ಬ್ರೇಕಿಂಗ್ ನ್ಯೂಸ್
18-10-20 01:00 pm Headline Karnataka News Network ಕರಾವಳಿ
ಮಂಗಳೂರು, ಅಕ್ಟೋಬರ್ 18 : ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣದಲ್ಲಿ ಪ್ರೊಫೆಸರ್ ವಿರುದ್ಧ ಕ್ರಮ ಕೈಗೊಳ್ಳುವಂತೆ ಮಂಗಳೂರು ಉತ್ತರ ಶಾಸಕ ಭರತ್ ಶೆಟ್ಟಿ ಡಿಸಿಎಂ ಅಶ್ವತ್ಥ ನಾರಾಯಣ ಅವರಿಗೆ ಪತ್ರ ಬರೆದು ಒತ್ತಾಯಿಸಿದ್ದಾರೆ.
ಕಿರುಕುಳ ಆರೋಪ ಎದುರಿಸುತ್ತಿರುವ ಪ್ರೊಫೆಸರ್ ಅರಬಿಯನ್ನು ತಕ್ಷಣದಿಂದಲೇ ಸಸ್ಪೆಂಡ್ ಮಾಡಬೇಕೆಂದು ಮಂಗಳೂರು ಯುನಿವರ್ಸಿಟಿಯ ಅಕಾಡೆಮಿಕ್ ಕೌನ್ಸಿಲ್ ಸದಸ್ಯರೂ ಆಗಿರುವ ಶಾಸಕ ಭರತ್ ಶೆಟ್ಟಿ ಒತ್ತಾಯಿಸಿದ್ದಾರೆ.

2018ರಲ್ಲಿ ವಿವಿಯ ಆಂತರಿಕ ತನಿಖಾ ಸಮಿತಿ ಪ್ರೊಫೆಸರ್ ವಿರುದ್ಧ ತನಿಖೆ ನಡೆಸಿ ವರದಿ ನೀಡಿದ್ದರೂ ವಿವಿ ಆಡಳಿತ ಅದನ್ನು ಮುಚ್ಚಿ ಹಾಕಿತ್ತು. ಪ್ರೊಫೆಸರ್ ವಿರುದ್ಧ ಯಾವುದೇ ಕ್ರಮ ಕೈಗೊಳ್ಳದೆ ಪ್ರಕರಣ ಮುಚ್ಚಿ ಹಾಕಿದ್ದು ವಿದ್ಯಾರ್ಥಿಗಳಿಗೆ ತಪ್ಪು ಸಂದೇಶ ನೀಡಿದಂತಾಗಿದೆ. ಇತ್ತೀಚೆಗೆ ಕರ್ನಾಟಕ ಮಹಿಳಾ ಆಯೋಗ ವರದಿ ಕೇಳಿದ್ದರಿಂದ ವಿವಿ ಎಚ್ಚತ್ತುಕೊಂಡಿದೆ. ಕಾನೂನು ಪ್ರಕಾರ ಕ್ರಮ ತೆಗೆದುಕೊಳ್ಳಬೇಕು ಜೊತೆಗೆ ಭವಿಷ್ಯದಲ್ಲಿ ಇಂತಹ ಪ್ರಕರಣ ಮರುಕಳಿಸದಂತೆ ನೋಡಿಕೊಳ್ಳಬೇಕು ಎಂದು ಶಾಸಕರು ಪತ್ರದಲ್ಲಿ ಡಿಸಿಎಂ ಗಮನ ಸೆಳೆದಿದ್ದಾರೆ.
ಇದೇ ವೇಳೆ, ವಿವಿ ಕುಲಪತಿ ಪಿ.ಎಸ್ ಯಡಪಡಿತ್ತಾಯ ಟೈಂಸ್ ಆಫ್ ಇಂಡಿಯಾಗೆ ಪ್ರತಿಕ್ರಿಯಿಸಿದ್ದು ಪ್ರೊ.ಅರಬಿ ವಿರುದ್ಧ ಯಾವ ರೀತಿಯ ಕ್ರಮ ತೆಗೆದುಕೊಳ್ಳಬೇಕೆಂದು ಕಾನೂನು ಸಲಹೆ ಕೇಳಿದ್ದೇವೆ. ಅದು ಇದೇ ಅ.19ರಂದು ಕೈಸೇರುವ ನಿರೀಕ್ಷೆಯಿದೆ. ಇದೇ ಸಂದರ್ಭದಲ್ಲಿ ರಾಷ್ಟ್ರೀಯ ಮಹಿಳಾ ಆಯೋಗಕ್ಕೂ ಪ್ರಕರಣದ ಕುರಿತು ಮತ್ತು ಒಟ್ಟು ಬೆಳವಣಿಗೆ ಬಗ್ಗೆ ವರದಿ ಸಲ್ಲಿಸಲಾಗಿದೆ. ಏನು ಕ್ರಮ ತೆಗೆದುಕೊಳ್ಳಬಹುದು ಮತ್ತು ಒಟ್ಟು ಪ್ರಕ್ರಿಯೆಗೆ ಒಂದು ತಿಂಗಳು ಬೇಕಾಗಬಹುದು ಎಂದು ಮೀನಮೇಷದ ಮಾತನಾಡಿದ್ದಾರೆ.
ಪ್ರಕರಣದ ಬಗ್ಗೆ 2018ರಲ್ಲಿ ವಿವಿ ಆಂತರಿಕ ತನಿಖಾ ಸಮಿತಿ ವರದಿ ನೀಡಿದ್ದರೂ, ಆಗಿನ ವಿವಿ ರಿಜಿಸ್ಟ್ರಾರ್ ಪ್ರೊ.ಎ.ಎಂ. ಖಾನ್ ವರದಿಯನ್ನು ಮುಚ್ಚಿಟ್ಟ ವಿಚಾರದ ಬಗ್ಗೆ ಖಾನ್ ವಿರುದ್ಧ ಕಾರಣ ಕೇಳಿ ಶೋಕಾಸ್ ನೋಟೀಸ್ ನೀಡಲಾಗಿದೆ ಎಂದು ವಿವಿಯ ಮೂಲಗಳಿಂದ ತಿಳಿದುಬಂದಿದೆ.
Mla Bharath Shetty, Mangaluru has urged C N Ashwath Narayan, minister for higher education, to take action against professor Arabi in the department of post-graduate studies in economics, Mangalore University, accused of sexually harassing a student.
01-05-26 08:33 pm
HK News Staffer
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
02-05-26 11:18 am
HK News Staffer
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
02-05-26 12:19 pm
HK News Staffer
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm
ಮಕ್ಕಳ ಆಯೋಗ ಸಮಿತಿ ಸದಸ್ಯನಿಂದಲೇ ಹಲವು ಮಹಿಳೆಯರಿಗೆ...
01-05-26 01:45 pm