ಬ್ರೇಕಿಂಗ್ ನ್ಯೂಸ್
14-01-23 02:30 pm Mangalore Correspondent ಕರಾವಳಿ
ಮಂಗಳೂರು, ಜ.14 : ಕರಾವಳಿಯಲ್ಲಿ ಮತ್ತೆ ಧರ್ಮ ದಂಗಲ್ ಮುಂದುವರೆಸುವ ಮುನ್ಸೂಚನೆ ಸಿಕ್ಕಿದೆ. ಹಿಂದು ದೇವಸ್ಥಾನಗಳ ಉತ್ಸವಗಳಿಗೆ ಅನ್ಯಧರ್ಮೀಯರನ್ನು ದೂರವಿಡುವ ಯತ್ನವಾಗಿ ಉತ್ಸವ ಸಂದರ್ಭದಲ್ಲಿ ವ್ಯಾಪಾರ ನಿಷೇಧಿಸಿ ಹಿಂದು ಸಂಘಟನೆ ಹೆಸರಲ್ಲಿ ಬ್ಯಾನರ್ ಹಾಕಲಾಗಿದೆ. ಇದೀಗ ಮಂಗಳೂರಿನ ಕಾವೂರು ಮಹಾಲಿಂಗೇಶ್ವರ ದೇವಸ್ಥಾನದ ಉತ್ಸವದಲ್ಲಿ ಹಿಂದು ವ್ಯಾಪಾರಿಗಳಿಗೆ ಮಾತ್ರ ಸಂತೆ ವ್ಯಾಪಾರಕ್ಕೆ ಅವಕಾಶ ಎಂದು ವಿಶ್ವ ಹಿಂದು ಪರಿಷತ್ ಹೆಸರಲ್ಲಿ ಬ್ಯಾನರ್ ಅಳವಡಿಸಲಾಗಿದೆ.
ಜ.14ರ ಮಕರ ಸಂಕ್ರಾಂತಿಯಿಂದ ಕಾವೂರು ಮಹಾಲಿಂಗೇಶ್ವರ ದೇವಸ್ಥಾನದ ಜಾತ್ರೆ ಆರಂಭಗೊಳ್ಳುತ್ತದೆ. ಉತ್ಸವ ಸಂದರ್ಭದಲ್ಲಿ ವಿವಿಧ ಮತ, ಧರ್ಮದ ನಂಬಿಕೆಯುಳ್ಳ ವ್ಯಕ್ತಿಗಳು ಜೊತೆಯಾಗಿ ಸಂತೆ ವ್ಯಾಪಾರ ಮಾಡುತ್ತಿರುವುದು ಹಿಂದಿನಿಂದಲೂ ನಡೆದುಬಂದಿದೆ.
ಈ ನಡುವೆ, ಜನವರಿ 10ರಂದು ‘ಮುಸ್ಲಿಮ್ ಧರ್ಮದವರು ಸಂತೆ ವ್ಯಾಪಾರ ಮಾಡುವುದಕ್ಕೆ ಬಹಿಷ್ಕಾರ ಹಾಕಲಾಗಿದೆ’ ಎಂದು ನಿರ್ದಿಷ್ಟ ಪಂಗಡವನ್ನು ಗುರಿಯಾಗಿಸಿ ಬ್ಯಾನರ್ ಅಳವಡಿಸಲಾಗಿತ್ತು. ಈ ಬಗ್ಗೆ ಸ್ಥಳೀಯ ಪೊಲೀಸರ ಗಮನಕ್ಕೆ ತಂದ ಬಳಿಕ ಬ್ಯಾನರ್ ತೆರವುಗೊಳಿಸಲಾಗಿತ್ತು. ಆದರೆ ಜ.13ರಂದು ಮತ್ತೆ ಅದೇ ರೀತಿಯ ಬ್ಯಾನರ್ ಹಾಕಲಾಗಿದೆ. ‘ಸನಾತನ ಧರ್ಮದ ಆಚರಣೆ ಹಾಗೂ ನಂಬಿಕೆಯಲ್ಲಿ ವಿಶ್ವಾಸವುಳ್ಳ ಹಿಂದು ವ್ಯಾಪಾರಿಗಳಿಗೆ ಮಾತ್ರ ವ್ಯಾಪಾರಕ್ಕೆ ಅವಕಾಶ. ವಿಗ್ರಹಾರಾಧನೆಯನ್ನು ‘ಹರಾಂ’ ಎಂದು ನಂಬಿರುವ ಯಾರಿಗೂ ಅವಕಾಶವಿಲ್ಲ’ ಎಂದು ವಿಶ್ವ ಹಿಂದೂ ಪರಿಷತ್, ಬಜರಂಗದಳ ಕಾವೂರು ಪ್ರಖಂಡ ಹೆಸರಿನಲ್ಲಿ ಬ್ಯಾನರ್ ಅಳವಡಿಸಲಾಗಿದೆ. ಆಮೂಲಕ ಮತ್ತೆ ಕರಾವಳಿಯಲ್ಲಿ ಧರ್ಮದ ಹೆಸರಿನಲ್ಲಿ ಜನರನ್ನು ಒಡೆಯುವ ಮತ್ತು ಹಿಂದುಗಳಿಂದ ಅನ್ಯ ಧರ್ಮೀಯರನ್ನು ದೂರ ಇಡುವ ಪ್ರಯತ್ನ ನಡೆದಿದೆ.
ಶಾಸಕ ಭರತ್ ಶೆಟ್ಟಿ ಪ್ರತಿನಿಧಿಸುವ ಕಾವೂರು ಮಹಾಲಿಂಗೇಶ್ವರ ದೇವಸ್ಥಾನ ಮಂಗಳೂರು ಉತ್ತರ ಕ್ಷೇತ್ರ ವ್ಯಾಪ್ತಿಯಲ್ಲಿದೆ. ಇಲ್ಲಿ ಈ ಕಳೆದ ಬಾರಿಯೂ ಇಂತಹದ್ದೇ ಬ್ಯಾನರ್ ಹಾಕಿದ್ದ ವಿವಾದ ನಡೆದಿತ್ತು. ಕಳೆದ ಬಾರಿ ಹಿಜಾಬ್, ಧರ್ಮ ದ್ವೇಷದ ಬ್ಯಾನರ್ ಬಳಿಕ ವಿವಾದ ತಣ್ಣದಾಗಿತ್ತು. ಇದೀಗ ಚುನಾವಣೆ ಕಾಲದಲ್ಲಿ ಮತ್ತೆ ಧರ್ಮ ದ್ವೇಷ ಕದಡುವ ಬ್ಯಾನರ್ ಹಾಕಲಾಗಿದೆ.
Non Hindus not allowed to trade in Kavoor Shree Mahalingeswara Mangalore, banner sparks controversy. Those that believe that idol worship is wrong are not allowed to trade near temple premises is the banner posted by VHP. This was also decided by the temple committee.
14-07-25 01:43 pm
HK News Desk
Dr B Saroja Devi Death: 17ನೇ ವಯಸ್ಸಲ್ಲೇ ಚಿತ್ರರ...
14-07-25 12:50 pm
Mantralaya, Tungabhadra River, drowning: ತುಂಬ...
13-07-25 08:37 pm
ಆಧ್ಯಾತ್ಮಿಕ ಸಾಧನೆಯತ್ತ ಚಿತ್ತ ; ಗೋಕರ್ಣ ಬಳಿಯ ದಟ್ಟ...
13-07-25 04:03 pm
Shivamogga Jail News, Mobile phone: ಶಿವಮೊಗ್ಗ...
12-07-25 10:47 pm
14-07-25 03:24 pm
HK News Desk
ಅಹ್ಮದಾಬಾದ್ ವಿಮಾನ ದುರಂತ ; ಭಾರೀ ಅನುಮಾನ ಹುಟ್ಟಿಸಿ...
12-07-25 09:25 pm
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
Coimbatore Serial Blasts, 'Tailor Raja' Arres...
11-07-25 12:08 pm
14-07-25 07:56 pm
Mangalore Correspondent
Mangalore, Help: ಅಪಘಾತದಲ್ಲಿ ಬಡ ಮಹಿಳೆಯ ತಲೆಗೆ ತ...
13-07-25 11:13 pm
Mangalore News: ಸಾರಿಗೆ ಕಚೇರಿಗಳಿಗೆ ಸ್ವಂತ ಕಟ್ಟಡ...
13-07-25 11:11 pm
Mangalore, E Bus, MP Chowta: ಕೇಂದ್ರ ಸರ್ಕಾರದಿಂ...
13-07-25 10:12 pm
Mangalore DK Transport, DK Group Alwyn Joel N...
13-07-25 07:00 pm
13-07-25 05:23 pm
Bangalore Correspondent
ಅಪ್ರಾಪ್ತ ಬಾಲಕಿಯನ್ನು ಶಾಲೆಗೆ ಕರೆದೊಯ್ಯುವ ನೆಪದಲ್ಲ...
12-07-25 11:10 pm
Dowry Harassment, Mysuru: ಮದುವೆಯಾದ ಎರಡೇ ತಿಂಗಳ...
12-07-25 01:32 pm
Mangalore Job Fraud, KCOCA, Police: ಫಾರಿನ್ ಉದ...
12-07-25 11:59 am
Robbery, Gold Workshop in Kalaburagi: ಕಲಬುರಗಿ...
11-07-25 10:10 pm