ಬ್ರೇಕಿಂಗ್ ನ್ಯೂಸ್
16-01-23 09:25 pm Mangalore Correspondent ಕರಾವಳಿ
ಮಂಗಳೂರು, ಜ.16 : ವೈಟ್ ಸಿಮೆಂಟ್ ತುಂಬಿದ್ದ ಟ್ರಕ್ ಟಯರ್ ಬ್ಲಾಸ್ಟ್ ಆದ ಪರಿಣಾಮ ನಿಯಂತ್ರಣ ತಪ್ಪಿ ಹೆದ್ದಾರಿ ಬದಿಯ ಕಮರಿಗೆ ಉರುಳಿ ಬಿದ್ದ ಘಟನೆ ರಾ.ಹೆ. 66 ರ ಜಪ್ಪಿನಮೊಗರಿನಲ್ಲಿ ಇಂದು ಸಂಜೆ ಸಂಭವಿಸಿದೆ. ಲಾರಿಯೊಳಗಡೆ ಸಿಲುಕಿದ್ದ ಚಾಲಕನನ್ನ ಸ್ಥಳೀಯರು ಮತ್ತು ಅಗ್ನಿ ಶಾಮಕದಳದ ಸಿಬ್ಬಂದಿ ಒಂದೂವರೆ ತಾಸು ಕಾರ್ಯಾಚರಣೆ ನಡೆಸಿ ರಕ್ಷಿಸಿದ್ದಾರೆ.




ತಮಿಳ್ನಾಡು ಮೂಲದ ನಾಗರಾಜ್ ಎಂಬ ಟ್ರಕ್ ಚಾಲಕನನ್ನ ರಕ್ಷಿಸಲಾಗಿದೆ. ಮಂಗಳೂರಿನಿಂದ ಕೇರಳದ ಕಡೆಗೆ ವೈಟ್ ಸಿಮೆಂಟ್ ಹೊತ್ತು ಸಾಗುತ್ತಿದ್ದ ತಮಿಳುನಾಡು ನೋಂದಣಿಯ ಟ್ರಕ್ ಟಯರ್ ಜಪ್ಪಿನಮೊಗರಿನಲ್ಲಿ ಬ್ಲಾಸ್ಟ್ ಆಗಿದೆ. ನಿಯಂತ್ರಣ ತಪ್ಪಿದ ಟ್ರಕ್ ಹೆದ್ದಾರಿ ಬದಿಯ ಕಮರಿಗೆ ಉರುಳಿ ಬಿದ್ದಿದೆ. ಟ್ರಕ್ ನಲ್ಲಿದ್ದ ಕ್ಲೀನರ್ ತಕ್ಷಣ ಹೊರಕ್ಕೆ ಜಿಗಿದು ಅಪಾಯದಿಂದ ಪಾರಾಗಿದ್ದಾನೆ. ಚಾಲಕ ನಾಗರಾಜ್ ಮಾತ್ರ ಟ್ರಕ್ ಒಳಗಡೆ ಸಿಲುಕಿದ್ದು ಆತನ ಮೇಲೆ ಸಿಮೆಂಟ್ ಮೂಟೆಗಳು ರಾಶಿ ಬಿದ್ದಿದ್ದವು. ತಕ್ಷಣ ಸಹಾಯಕ್ಕೆ ಧಾವಿಸಿದ ಸ್ಥಳೀಯರು ಮೂಟೆಗಳನ್ನ ಎತ್ತಿ ಖಾಲಿ ಮಾಡಿದ್ದಾರೆ. ಅಗ್ನಿಶಾಮಕ ದಳದ ಸಿಬ್ಬಂದಿ ಗ್ಯಾಸ್ ಕಟ್ಟರ್ ಇನ್ನಿತರ ಸಲಕರಣೆಗಳಿಂದ ನಿರಂತರ ಒಂದೂವರೆ ಗಂಟೆ ಕಾರ್ಯಾಚರಣೆ ನಡೆಸಿ ಚಾಲಕನನ್ನ ರಕ್ಷಿಸಿದ್ದಾರೆ. ತಮಿಳು ನಾಡು ಮೂಲದ ಚಾಲಕ ನಾಗರಾಜ್ ಅವರು ಸಣ್ಣ, ಪುಟ್ಟ ಗಾಯಗೊಂಡು ಪವಾಡ ಸದೃಶ ಪಾರಾಗಿದ್ದು , ಚಾಲಕ ಮತ್ತು ಕ್ಲೀನರ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅಗ್ನಿಶಾಮಕ ದಳ ಮತ್ತು ಸ್ಥಳೀಯರ ರಕ್ಷಣಾ ಕಾರ್ಯ ಸ್ಥಳೀಯರ ಶ್ಲಾಘನೆಗೆ ಪಾತ್ರವಾಯಿತು.
Tyre blast, cement truck falls into huge pit at Jeppinamogaru in Mangalore, driver stuck inside.
04-11-25 04:38 pm
Bangalore Correspondent
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
04-11-25 10:51 pm
Mangalore Correspondent
Mangalore Police, Panambur Beach: ಗಂಡ - ಹೆಂಡತ...
04-11-25 08:37 pm
ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ಹಣಕ್ಕಾಗಿ...
04-11-25 06:15 pm
ವ್ಯಾಟಿಕನ್ ಸಿಟಿಯ ಭಾರತದ ರಾಯಭಾರಿ ಆ್ಯಂಡ್ರಿಯಾ ಫಾನ್...
04-11-25 05:06 pm
ಧರ್ಮಸ್ಥಳ ಪ್ರಕರಣ ; ಎಸ್ಐಟಿ ತನಿಖಾ ಪ್ರಕ್ರಿಯೆಗೆ ಮಹ...
04-11-25 05:03 pm
04-11-25 02:11 pm
Mangalore Correspondent
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm