ಬ್ರೇಕಿಂಗ್ ನ್ಯೂಸ್
17-10-20 02:22 pm Mangalore Correspondent | Photo - Punik Shetty ಕರಾವಳಿ
ಮಂಗಳೂರು, ಅಕ್ಟೋಬರ್ 17: ಮಂಗಳೂರು ದಸರಾ ಎಂದೇ ಪ್ರಸಿದ್ಧಿ ಗಳಿಸಿರುವ ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ದಸರಾ ಉತ್ಸವಕ್ಕೆ ಎನ್ಆರ್ ಐ ಫೋರಂ ಘಟಕದ ಮಾಜಿ ಉಪಾಧ್ಯಕ್ಷೆ ಡಾ. ಆರತಿ ಕೃಷ್ಣ ಚಾಲನೆ ನೀಡಿದರು.

ಕೊರೊನಾ ನಿರ್ಬಂಧಗಳ ನಡುವೆ, ಸಾಂಪ್ರದಾಯಿಕ ಉತ್ಸವಕ್ಕೆ ಅನುಮತಿ ನೀಡಬೇಕೆಂಬ ನೆಲೆಯಲ್ಲಿ ಜಿಲ್ಲಾಡಳಿತ ದಸರಾ ಉತ್ಸವಕ್ಕೆ ಅವಕಾಶ ನೀಡಿದೆ. ಅದರಂತೆ, ಕುದ್ರೋಳಿ ದೇವಸ್ಥಾನ ಆಡಳಿತ ಸಂಪ್ರದಾಯಕ್ಕೆ ಚ್ಯುತಿ ಬರದಂತೆ ಉತ್ಸವ ಆಚರಿಸಲು ವ್ಯವಸ್ಥೆ ಮಾಡಿಕೊಂಡಿದೆ. ನವರಾತ್ರಿ ಮೊದಲ ದಿವಸವಾದ ಇಂದು ಶಾರದೆ ಹಾಗೂ ನವದುರ್ಗೆಯರ ವಿಗ್ರಹಗಳನ್ನು ಪ್ರತಿಷ್ಠೆ ಮಾಡಲಾಗಿದೆ. ಶಾರದೆ ಮೂರ್ತಿಯ ಮುಂದೆ ದೀಪ ಬೆಳಗಿಸಿ, ಉತ್ಸವಕ್ಕೆ ಸಾಂಪ್ರದಾಯಿಕ ಶೈಲಿಯಲ್ಲಿ ಆರತಿ ಕೃಷ್ಣ ಚಾಲನೆ ನೀಡಿದರು. ಈ ವೇಳೆ, ಕುದ್ರೋಳಿ ದೇವಸ್ಥಾನ ಆಡಳಿತ ಕಮಿಟಿ ಸದಸ್ಯರು ಸೇರಿದಂತೆ ಸೀಮಿತ ಸಂಖ್ಯೆಯಲ್ಲಿ ಜನ ಭಾಗವಹಿಸಿದ್ದರು. ಕಾಂಗ್ರೆಸ್ ಜಿಲ್ಲಾಧ್ಯಕ್ಷ ಹರೀಶ್ ಕುಮಾರ್, ಕಿಯೋನಿಕ್ಸ್ ನಿಗಮದ ಅಧ್ಯಕ್ಷ ಹರಿಕೃಷ್ಣ ಬಂಟ್ವಾಳ್ ಉಪಸ್ಥಿತರಿದ್ದರು.






ಉಳಿದಂತೆ, ದೇವಸ್ಥಾನಕ್ಕೆ ಆಗಮಿಸುವ ಭಕ್ತರಿಗೆ ಕಟ್ಟುನಿಟ್ಟಿನ ವ್ಯವಸ್ಥೆ ಮಾಡಲಾಗಿದೆ. ದೇವಸ್ಥಾನದ ಮುಂದಿನ ದ್ವಾರದಲ್ಲಿ ಸ್ಕ್ಯಾನರ್ ಅಳವಡಿಸಿದ್ದು, ತಪಾಸಣೆ ನಡೆಸಿಯೇ ಒಳಬಿಡಲಾಗುತ್ತಿದೆ. ಇನ್ನು ಮಾಸ್ಕ್ ಹಾಕಿದವರನ್ನು ಮಾತ್ರ ಪ್ರವೇಶಕ್ಕೆ ಅನುಮತಿ ನೀಡಲಾಗಿದೆ. ಪ್ರವೇಶ ದ್ವಾರದಲ್ಲಿ ಸ್ಯಾನಿಟೈಸರ್ ಇಟ್ಟಿದ್ದು, ಭಕ್ತರ ಕೈಗೆ ಸ್ಯಾನಿಟೈಸ್ ಮಾಡಲು ಸ್ವಯಂಸೇವಕರನ್ನು ವ್ಯವಸ್ಥೆ ಮಾಡಲಾಗಿದೆ. ಅಲ್ಲದೆ, ದೇವಸ್ಥಾನ ಒಳಭಾಗದಲ್ಲಿ ಹಗ್ಗದಿಂದ ಕಟ್ಟಲಾಗಿದ್ದು, ಯಾವುದೇ ರೀತಿಯಲ್ಲೂ ಅತ್ತಿತ್ತ ತಿರುಗಾಡುವಂತಿಲ್ಲ. ಶಾರದಾ ಮಂಟಪ, ದೇವಸ್ಥಾನಕ್ಕೆ ತೆರಳಿ ನಿರ್ಗಮನ ದ್ವಾರದ ಮೂಲಕ ಹೊರಬರಬೇಕು.
ಮಧ್ಯಾಹ್ನ ಹೊತ್ತಿಗೆ ಬರುವ ಭಕ್ತರಿಗೆ ಊಟದ ಪ್ಯಾಕೇಜ್ ನೀಡಲು ವ್ಯವಸ್ಥೆ ಮಾಡಲಾಗಿದೆ. ಮೊದಲ ದಿನವಾದ ಶನಿವಾರ ಸೀಮಿತ ಸಂಖ್ಯೆಯಲ್ಲಿ ಭಕ್ತರು ದೇವಸ್ಥಾನಕ್ಕೆ ಬಂದಿದ್ದರು.
Photo Credit: Punik Shetty
Covid warrior Dr Arathi Krishna Inaugurated Mangalore Dasara 2020 here at Kudroli Temple on Saturday October 2017.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 02:55 pm
HK News Staffer
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
25-08-26 12:46 pm
HK News Staffer
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am
ಪಡಿತರ ಅಕ್ಕಿ ಸಾಗಾಟದ ಲಾರಿಗೆ ಸ್ಕೂಟರ್ ಢಿಕ್ಕಿ! ಸಚಿ...
24-08-26 09:06 pm
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm