ಬ್ರೇಕಿಂಗ್ ನ್ಯೂಸ್
14-01-23 02:30 pm Mangalore Correspondent ಕರಾವಳಿ
ಮಂಗಳೂರು, ಜ.14 : ಕರಾವಳಿಯಲ್ಲಿ ಮತ್ತೆ ಧರ್ಮ ದಂಗಲ್ ಮುಂದುವರೆಸುವ ಮುನ್ಸೂಚನೆ ಸಿಕ್ಕಿದೆ. ಹಿಂದು ದೇವಸ್ಥಾನಗಳ ಉತ್ಸವಗಳಿಗೆ ಅನ್ಯಧರ್ಮೀಯರನ್ನು ದೂರವಿಡುವ ಯತ್ನವಾಗಿ ಉತ್ಸವ ಸಂದರ್ಭದಲ್ಲಿ ವ್ಯಾಪಾರ ನಿಷೇಧಿಸಿ ಹಿಂದು ಸಂಘಟನೆ ಹೆಸರಲ್ಲಿ ಬ್ಯಾನರ್ ಹಾಕಲಾಗಿದೆ. ಇದೀಗ ಮಂಗಳೂರಿನ ಕಾವೂರು ಮಹಾಲಿಂಗೇಶ್ವರ ದೇವಸ್ಥಾನದ ಉತ್ಸವದಲ್ಲಿ ಹಿಂದು ವ್ಯಾಪಾರಿಗಳಿಗೆ ಮಾತ್ರ ಸಂತೆ ವ್ಯಾಪಾರಕ್ಕೆ ಅವಕಾಶ ಎಂದು ವಿಶ್ವ ಹಿಂದು ಪರಿಷತ್ ಹೆಸರಲ್ಲಿ ಬ್ಯಾನರ್ ಅಳವಡಿಸಲಾಗಿದೆ.
ಜ.14ರ ಮಕರ ಸಂಕ್ರಾಂತಿಯಿಂದ ಕಾವೂರು ಮಹಾಲಿಂಗೇಶ್ವರ ದೇವಸ್ಥಾನದ ಜಾತ್ರೆ ಆರಂಭಗೊಳ್ಳುತ್ತದೆ. ಉತ್ಸವ ಸಂದರ್ಭದಲ್ಲಿ ವಿವಿಧ ಮತ, ಧರ್ಮದ ನಂಬಿಕೆಯುಳ್ಳ ವ್ಯಕ್ತಿಗಳು ಜೊತೆಯಾಗಿ ಸಂತೆ ವ್ಯಾಪಾರ ಮಾಡುತ್ತಿರುವುದು ಹಿಂದಿನಿಂದಲೂ ನಡೆದುಬಂದಿದೆ.


ಈ ನಡುವೆ, ಜನವರಿ 10ರಂದು ‘ಮುಸ್ಲಿಮ್ ಧರ್ಮದವರು ಸಂತೆ ವ್ಯಾಪಾರ ಮಾಡುವುದಕ್ಕೆ ಬಹಿಷ್ಕಾರ ಹಾಕಲಾಗಿದೆ’ ಎಂದು ನಿರ್ದಿಷ್ಟ ಪಂಗಡವನ್ನು ಗುರಿಯಾಗಿಸಿ ಬ್ಯಾನರ್ ಅಳವಡಿಸಲಾಗಿತ್ತು. ಈ ಬಗ್ಗೆ ಸ್ಥಳೀಯ ಪೊಲೀಸರ ಗಮನಕ್ಕೆ ತಂದ ಬಳಿಕ ಬ್ಯಾನರ್ ತೆರವುಗೊಳಿಸಲಾಗಿತ್ತು. ಆದರೆ ಜ.13ರಂದು ಮತ್ತೆ ಅದೇ ರೀತಿಯ ಬ್ಯಾನರ್ ಹಾಕಲಾಗಿದೆ. ‘ಸನಾತನ ಧರ್ಮದ ಆಚರಣೆ ಹಾಗೂ ನಂಬಿಕೆಯಲ್ಲಿ ವಿಶ್ವಾಸವುಳ್ಳ ಹಿಂದು ವ್ಯಾಪಾರಿಗಳಿಗೆ ಮಾತ್ರ ವ್ಯಾಪಾರಕ್ಕೆ ಅವಕಾಶ. ವಿಗ್ರಹಾರಾಧನೆಯನ್ನು ‘ಹರಾಂ’ ಎಂದು ನಂಬಿರುವ ಯಾರಿಗೂ ಅವಕಾಶವಿಲ್ಲ’ ಎಂದು ವಿಶ್ವ ಹಿಂದೂ ಪರಿಷತ್, ಬಜರಂಗದಳ ಕಾವೂರು ಪ್ರಖಂಡ ಹೆಸರಿನಲ್ಲಿ ಬ್ಯಾನರ್ ಅಳವಡಿಸಲಾಗಿದೆ. ಆಮೂಲಕ ಮತ್ತೆ ಕರಾವಳಿಯಲ್ಲಿ ಧರ್ಮದ ಹೆಸರಿನಲ್ಲಿ ಜನರನ್ನು ಒಡೆಯುವ ಮತ್ತು ಹಿಂದುಗಳಿಂದ ಅನ್ಯ ಧರ್ಮೀಯರನ್ನು ದೂರ ಇಡುವ ಪ್ರಯತ್ನ ನಡೆದಿದೆ.

ಶಾಸಕ ಭರತ್ ಶೆಟ್ಟಿ ಪ್ರತಿನಿಧಿಸುವ ಕಾವೂರು ಮಹಾಲಿಂಗೇಶ್ವರ ದೇವಸ್ಥಾನ ಮಂಗಳೂರು ಉತ್ತರ ಕ್ಷೇತ್ರ ವ್ಯಾಪ್ತಿಯಲ್ಲಿದೆ. ಇಲ್ಲಿ ಈ ಕಳೆದ ಬಾರಿಯೂ ಇಂತಹದ್ದೇ ಬ್ಯಾನರ್ ಹಾಕಿದ್ದ ವಿವಾದ ನಡೆದಿತ್ತು. ಕಳೆದ ಬಾರಿ ಹಿಜಾಬ್, ಧರ್ಮ ದ್ವೇಷದ ಬ್ಯಾನರ್ ಬಳಿಕ ವಿವಾದ ತಣ್ಣದಾಗಿತ್ತು. ಇದೀಗ ಚುನಾವಣೆ ಕಾಲದಲ್ಲಿ ಮತ್ತೆ ಧರ್ಮ ದ್ವೇಷ ಕದಡುವ ಬ್ಯಾನರ್ ಹಾಕಲಾಗಿದೆ.
Non Hindus not allowed to trade in Kavoor Shree Mahalingeswara Mangalore, banner sparks controversy. Those that believe that idol worship is wrong are not allowed to trade near temple premises is the banner posted by VHP. This was also decided by the temple committee.
09-02-26 07:20 pm
Bangalore Correspondent
ಶಿವಮೊಗ್ಗದ ಕಾರು ಚಾಲಕನಲ್ಲಿ 19 ಬಾಡಿಗೆ ಬ್ಯಾಂಕ್ ಖಾ...
09-02-26 01:30 pm
ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ರ...
09-02-26 12:29 pm
Gadag, No phone, Tv: ಎಸ್ಸೆಸ್ಸೆಲ್ಸಿ ಮಕ್ಕಳ ಭವಿಷ...
07-02-26 05:09 pm
ಸಿದ್ದರಾಮಯ್ಯರೇ ಐದು ವರ್ಷ ಸಿಎಂ ; ಪುತ್ರ ಯತೀಂದ್ರ ಪ...
07-02-26 02:58 pm
10-02-26 07:31 pm
HK News Desk
ಅಡೂರು ಮೂಲದ ಸೋಶಿಯಲ್ ಮೀಡಿಯಾ ಸ್ಟಾರ್ ಚಿನ್ನು ಪಾಪು...
10-02-26 02:15 pm
ರಾಮ ಮಂದಿರ ಸ್ಫೋಟಕ್ಕೆ ಸಂಚು ರೂಪಿಸಿದ್ದ ಕೈದಿ ಫರೀದಾ...
10-02-26 11:44 am
ಕೆನಡಾದಲ್ಲಿ ಗುಂಡಿಟ್ಟು ಕನ್ನಡಿಗ ಸಾಫ್ಟ್ವೇರ್ ಇಂಜಿ...
09-02-26 10:25 pm
ಜಾಗತಿಕ ಷೇರು ಮಾರುಕಟ್ಟೆಯಲ್ಲಿ 'ಆಂಥ್ರೋಪಿಕ್' AI ಬಿ...
09-02-26 12:27 pm
10-02-26 11:03 pm
Mangalore Correspondent
Mangaore, Marriage Fraud: ಹಲವಾರು ಹೆಂಡಿರ ಮುದ್ದ...
10-02-26 08:27 pm
Oman Accident: ಒಮಾನ್ ನಲ್ಲಿ ಭೀಕರ ಅಪಘಾತ ; ಕಾಪು...
09-02-26 11:20 pm
Mangalore Accident, Bus: ನಂತೂರಿನಲ್ಲಿ ಅಪಘಾತಕ್ಕ...
09-02-26 08:02 pm
ಕೆಪಿಟಿ ಜಂಕ್ಷನ್ ಬಳಿಯ ಹೆದ್ದಾರಿ ಡಿವೈಡರ್ ಮುಚ್ಚಿದ್...
09-02-26 02:50 pm
10-02-26 09:05 pm
Bangalore Correspondent
Peter Caddy, Arrest: ಉದ್ಯಮಿಗಳಿಗೆ ಸಾಲ ಕೊಡಿಸುವು...
10-02-26 04:38 pm
Belthangady Fake Kidnap: ಕಾಲೇಜು ವಿದ್ಯಾರ್ಥಿನಿ...
10-02-26 10:59 am
ಜಾಲತಾಣದಲ್ಲೇ ಪಡ್ಡೆ ಹುಡುಗರಿಗೆ ಬಲೆ, ಖತರ್ನಾಕ್ ಪ್...
09-02-26 02:04 pm
ಬೆಳ್ತಂಗಡಿ ; ಕಾಲೇಜು ತೆರಳುತ್ತಿದ್ದ ಅಪ್ರಾಪ್ತ ಯುವತ...
09-02-26 11:26 am