ಬ್ರೇಕಿಂಗ್ ನ್ಯೂಸ್
16-01-23 09:25 pm Mangalore Correspondent ಕರಾವಳಿ
ಮಂಗಳೂರು, ಜ.16 : ವೈಟ್ ಸಿಮೆಂಟ್ ತುಂಬಿದ್ದ ಟ್ರಕ್ ಟಯರ್ ಬ್ಲಾಸ್ಟ್ ಆದ ಪರಿಣಾಮ ನಿಯಂತ್ರಣ ತಪ್ಪಿ ಹೆದ್ದಾರಿ ಬದಿಯ ಕಮರಿಗೆ ಉರುಳಿ ಬಿದ್ದ ಘಟನೆ ರಾ.ಹೆ. 66 ರ ಜಪ್ಪಿನಮೊಗರಿನಲ್ಲಿ ಇಂದು ಸಂಜೆ ಸಂಭವಿಸಿದೆ. ಲಾರಿಯೊಳಗಡೆ ಸಿಲುಕಿದ್ದ ಚಾಲಕನನ್ನ ಸ್ಥಳೀಯರು ಮತ್ತು ಅಗ್ನಿ ಶಾಮಕದಳದ ಸಿಬ್ಬಂದಿ ಒಂದೂವರೆ ತಾಸು ಕಾರ್ಯಾಚರಣೆ ನಡೆಸಿ ರಕ್ಷಿಸಿದ್ದಾರೆ.




ತಮಿಳ್ನಾಡು ಮೂಲದ ನಾಗರಾಜ್ ಎಂಬ ಟ್ರಕ್ ಚಾಲಕನನ್ನ ರಕ್ಷಿಸಲಾಗಿದೆ. ಮಂಗಳೂರಿನಿಂದ ಕೇರಳದ ಕಡೆಗೆ ವೈಟ್ ಸಿಮೆಂಟ್ ಹೊತ್ತು ಸಾಗುತ್ತಿದ್ದ ತಮಿಳುನಾಡು ನೋಂದಣಿಯ ಟ್ರಕ್ ಟಯರ್ ಜಪ್ಪಿನಮೊಗರಿನಲ್ಲಿ ಬ್ಲಾಸ್ಟ್ ಆಗಿದೆ. ನಿಯಂತ್ರಣ ತಪ್ಪಿದ ಟ್ರಕ್ ಹೆದ್ದಾರಿ ಬದಿಯ ಕಮರಿಗೆ ಉರುಳಿ ಬಿದ್ದಿದೆ. ಟ್ರಕ್ ನಲ್ಲಿದ್ದ ಕ್ಲೀನರ್ ತಕ್ಷಣ ಹೊರಕ್ಕೆ ಜಿಗಿದು ಅಪಾಯದಿಂದ ಪಾರಾಗಿದ್ದಾನೆ. ಚಾಲಕ ನಾಗರಾಜ್ ಮಾತ್ರ ಟ್ರಕ್ ಒಳಗಡೆ ಸಿಲುಕಿದ್ದು ಆತನ ಮೇಲೆ ಸಿಮೆಂಟ್ ಮೂಟೆಗಳು ರಾಶಿ ಬಿದ್ದಿದ್ದವು. ತಕ್ಷಣ ಸಹಾಯಕ್ಕೆ ಧಾವಿಸಿದ ಸ್ಥಳೀಯರು ಮೂಟೆಗಳನ್ನ ಎತ್ತಿ ಖಾಲಿ ಮಾಡಿದ್ದಾರೆ. ಅಗ್ನಿಶಾಮಕ ದಳದ ಸಿಬ್ಬಂದಿ ಗ್ಯಾಸ್ ಕಟ್ಟರ್ ಇನ್ನಿತರ ಸಲಕರಣೆಗಳಿಂದ ನಿರಂತರ ಒಂದೂವರೆ ಗಂಟೆ ಕಾರ್ಯಾಚರಣೆ ನಡೆಸಿ ಚಾಲಕನನ್ನ ರಕ್ಷಿಸಿದ್ದಾರೆ. ತಮಿಳು ನಾಡು ಮೂಲದ ಚಾಲಕ ನಾಗರಾಜ್ ಅವರು ಸಣ್ಣ, ಪುಟ್ಟ ಗಾಯಗೊಂಡು ಪವಾಡ ಸದೃಶ ಪಾರಾಗಿದ್ದು , ಚಾಲಕ ಮತ್ತು ಕ್ಲೀನರ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅಗ್ನಿಶಾಮಕ ದಳ ಮತ್ತು ಸ್ಥಳೀಯರ ರಕ್ಷಣಾ ಕಾರ್ಯ ಸ್ಥಳೀಯರ ಶ್ಲಾಘನೆಗೆ ಪಾತ್ರವಾಯಿತು.
Tyre blast, cement truck falls into huge pit at Jeppinamogaru in Mangalore, driver stuck inside.
05-09-26 04:53 pm
HK News Staffer
400 ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ; ಪ್ರತಿ ಹ...
02-09-26 05:06 pm
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
ADGP Chandrashekhar, Seemanth Kumar Singh: ಅಧ...
30-08-26 07:31 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
05-09-26 04:58 pm
HK News Staffer
ಬೆಂಗಳೂರು-ಮಂಗಳೂರು ವಂದೇ ಭಾರತ್ಗೆ ಮತ್ತೊಂದು ಟೆಸ್ಟ...
05-09-26 11:59 am
ಕೆಆರ್ ಐಡಿಎಲ್ ಕಮಿಷನ್ ಆರೋಪದಿಂದ ಮಾನಸಿಕ ಕಿರುಕುಳ,...
04-09-26 04:44 pm
Blinkit Raid, Mangalore: ಬ್ಲಿಂಕ್ ಇಟ್ ಆನ್ಲೈನ್...
03-09-26 10:19 pm
ಮುಂದಿನ ಬಾರಿ ಅಶೋಕ ರೈ ವಿರುದ್ಧ ತಾನೇ ಸ್ಪರ್ಧಿಸುತ್ತ...
03-09-26 09:10 pm
05-09-26 08:58 pm
HK News Staffer
ಶಿವಮೊಗ್ಗ ; ಕಾರಿನಲ್ಲಿ ಜಿಂಕೆ ಮಾಂಸ ಮಾರಾಟ ಯತ್ನ ;...
05-09-26 04:55 pm
ಬಡ್ಡಿ ಕಟ್ಟದಿದ್ದಕ್ಕೆ ಮಹಿಳೆಯನ್ನು ಅಪಹರಿಸಿ ಹಲ್ಲೆ...
05-09-26 03:08 pm
ಅಷ್ಟಮಿ ಭಜನಾ ಕಾರ್ಯಕ್ರಮದಲ್ಲಿ ಹೃದಯಾಘಾತ ; ತೊಕ್ಕೂರ...
05-09-26 02:04 pm
ತ್ರಿಶೂರ್ ನಲ್ಲಿ ಗುರುವಾಯೂರು ದರ್ಶನ ಮುಗಿಸಿ ಹೊರಟಿದ...
05-09-26 01:13 pm