ಬ್ರೇಕಿಂಗ್ ನ್ಯೂಸ್
17-10-20 02:22 pm Mangalore Correspondent | Photo - Punik Shetty ಕರಾವಳಿ
ಮಂಗಳೂರು, ಅಕ್ಟೋಬರ್ 17: ಮಂಗಳೂರು ದಸರಾ ಎಂದೇ ಪ್ರಸಿದ್ಧಿ ಗಳಿಸಿರುವ ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ದಸರಾ ಉತ್ಸವಕ್ಕೆ ಎನ್ಆರ್ ಐ ಫೋರಂ ಘಟಕದ ಮಾಜಿ ಉಪಾಧ್ಯಕ್ಷೆ ಡಾ. ಆರತಿ ಕೃಷ್ಣ ಚಾಲನೆ ನೀಡಿದರು.

ಕೊರೊನಾ ನಿರ್ಬಂಧಗಳ ನಡುವೆ, ಸಾಂಪ್ರದಾಯಿಕ ಉತ್ಸವಕ್ಕೆ ಅನುಮತಿ ನೀಡಬೇಕೆಂಬ ನೆಲೆಯಲ್ಲಿ ಜಿಲ್ಲಾಡಳಿತ ದಸರಾ ಉತ್ಸವಕ್ಕೆ ಅವಕಾಶ ನೀಡಿದೆ. ಅದರಂತೆ, ಕುದ್ರೋಳಿ ದೇವಸ್ಥಾನ ಆಡಳಿತ ಸಂಪ್ರದಾಯಕ್ಕೆ ಚ್ಯುತಿ ಬರದಂತೆ ಉತ್ಸವ ಆಚರಿಸಲು ವ್ಯವಸ್ಥೆ ಮಾಡಿಕೊಂಡಿದೆ. ನವರಾತ್ರಿ ಮೊದಲ ದಿವಸವಾದ ಇಂದು ಶಾರದೆ ಹಾಗೂ ನವದುರ್ಗೆಯರ ವಿಗ್ರಹಗಳನ್ನು ಪ್ರತಿಷ್ಠೆ ಮಾಡಲಾಗಿದೆ. ಶಾರದೆ ಮೂರ್ತಿಯ ಮುಂದೆ ದೀಪ ಬೆಳಗಿಸಿ, ಉತ್ಸವಕ್ಕೆ ಸಾಂಪ್ರದಾಯಿಕ ಶೈಲಿಯಲ್ಲಿ ಆರತಿ ಕೃಷ್ಣ ಚಾಲನೆ ನೀಡಿದರು. ಈ ವೇಳೆ, ಕುದ್ರೋಳಿ ದೇವಸ್ಥಾನ ಆಡಳಿತ ಕಮಿಟಿ ಸದಸ್ಯರು ಸೇರಿದಂತೆ ಸೀಮಿತ ಸಂಖ್ಯೆಯಲ್ಲಿ ಜನ ಭಾಗವಹಿಸಿದ್ದರು. ಕಾಂಗ್ರೆಸ್ ಜಿಲ್ಲಾಧ್ಯಕ್ಷ ಹರೀಶ್ ಕುಮಾರ್, ಕಿಯೋನಿಕ್ಸ್ ನಿಗಮದ ಅಧ್ಯಕ್ಷ ಹರಿಕೃಷ್ಣ ಬಂಟ್ವಾಳ್ ಉಪಸ್ಥಿತರಿದ್ದರು.






ಉಳಿದಂತೆ, ದೇವಸ್ಥಾನಕ್ಕೆ ಆಗಮಿಸುವ ಭಕ್ತರಿಗೆ ಕಟ್ಟುನಿಟ್ಟಿನ ವ್ಯವಸ್ಥೆ ಮಾಡಲಾಗಿದೆ. ದೇವಸ್ಥಾನದ ಮುಂದಿನ ದ್ವಾರದಲ್ಲಿ ಸ್ಕ್ಯಾನರ್ ಅಳವಡಿಸಿದ್ದು, ತಪಾಸಣೆ ನಡೆಸಿಯೇ ಒಳಬಿಡಲಾಗುತ್ತಿದೆ. ಇನ್ನು ಮಾಸ್ಕ್ ಹಾಕಿದವರನ್ನು ಮಾತ್ರ ಪ್ರವೇಶಕ್ಕೆ ಅನುಮತಿ ನೀಡಲಾಗಿದೆ. ಪ್ರವೇಶ ದ್ವಾರದಲ್ಲಿ ಸ್ಯಾನಿಟೈಸರ್ ಇಟ್ಟಿದ್ದು, ಭಕ್ತರ ಕೈಗೆ ಸ್ಯಾನಿಟೈಸ್ ಮಾಡಲು ಸ್ವಯಂಸೇವಕರನ್ನು ವ್ಯವಸ್ಥೆ ಮಾಡಲಾಗಿದೆ. ಅಲ್ಲದೆ, ದೇವಸ್ಥಾನ ಒಳಭಾಗದಲ್ಲಿ ಹಗ್ಗದಿಂದ ಕಟ್ಟಲಾಗಿದ್ದು, ಯಾವುದೇ ರೀತಿಯಲ್ಲೂ ಅತ್ತಿತ್ತ ತಿರುಗಾಡುವಂತಿಲ್ಲ. ಶಾರದಾ ಮಂಟಪ, ದೇವಸ್ಥಾನಕ್ಕೆ ತೆರಳಿ ನಿರ್ಗಮನ ದ್ವಾರದ ಮೂಲಕ ಹೊರಬರಬೇಕು.
ಮಧ್ಯಾಹ್ನ ಹೊತ್ತಿಗೆ ಬರುವ ಭಕ್ತರಿಗೆ ಊಟದ ಪ್ಯಾಕೇಜ್ ನೀಡಲು ವ್ಯವಸ್ಥೆ ಮಾಡಲಾಗಿದೆ. ಮೊದಲ ದಿನವಾದ ಶನಿವಾರ ಸೀಮಿತ ಸಂಖ್ಯೆಯಲ್ಲಿ ಭಕ್ತರು ದೇವಸ್ಥಾನಕ್ಕೆ ಬಂದಿದ್ದರು.
Photo Credit: Punik Shetty
Covid warrior Dr Arathi Krishna Inaugurated Mangalore Dasara 2020 here at Kudroli Temple on Saturday October 2017.
06-02-26 12:30 pm
Bangalore Correspondent
ಭವಿಷ್ಯ ಹೇಳುವ ನೆಪದಲ್ಲಿ ಬೇಟೆ? ರೀಲ್ಸ್ ರಾಣಿಯ ಹಿಂದ...
05-02-26 05:52 pm
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
ಹಿಂದಿ ಲ್ಯಾಂಡ್ ಉತ್ತರ ಭಾರತೀಯರು ಮಾತ್ರ ನೈಜ ಇಂಡಿಯನ...
05-02-26 01:15 pm
ಸರ್ಕಾರಿ ಆಸ್ಪತ್ರೆಯಲ್ಲೇ ಔಷಧಿ ಕೊರತೆ ; ಅನುದಾನ ಇಲ್...
05-02-26 10:37 am
06-02-26 10:58 pm
HK News Desk
ಕೊರಿಯನ್ ವೆಬ್ ಸಿರೀಸ್ ವ್ಯಸನ, ತಂದೆಯ ಎರಡು ಕೋಟಿ ಸಾ...
06-02-26 08:47 pm
SBI ಬ್ಯಾಂಕ್ ಕಿತಾಪತಿ ; 2 ಕೋಟಿ ಮೌಲ್ಯದ ಚಿನ್ನ–ಬೆಳ...
06-02-26 08:17 pm
ನೇಪಾಳದ ಗಡಿಯಲ್ಲಿ ಮದುವೆ ದಿಬ್ಬಣ ಕರೆದೊಯ್ಯುತ್ತಿದ್ದ...
06-02-26 07:04 pm
ಮೇಘಾಲಯದಲ್ಲಿ ಕರಾಳ ದುರಂತ ; 'ಅಕ್ರಮ' ಕಲ್ಲಿದ್ದಲು ಗ...
06-02-26 09:54 am
06-02-26 10:56 pm
Mangalore Correspondent
ಡಿಕೆಶಿ ಸಿಎಂ ಆಗಿಯೇ ಪುತ್ತೂರು ಕಾಂಗ್ರೆಸ್ ಕಚೇರಿ ಉದ...
06-02-26 10:42 pm
Veerendra Heggade, Dharmasthala: ಶಿವರಾತ್ರಿಗೆ...
06-02-26 09:01 pm
D k Shivakumar, Mangalore: "ಯತೀಂದ್ರ ಅವರೇ ನಮ್ಮ...
06-02-26 03:09 pm
ನಿರ್ಲಕ್ಷ್ಯದಿಂದ ಹೆದ್ದಾರಿಗೆ ಬೈಕ್ ನುಗ್ಗಿಸಿದ ತ್ರಿ...
06-02-26 01:55 pm
06-02-26 06:36 pm
HK News Desk
ಹುಬ್ಬಳ್ಳಿಯ ಆಟೋ ಚಾಲಕನ ಖಾತೆಯಲ್ಲಿ ಕೋಟ್ಯಂತರ ಹಣದ ವ...
06-02-26 01:36 pm
Manjeshwar Double Murder: ಮಂಜೇಶ್ವರ ; ಪತ್ನಿ ಮೇ...
03-02-26 01:05 pm
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm