ಬ್ರೇಕಿಂಗ್ ನ್ಯೂಸ್
18-10-20 01:00 pm Headline Karnataka News Network ಕರಾವಳಿ
ಮಂಗಳೂರು, ಅಕ್ಟೋಬರ್ 18 : ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣದಲ್ಲಿ ಪ್ರೊಫೆಸರ್ ವಿರುದ್ಧ ಕ್ರಮ ಕೈಗೊಳ್ಳುವಂತೆ ಮಂಗಳೂರು ಉತ್ತರ ಶಾಸಕ ಭರತ್ ಶೆಟ್ಟಿ ಡಿಸಿಎಂ ಅಶ್ವತ್ಥ ನಾರಾಯಣ ಅವರಿಗೆ ಪತ್ರ ಬರೆದು ಒತ್ತಾಯಿಸಿದ್ದಾರೆ.
ಕಿರುಕುಳ ಆರೋಪ ಎದುರಿಸುತ್ತಿರುವ ಪ್ರೊಫೆಸರ್ ಅರಬಿಯನ್ನು ತಕ್ಷಣದಿಂದಲೇ ಸಸ್ಪೆಂಡ್ ಮಾಡಬೇಕೆಂದು ಮಂಗಳೂರು ಯುನಿವರ್ಸಿಟಿಯ ಅಕಾಡೆಮಿಕ್ ಕೌನ್ಸಿಲ್ ಸದಸ್ಯರೂ ಆಗಿರುವ ಶಾಸಕ ಭರತ್ ಶೆಟ್ಟಿ ಒತ್ತಾಯಿಸಿದ್ದಾರೆ.

2018ರಲ್ಲಿ ವಿವಿಯ ಆಂತರಿಕ ತನಿಖಾ ಸಮಿತಿ ಪ್ರೊಫೆಸರ್ ವಿರುದ್ಧ ತನಿಖೆ ನಡೆಸಿ ವರದಿ ನೀಡಿದ್ದರೂ ವಿವಿ ಆಡಳಿತ ಅದನ್ನು ಮುಚ್ಚಿ ಹಾಕಿತ್ತು. ಪ್ರೊಫೆಸರ್ ವಿರುದ್ಧ ಯಾವುದೇ ಕ್ರಮ ಕೈಗೊಳ್ಳದೆ ಪ್ರಕರಣ ಮುಚ್ಚಿ ಹಾಕಿದ್ದು ವಿದ್ಯಾರ್ಥಿಗಳಿಗೆ ತಪ್ಪು ಸಂದೇಶ ನೀಡಿದಂತಾಗಿದೆ. ಇತ್ತೀಚೆಗೆ ಕರ್ನಾಟಕ ಮಹಿಳಾ ಆಯೋಗ ವರದಿ ಕೇಳಿದ್ದರಿಂದ ವಿವಿ ಎಚ್ಚತ್ತುಕೊಂಡಿದೆ. ಕಾನೂನು ಪ್ರಕಾರ ಕ್ರಮ ತೆಗೆದುಕೊಳ್ಳಬೇಕು ಜೊತೆಗೆ ಭವಿಷ್ಯದಲ್ಲಿ ಇಂತಹ ಪ್ರಕರಣ ಮರುಕಳಿಸದಂತೆ ನೋಡಿಕೊಳ್ಳಬೇಕು ಎಂದು ಶಾಸಕರು ಪತ್ರದಲ್ಲಿ ಡಿಸಿಎಂ ಗಮನ ಸೆಳೆದಿದ್ದಾರೆ.
ಇದೇ ವೇಳೆ, ವಿವಿ ಕುಲಪತಿ ಪಿ.ಎಸ್ ಯಡಪಡಿತ್ತಾಯ ಟೈಂಸ್ ಆಫ್ ಇಂಡಿಯಾಗೆ ಪ್ರತಿಕ್ರಿಯಿಸಿದ್ದು ಪ್ರೊ.ಅರಬಿ ವಿರುದ್ಧ ಯಾವ ರೀತಿಯ ಕ್ರಮ ತೆಗೆದುಕೊಳ್ಳಬೇಕೆಂದು ಕಾನೂನು ಸಲಹೆ ಕೇಳಿದ್ದೇವೆ. ಅದು ಇದೇ ಅ.19ರಂದು ಕೈಸೇರುವ ನಿರೀಕ್ಷೆಯಿದೆ. ಇದೇ ಸಂದರ್ಭದಲ್ಲಿ ರಾಷ್ಟ್ರೀಯ ಮಹಿಳಾ ಆಯೋಗಕ್ಕೂ ಪ್ರಕರಣದ ಕುರಿತು ಮತ್ತು ಒಟ್ಟು ಬೆಳವಣಿಗೆ ಬಗ್ಗೆ ವರದಿ ಸಲ್ಲಿಸಲಾಗಿದೆ. ಏನು ಕ್ರಮ ತೆಗೆದುಕೊಳ್ಳಬಹುದು ಮತ್ತು ಒಟ್ಟು ಪ್ರಕ್ರಿಯೆಗೆ ಒಂದು ತಿಂಗಳು ಬೇಕಾಗಬಹುದು ಎಂದು ಮೀನಮೇಷದ ಮಾತನಾಡಿದ್ದಾರೆ.
ಪ್ರಕರಣದ ಬಗ್ಗೆ 2018ರಲ್ಲಿ ವಿವಿ ಆಂತರಿಕ ತನಿಖಾ ಸಮಿತಿ ವರದಿ ನೀಡಿದ್ದರೂ, ಆಗಿನ ವಿವಿ ರಿಜಿಸ್ಟ್ರಾರ್ ಪ್ರೊ.ಎ.ಎಂ. ಖಾನ್ ವರದಿಯನ್ನು ಮುಚ್ಚಿಟ್ಟ ವಿಚಾರದ ಬಗ್ಗೆ ಖಾನ್ ವಿರುದ್ಧ ಕಾರಣ ಕೇಳಿ ಶೋಕಾಸ್ ನೋಟೀಸ್ ನೀಡಲಾಗಿದೆ ಎಂದು ವಿವಿಯ ಮೂಲಗಳಿಂದ ತಿಳಿದುಬಂದಿದೆ.
Mla Bharath Shetty, Mangaluru has urged C N Ashwath Narayan, minister for higher education, to take action against professor Arabi in the department of post-graduate studies in economics, Mangalore University, accused of sexually harassing a student.
06-02-26 12:30 pm
Bangalore Correspondent
ಭವಿಷ್ಯ ಹೇಳುವ ನೆಪದಲ್ಲಿ ಬೇಟೆ? ರೀಲ್ಸ್ ರಾಣಿಯ ಹಿಂದ...
05-02-26 05:52 pm
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
ಹಿಂದಿ ಲ್ಯಾಂಡ್ ಉತ್ತರ ಭಾರತೀಯರು ಮಾತ್ರ ನೈಜ ಇಂಡಿಯನ...
05-02-26 01:15 pm
ಸರ್ಕಾರಿ ಆಸ್ಪತ್ರೆಯಲ್ಲೇ ಔಷಧಿ ಕೊರತೆ ; ಅನುದಾನ ಇಲ್...
05-02-26 10:37 am
06-02-26 10:58 pm
HK News Desk
ಕೊರಿಯನ್ ವೆಬ್ ಸಿರೀಸ್ ವ್ಯಸನ, ತಂದೆಯ ಎರಡು ಕೋಟಿ ಸಾ...
06-02-26 08:47 pm
SBI ಬ್ಯಾಂಕ್ ಕಿತಾಪತಿ ; 2 ಕೋಟಿ ಮೌಲ್ಯದ ಚಿನ್ನ–ಬೆಳ...
06-02-26 08:17 pm
ನೇಪಾಳದ ಗಡಿಯಲ್ಲಿ ಮದುವೆ ದಿಬ್ಬಣ ಕರೆದೊಯ್ಯುತ್ತಿದ್ದ...
06-02-26 07:04 pm
ಮೇಘಾಲಯದಲ್ಲಿ ಕರಾಳ ದುರಂತ ; 'ಅಕ್ರಮ' ಕಲ್ಲಿದ್ದಲು ಗ...
06-02-26 09:54 am
06-02-26 10:56 pm
Mangalore Correspondent
ಡಿಕೆಶಿ ಸಿಎಂ ಆಗಿಯೇ ಪುತ್ತೂರು ಕಾಂಗ್ರೆಸ್ ಕಚೇರಿ ಉದ...
06-02-26 10:42 pm
Veerendra Heggade, Dharmasthala: ಶಿವರಾತ್ರಿಗೆ...
06-02-26 09:01 pm
D k Shivakumar, Mangalore: "ಯತೀಂದ್ರ ಅವರೇ ನಮ್ಮ...
06-02-26 03:09 pm
ನಿರ್ಲಕ್ಷ್ಯದಿಂದ ಹೆದ್ದಾರಿಗೆ ಬೈಕ್ ನುಗ್ಗಿಸಿದ ತ್ರಿ...
06-02-26 01:55 pm
06-02-26 06:36 pm
HK News Desk
ಹುಬ್ಬಳ್ಳಿಯ ಆಟೋ ಚಾಲಕನ ಖಾತೆಯಲ್ಲಿ ಕೋಟ್ಯಂತರ ಹಣದ ವ...
06-02-26 01:36 pm
Manjeshwar Double Murder: ಮಂಜೇಶ್ವರ ; ಪತ್ನಿ ಮೇ...
03-02-26 01:05 pm
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm