ಬ್ರೇಕಿಂಗ್ ನ್ಯೂಸ್
17-10-20 06:25 pm Udupi Correspondent ಕರಾವಳಿ
ಉಡುಪಿ, ಅಕ್ಟೋಬರ್ 17: ಡ್ರಗ್ಸ್ ಜಾಲ ವಿರುದ್ಧ ಉಡುಪಿಯಲ್ಲೂ ಪೊಲೀಸರು ಬೇಟೆ ಆರಂಭಿಸಿದ್ದಾರೆ. ನಶೆಮುಕ್ತ ಜಿಲ್ಲೆ ನಿರ್ಮಾಣಕ್ಕಾಗಿ ಪೊಲೀಸರು ಅಭಿಯಾನ ಆರಂಭಿಸಿದ್ದು, ನಾಲ್ವರನ್ನು ಬಂಧಿಸಿದ್ದು 73.39 ಲಕ್ಷ ಮೌಲ್ಯದ ಡ್ರಗ್ಸ್ ವಶಪಡಿಸಿದ್ದಾರೆ.
ಈ ಬಗ್ಗೆ ಉಡುಪಿ ಎಸ್ಪಿ ಎನ್. ವಿಷ್ಣುವರ್ಧನ್ ಮಾಧ್ಯಮಕ್ಕೆ ಮಾಹಿತಿ ನೀಡಿದ್ದಾರೆ. ಡಾರ್ಕ್ ವೆಬ್ ನೆಟ್ವರ್ಕ್ ಮೂಲಕ ಡ್ರಗ್ ಖರೀದಿ ಮಾಡುತ್ತಿದ್ದರು. ಅದಕ್ಕಾಗಿ ಬಿಟ್ ಕಾಯಿನ್ ಖರೀದಿಸಿ, ಡಾರ್ಕ್ ವೆಬ್ ನಲ್ಲಿ ಯುರೋಪ್ ರಾಷ್ಟ್ರಗಳಿಂದ ಡ್ರಗ್ ತರಿಸುತ್ತಿದ್ದರು. ಎಎಸ್ಪಿ ಕುಮಾರಚಂದ್ರ ನೇತೃತ್ವದಲ್ಲಿ ಡ್ರಗ್ ವಿರುದ್ಧ ಕಾರ್ಯಾಚರಣೆಗಾಗಿ ವಿಶೇಷ ತಂಡ ರಚಿಸಲಾಗಿದ್ದು ಇದೇ ಮೊದಲ ಬಾರಿಗೆ ದೊಡ್ಡ ಮಟ್ಟದ ಸಿಂಥೆಟಿಕ್ ಡ್ರಗ್ ವಶಕ್ಕೆ ಪಡೆಯಲಾಗಿದೆ. ಕಳೆದ ಎರಡು ವಾರಗಳಿಂದ ನಡೆದ ಕಾರ್ಯಾಚರಣೆಯಲ್ಲಿ ಓರ್ವ ವಿದ್ಯಾರ್ಥಿನಿ ಸಹಿತ ನಾಲ್ವರನ್ನು ಬಂಧಿಸಲಾಗಿದೆ ಎಂದು ಮಾಹಿತಿ ನೀಡಿದರು.
ಮಣಿಪಾಲ ಸಮೀಪದ ಶಿಂಬ್ರಾದಲ್ಲಿ ಮೊದಲ ಪ್ರಕರಣ ಭೇದಿಸಲಾಗಿತ್ತು. ಆಬಳಿಕ ಬ್ರಹ್ಮಾವರ ಹಾಗೂ ಮಣಿಪಾಲ ಬಳಿ ದಾಳಿ ನಡೆಸಿದ್ದು ಮತ್ತಿಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ. ಆರೋಪಿಗಳಿಂದ ನಿಷೇಧಿತ ಎಂಡಿಎಂಎ 540 ಗ್ರಾಂ ತೂಕದ 1019 ಮಾತ್ರೆಗಳು ( ಮೌಲ್ಯ 30,57,000 ರೂ.), 1000 ಎಲ್ಎಸ್ಡಿ ಸ್ಟ್ಯಾಂಪ್ಸ್ (30,00,000 ರೂ.), 30 ಗ್ರಾಂ ತೂಕದ ಬ್ರೌನ್ ಶುಗರ್ (3,00,000) ಹಾಗೂ 131 ಗ್ರಾಂ. ತೂಕದ ಹೆಚ್ಚು ಗುಣಮಟ್ಟದ ಹೈಡ್ರೋವಿಡ್ ಗಾಂಜಾ (9,82,500 ರೂ.)ವನ್ನು ವಶಪಡಿಸಲಾಗಿದೆ ಎಂದರು.
ಜಿಲ್ಲೆಯ ಪಬ್, ರೆಸ್ಟೋರೆಂಟ್, ಹೋಟೆಲ್ ಸಹಿತ ಜನ ಸೇರುವ ಪ್ರದೇಶಗಳಲ್ಲಿ ನಡೆಯುವ ಪಾರ್ಟಿಗಳಲ್ಲಿ ಮಾದಕ ವಸ್ತು ಬಳಕೆಯಾಗುತ್ತಿರುವ ಬಗ್ಗೆ ಮಾಹಿತಿ ಸಿಕ್ಕಿದೆ. ಈ ಸಂಬಂಧ ಅಬಕಾರಿ ಇಲಾಖೆಯ ಡಿಸಿ ಜೊತೆಗೆ ಸಭೆ ನಡೆಸಿ ಅಗತ್ಯ ಕ್ರಮಕ್ಕೆ ಸೂಚಿಸಿದ್ದೇನೆ. ಈ ಬಗ್ಗೆ ಜಿಲ್ಲಾಕಾರಿಗಳ ಗಮನಕ್ಕೂ ತರಲಾಗಿದೆ ಎಂದರು.
ಸುದ್ದಿಗೋಷ್ಠಿಯಲ್ಲಿ ಎಎಸ್ಪಿ ಕುಮಾರಚಂದ್ರ, ಸಹಾಯಕ ಪೊಲೀಸ್ ಅಧೀಕ್ಷಕ ಹರಿರಾಂ ಶಂಕರ್, ಡಿವೈಎಸ್ಪಿ ಭರತ್ ಎಸ್. ರೆಡ್ಡಿ ಉಪಸ್ಥಿತರಿದ್ದರು.
Udupi district has so far recovered Narcotic drugs worth of Rs 73,39,500 said SP Visnuvardhan. No one involved in the drug trade will be spared he added.
16-09-25 11:00 pm
Bangalore Correspondent
Nanjegowda MLA, Malur: ಮಾಲೂರು ಕಾಂಗ್ರೆಸ್ ಶಾಸಕ...
16-09-25 10:54 pm
Bangalore Suicide, Air force: ಸಹೋದರಿ ಜೊತೆ ಜಗಳ...
15-09-25 08:53 pm
Actor Upendra, Wife Priyanka, Cyber Fraud, Ha...
15-09-25 04:45 pm
Pratap Simha, Banu Mushtaq: ಬಾನು ಮುಷ್ತಾಕ್ ದಸರ...
15-09-25 03:39 pm
16-09-25 10:11 pm
HK News Desk
Cloudburst, Dehradun: ಡೆಹ್ರಾಡೂನ್ನಲ್ಲಿ ಭಾರೀ ಮ...
16-09-25 02:46 pm
Waqf, Supreme Court; ವಕ್ಫ್ ತಿದ್ದುಪಡಿ ಕಾಯ್ದೆ...
15-09-25 04:57 pm
ನಾನು ಶಿವಭಕ್ತ ; ನಿಂದನೆಯ ವಿಷವನ್ನು ಕುಡಿದು ಜೀರ್ಣಿ...
14-09-25 10:49 pm
ಪ್ರಧಾನಿ ಮೋದಿ ಅಸ್ಸಾಂನಲ್ಲಿ ಇರುವಾಗಲೇ 5.8ರ ತೀವ್ರತ...
14-09-25 07:31 pm
16-09-25 07:48 pm
Mangalore Correspondent
Ex IPS Kempaiah, Professor Umeshchandra, Mang...
16-09-25 07:02 pm
Mangalore BJP Protest, UT khader, Red Stone:...
16-09-25 06:51 pm
UT Khader, Mangalore, Ullal: ಉಳ್ಳಾಲ ಕ್ಷೇತ್ರದಲ...
16-09-25 06:06 pm
ಕೆಂಪು ಕಲ್ಲು ನಿಯಮ ಸರಳೀಕರಣಕ್ಕೆ ಸಂಪುಟದಲ್ಲಿ ಒಪ್ಪಿ...
16-09-25 05:12 pm
16-09-25 10:40 pm
HK News Desk
Bidar crime: ಏಳು ವರ್ಷದ ಬಾಲಕಿಯನ್ನ ಮೂರನೇ ಮಹಡಿಯಿ...
16-09-25 07:12 pm
Bangalore Police, Inspector Suspend, Crime, D...
15-09-25 10:47 pm
Udupi, Surat Murder, Arrest: ವೃದ್ಧ ದಂಪತಿಯನ್ನು...
14-09-25 06:01 pm
Mangalore Fake Aadhar, RTC Scam, Police: ಆರೋಪ...
13-09-25 11:36 am