ಬ್ರೇಕಿಂಗ್ ನ್ಯೂಸ್
16-01-23 09:25 pm Mangalore Correspondent ಕರಾವಳಿ
ಮಂಗಳೂರು, ಜ.16 : ವೈಟ್ ಸಿಮೆಂಟ್ ತುಂಬಿದ್ದ ಟ್ರಕ್ ಟಯರ್ ಬ್ಲಾಸ್ಟ್ ಆದ ಪರಿಣಾಮ ನಿಯಂತ್ರಣ ತಪ್ಪಿ ಹೆದ್ದಾರಿ ಬದಿಯ ಕಮರಿಗೆ ಉರುಳಿ ಬಿದ್ದ ಘಟನೆ ರಾ.ಹೆ. 66 ರ ಜಪ್ಪಿನಮೊಗರಿನಲ್ಲಿ ಇಂದು ಸಂಜೆ ಸಂಭವಿಸಿದೆ. ಲಾರಿಯೊಳಗಡೆ ಸಿಲುಕಿದ್ದ ಚಾಲಕನನ್ನ ಸ್ಥಳೀಯರು ಮತ್ತು ಅಗ್ನಿ ಶಾಮಕದಳದ ಸಿಬ್ಬಂದಿ ಒಂದೂವರೆ ತಾಸು ಕಾರ್ಯಾಚರಣೆ ನಡೆಸಿ ರಕ್ಷಿಸಿದ್ದಾರೆ.




ತಮಿಳ್ನಾಡು ಮೂಲದ ನಾಗರಾಜ್ ಎಂಬ ಟ್ರಕ್ ಚಾಲಕನನ್ನ ರಕ್ಷಿಸಲಾಗಿದೆ. ಮಂಗಳೂರಿನಿಂದ ಕೇರಳದ ಕಡೆಗೆ ವೈಟ್ ಸಿಮೆಂಟ್ ಹೊತ್ತು ಸಾಗುತ್ತಿದ್ದ ತಮಿಳುನಾಡು ನೋಂದಣಿಯ ಟ್ರಕ್ ಟಯರ್ ಜಪ್ಪಿನಮೊಗರಿನಲ್ಲಿ ಬ್ಲಾಸ್ಟ್ ಆಗಿದೆ. ನಿಯಂತ್ರಣ ತಪ್ಪಿದ ಟ್ರಕ್ ಹೆದ್ದಾರಿ ಬದಿಯ ಕಮರಿಗೆ ಉರುಳಿ ಬಿದ್ದಿದೆ. ಟ್ರಕ್ ನಲ್ಲಿದ್ದ ಕ್ಲೀನರ್ ತಕ್ಷಣ ಹೊರಕ್ಕೆ ಜಿಗಿದು ಅಪಾಯದಿಂದ ಪಾರಾಗಿದ್ದಾನೆ. ಚಾಲಕ ನಾಗರಾಜ್ ಮಾತ್ರ ಟ್ರಕ್ ಒಳಗಡೆ ಸಿಲುಕಿದ್ದು ಆತನ ಮೇಲೆ ಸಿಮೆಂಟ್ ಮೂಟೆಗಳು ರಾಶಿ ಬಿದ್ದಿದ್ದವು. ತಕ್ಷಣ ಸಹಾಯಕ್ಕೆ ಧಾವಿಸಿದ ಸ್ಥಳೀಯರು ಮೂಟೆಗಳನ್ನ ಎತ್ತಿ ಖಾಲಿ ಮಾಡಿದ್ದಾರೆ. ಅಗ್ನಿಶಾಮಕ ದಳದ ಸಿಬ್ಬಂದಿ ಗ್ಯಾಸ್ ಕಟ್ಟರ್ ಇನ್ನಿತರ ಸಲಕರಣೆಗಳಿಂದ ನಿರಂತರ ಒಂದೂವರೆ ಗಂಟೆ ಕಾರ್ಯಾಚರಣೆ ನಡೆಸಿ ಚಾಲಕನನ್ನ ರಕ್ಷಿಸಿದ್ದಾರೆ. ತಮಿಳು ನಾಡು ಮೂಲದ ಚಾಲಕ ನಾಗರಾಜ್ ಅವರು ಸಣ್ಣ, ಪುಟ್ಟ ಗಾಯಗೊಂಡು ಪವಾಡ ಸದೃಶ ಪಾರಾಗಿದ್ದು , ಚಾಲಕ ಮತ್ತು ಕ್ಲೀನರ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅಗ್ನಿಶಾಮಕ ದಳ ಮತ್ತು ಸ್ಥಳೀಯರ ರಕ್ಷಣಾ ಕಾರ್ಯ ಸ್ಥಳೀಯರ ಶ್ಲಾಘನೆಗೆ ಪಾತ್ರವಾಯಿತು.
Tyre blast, cement truck falls into huge pit at Jeppinamogaru in Mangalore, driver stuck inside.
31-03-26 10:13 am
HK News Staffer
ತಮಿಳುನಾಡಿನಲ್ಲಿ ಬಿಜೆಪಿ ಸೀಟು ಹಂಚಿಕೆಯಲ್ಲಿ ಲೋಪ ;...
29-03-26 10:19 am
RCB ಗೆಲುವಿಗೆ ರಕ್ತದಾನ ಅಭಿಯಾನ ; ಚಿನ್ನಸ್ವಾಮಿ ಉದ್...
28-03-26 08:39 pm
ಆಸ್ತಿ ಕಲಹ ; ಮೂವರು ಪುಟ್ಟ ಮಕ್ಕಳೊಂದಿಗೆ ಬಾವಿಗೆ ಹಾ...
28-03-26 02:54 pm
ಭಾರತದಲ್ಲಿ ಮತ್ತೆ ಲಾಕ್ಡೌನ್ ; ಜಾಲತಾಣದಲ್ಲಿ ಟ್ರೆಂ...
27-03-26 04:49 pm
31-03-26 11:00 pm
HK News Staffer
ಜೈಶ್-ಎ-ಮೊಹಮ್ಮದ್ ಮುಖ್ಯಸ್ಥ ಮಸೂದ್ ಅಜರ್ ಸೋದರ ತಾಹಿ...
31-03-26 03:30 pm
ಸಂಧಾನ ಮಾತುಕತೆ ಒಪ್ಪದಿದ್ದರೆ ಇರಾನ್ ಸರ್ವನಾಶ ; ಭೂದ...
31-03-26 10:43 am
ಗಲ್ಫ್ ಯುದ್ಧ ಎಫೆಕ್ಟ್ ; ಡಾಲರ್ ಮುಂದೆ ರುಪಾಯಿ ಮಹಾಪ...
30-03-26 10:31 pm
ಹರ್ಮುಜ್ ಜಲಸಂಧಿಯಲ್ಲಿ ಇರಾನ್ ಟೋಲ್ ಬೂತ್ ; ಶುಲ್ಕ ಕ...
28-03-26 04:06 pm
31-03-26 10:06 pm
HK News Desk
Moodbidri Accident: ಮೂಡುಬಿದ್ರೆ ; ರಸ್ತೆ ಬದಿ ನಿ...
31-03-26 09:02 pm
ಅವಳೇ ಮಗನನ್ನು ವಿಷ ಕೊಟ್ಟು ಕೊಂದಿದ್ದಾಳೆ, ವಿಷಯ ಮುಚ...
31-03-26 06:27 pm
ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ಸಿನಿಂದ ಹೊರಬಿದ್...
31-03-26 03:01 pm
ಮಂಗಳೂರು ಬಂದರಿಗೆ ಬರಲಿದೆ ಮತ್ತೆರಡು ಎಲ್ಪಿಜಿ ಹೊತ್ತ...
30-03-26 11:13 pm
31-03-26 11:11 am
HK News Staffer
ಮದುವೆ ಆಗಿದ್ರೂ ಲವರ್ ನಂಟು ; ಹಣಕ್ಕಾಗಿ ಪೀಡಿಸಿ ಬ್ಲ...
30-03-26 07:35 pm
ತಿಂಗಳ ಹಿಂದಷ್ಟೇ ರಿಜಿಸ್ಟರ್ ಮದುವೆಯಾಗಿದ್ದ ಬೆಳ್ತಂಗ...
29-03-26 10:36 pm
ಟ್ಯಾಬ್ಲೆಟ್ ಆರಿಫ್ ಹತ್ಯೆ ; ಟೋಪಿ ನೌಫಾಲ್ ಸಾವನ್ನ ಸ...
29-03-26 10:22 pm
ಅರ್ಕುಳ ಬಳಿ ಹೆದ್ದಾರಿಯಲ್ಲಿ ಹಾಲಿನ ಟ್ಯಾಂಕರ್ ಗೆ ಹಿ...
29-03-26 07:49 pm