್ಪತ್ರೆಗೆ ಭೂಷಣ್ ನನ್ನು ಸೇರಿಸಿದ್ದು ಅಲ್ಲಿನ ವೈದ್ಯರು ಪರೀಕ್ಷಿಸಿದ ವೈದ್ಯರು ಮೆದುಳು ನಿಷ್ಕ್ರಿಯ ಆಗಿರುವುದಾಗಿ ಹೇಳಿದ್ದಾರೆ. ಹೀಗಾಗಿ ಕುಟುಂಬಸ್ಥರು ಭೂಷಣ್ ಅಂಗಾಂಗ ದಾನಕ್ಕೆ ಚಿಂತನೆ ನಡೆಸಿದ್ದಾರೆ.

ಕಳೆದ ಆಗಸ್ಟ್ 6 ರಂದು ಭೂಷಣ್ ತಂದೆ ಹಿಂದು ಯುವ ಸೇನೆ ಮುಖಂಡರಾಗಿದ್ದ ಮಾರಪ್ಪ ರೈ ಅಲ್ಪಕಾಲದ ಅಸೌಖ್ಯದಿಂದ ಸಾವನ್ನಪ್ಪಿದ್ದರು. ಕಳೆದ 15 ದಿವಸಗಳ ಹಿಂದಷ್ಟೆ ಭೂಷಣ್ ಸಹೋದರಿಯ ವಿವಾಹ ನಡೆದಿತ್ತು. ಇದೀಗ ಮತ್ತೊಬ್ಬ ಮಗ ವಿಧಿವಶನಾಗಿದ್ದಾನೆ.
Mangalore Bike hits divider, 21 year old youth Bushan Rai brain dead, plans for organ donation. A few months ago his father had died of serious illness.
04-11-25 04:38 pm
Bangalore Correspondent
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
04-11-25 10:51 pm
Mangalore Correspondent
Mangalore Police, Panambur Beach: ಗಂಡ - ಹೆಂಡತ...
04-11-25 08:37 pm
ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ಹಣಕ್ಕಾಗಿ...
04-11-25 06:15 pm
ವ್ಯಾಟಿಕನ್ ಸಿಟಿಯ ಭಾರತದ ರಾಯಭಾರಿ ಆ್ಯಂಡ್ರಿಯಾ ಫಾನ್...
04-11-25 05:06 pm
ಧರ್ಮಸ್ಥಳ ಪ್ರಕರಣ ; ಎಸ್ಐಟಿ ತನಿಖಾ ಪ್ರಕ್ರಿಯೆಗೆ ಮಹ...
04-11-25 05:03 pm
04-11-25 02:11 pm
Mangalore Correspondent
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm