ಬ್ರೇಕಿಂಗ್ ನ್ಯೂಸ್
14-01-23 02:30 pm Mangalore Correspondent ಕರಾವಳಿ
ಮಂಗಳೂರು, ಜ.14 : ಕರಾವಳಿಯಲ್ಲಿ ಮತ್ತೆ ಧರ್ಮ ದಂಗಲ್ ಮುಂದುವರೆಸುವ ಮುನ್ಸೂಚನೆ ಸಿಕ್ಕಿದೆ. ಹಿಂದು ದೇವಸ್ಥಾನಗಳ ಉತ್ಸವಗಳಿಗೆ ಅನ್ಯಧರ್ಮೀಯರನ್ನು ದೂರವಿಡುವ ಯತ್ನವಾಗಿ ಉತ್ಸವ ಸಂದರ್ಭದಲ್ಲಿ ವ್ಯಾಪಾರ ನಿಷೇಧಿಸಿ ಹಿಂದು ಸಂಘಟನೆ ಹೆಸರಲ್ಲಿ ಬ್ಯಾನರ್ ಹಾಕಲಾಗಿದೆ. ಇದೀಗ ಮಂಗಳೂರಿನ ಕಾವೂರು ಮಹಾಲಿಂಗೇಶ್ವರ ದೇವಸ್ಥಾನದ ಉತ್ಸವದಲ್ಲಿ ಹಿಂದು ವ್ಯಾಪಾರಿಗಳಿಗೆ ಮಾತ್ರ ಸಂತೆ ವ್ಯಾಪಾರಕ್ಕೆ ಅವಕಾಶ ಎಂದು ವಿಶ್ವ ಹಿಂದು ಪರಿಷತ್ ಹೆಸರಲ್ಲಿ ಬ್ಯಾನರ್ ಅಳವಡಿಸಲಾಗಿದೆ.
ಜ.14ರ ಮಕರ ಸಂಕ್ರಾಂತಿಯಿಂದ ಕಾವೂರು ಮಹಾಲಿಂಗೇಶ್ವರ ದೇವಸ್ಥಾನದ ಜಾತ್ರೆ ಆರಂಭಗೊಳ್ಳುತ್ತದೆ. ಉತ್ಸವ ಸಂದರ್ಭದಲ್ಲಿ ವಿವಿಧ ಮತ, ಧರ್ಮದ ನಂಬಿಕೆಯುಳ್ಳ ವ್ಯಕ್ತಿಗಳು ಜೊತೆಯಾಗಿ ಸಂತೆ ವ್ಯಾಪಾರ ಮಾಡುತ್ತಿರುವುದು ಹಿಂದಿನಿಂದಲೂ ನಡೆದುಬಂದಿದೆ.


ಈ ನಡುವೆ, ಜನವರಿ 10ರಂದು ‘ಮುಸ್ಲಿಮ್ ಧರ್ಮದವರು ಸಂತೆ ವ್ಯಾಪಾರ ಮಾಡುವುದಕ್ಕೆ ಬಹಿಷ್ಕಾರ ಹಾಕಲಾಗಿದೆ’ ಎಂದು ನಿರ್ದಿಷ್ಟ ಪಂಗಡವನ್ನು ಗುರಿಯಾಗಿಸಿ ಬ್ಯಾನರ್ ಅಳವಡಿಸಲಾಗಿತ್ತು. ಈ ಬಗ್ಗೆ ಸ್ಥಳೀಯ ಪೊಲೀಸರ ಗಮನಕ್ಕೆ ತಂದ ಬಳಿಕ ಬ್ಯಾನರ್ ತೆರವುಗೊಳಿಸಲಾಗಿತ್ತು. ಆದರೆ ಜ.13ರಂದು ಮತ್ತೆ ಅದೇ ರೀತಿಯ ಬ್ಯಾನರ್ ಹಾಕಲಾಗಿದೆ. ‘ಸನಾತನ ಧರ್ಮದ ಆಚರಣೆ ಹಾಗೂ ನಂಬಿಕೆಯಲ್ಲಿ ವಿಶ್ವಾಸವುಳ್ಳ ಹಿಂದು ವ್ಯಾಪಾರಿಗಳಿಗೆ ಮಾತ್ರ ವ್ಯಾಪಾರಕ್ಕೆ ಅವಕಾಶ. ವಿಗ್ರಹಾರಾಧನೆಯನ್ನು ‘ಹರಾಂ’ ಎಂದು ನಂಬಿರುವ ಯಾರಿಗೂ ಅವಕಾಶವಿಲ್ಲ’ ಎಂದು ವಿಶ್ವ ಹಿಂದೂ ಪರಿಷತ್, ಬಜರಂಗದಳ ಕಾವೂರು ಪ್ರಖಂಡ ಹೆಸರಿನಲ್ಲಿ ಬ್ಯಾನರ್ ಅಳವಡಿಸಲಾಗಿದೆ. ಆಮೂಲಕ ಮತ್ತೆ ಕರಾವಳಿಯಲ್ಲಿ ಧರ್ಮದ ಹೆಸರಿನಲ್ಲಿ ಜನರನ್ನು ಒಡೆಯುವ ಮತ್ತು ಹಿಂದುಗಳಿಂದ ಅನ್ಯ ಧರ್ಮೀಯರನ್ನು ದೂರ ಇಡುವ ಪ್ರಯತ್ನ ನಡೆದಿದೆ.

ಶಾಸಕ ಭರತ್ ಶೆಟ್ಟಿ ಪ್ರತಿನಿಧಿಸುವ ಕಾವೂರು ಮಹಾಲಿಂಗೇಶ್ವರ ದೇವಸ್ಥಾನ ಮಂಗಳೂರು ಉತ್ತರ ಕ್ಷೇತ್ರ ವ್ಯಾಪ್ತಿಯಲ್ಲಿದೆ. ಇಲ್ಲಿ ಈ ಕಳೆದ ಬಾರಿಯೂ ಇಂತಹದ್ದೇ ಬ್ಯಾನರ್ ಹಾಕಿದ್ದ ವಿವಾದ ನಡೆದಿತ್ತು. ಕಳೆದ ಬಾರಿ ಹಿಜಾಬ್, ಧರ್ಮ ದ್ವೇಷದ ಬ್ಯಾನರ್ ಬಳಿಕ ವಿವಾದ ತಣ್ಣದಾಗಿತ್ತು. ಇದೀಗ ಚುನಾವಣೆ ಕಾಲದಲ್ಲಿ ಮತ್ತೆ ಧರ್ಮ ದ್ವೇಷ ಕದಡುವ ಬ್ಯಾನರ್ ಹಾಕಲಾಗಿದೆ.
Non Hindus not allowed to trade in Kavoor Shree Mahalingeswara Mangalore, banner sparks controversy. Those that believe that idol worship is wrong are not allowed to trade near temple premises is the banner posted by VHP. This was also decided by the temple committee.
18-12-25 11:05 pm
HK News Desk
Byrathi Suresh, Mangalore, Karavali: 'ಕರಾವಳಿಗ...
18-12-25 08:40 pm
ಪರಮೇಶ್ವರ್ ಸಿಎಂ ಆಗಲೆಂದು ಒಕ್ಕಲಿಗ, ಲಿಂಗಾಯತ, ದಲಿತ...
18-12-25 04:31 pm
Shivamogga, Gold Chain Robbery, Police: ಕಾಂಗ್...
18-12-25 02:26 pm
ಹೃದಯಾಘಾತ ; ರಸ್ತೆ ಮೇಲೆ ಬಿದ್ದುಕೊಂಡ ಪತಿಯನ್ನು ರಕ್...
18-12-25 02:09 pm
18-12-25 04:34 pm
HK News Desk
ಸಮವಸ್ತ್ರ ಕಳಪೆಯೆಂದು ಸಹಪಾಠಿಗಳ ಅಣಕ ; ನೊಂದ ನಾಲ್ಕನ...
17-12-25 10:27 pm
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
18-12-25 10:51 pm
Udupi Correspondent
ಬಜ್ಪೆ ಪೊಲೀಸರ ಬಗ್ಗೆ ಅವಹೇಳನ, ಆರೋಪಿಗಳಿಗೆ ರಾಜಾತಿಥ...
18-12-25 10:24 pm
ಮಹೇಶ್ ಶೆಟ್ಟಿ ತಿಮರೋಡಿ ಮತ್ತೆ ರಾಯಚೂರಿಗೆ ಗಡೀಪಾರು...
18-12-25 10:52 am
Dharmasthala case, Chinnayya: ಜಾಮೀನು ಸಿಕ್ಕರೂ...
17-12-25 08:54 pm
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
18-12-25 04:53 pm
Mangaluru Correspondent
ಫ್ಲಾಟ್, ಜಾಗವನ್ನು ಮಾರಾಟ ಮಾಡಿ ಸೈಬರ್ ವಂಚಕರಿಗೆ 2...
17-12-25 11:14 am
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm