ಬ್ರೇಕಿಂಗ್ ನ್ಯೂಸ್
18-10-20 01:00 pm Headline Karnataka News Network ಕರಾವಳಿ
ಮಂಗಳೂರು, ಅಕ್ಟೋಬರ್ 18 : ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣದಲ್ಲಿ ಪ್ರೊಫೆಸರ್ ವಿರುದ್ಧ ಕ್ರಮ ಕೈಗೊಳ್ಳುವಂತೆ ಮಂಗಳೂರು ಉತ್ತರ ಶಾಸಕ ಭರತ್ ಶೆಟ್ಟಿ ಡಿಸಿಎಂ ಅಶ್ವತ್ಥ ನಾರಾಯಣ ಅವರಿಗೆ ಪತ್ರ ಬರೆದು ಒತ್ತಾಯಿಸಿದ್ದಾರೆ.
ಕಿರುಕುಳ ಆರೋಪ ಎದುರಿಸುತ್ತಿರುವ ಪ್ರೊಫೆಸರ್ ಅರಬಿಯನ್ನು ತಕ್ಷಣದಿಂದಲೇ ಸಸ್ಪೆಂಡ್ ಮಾಡಬೇಕೆಂದು ಮಂಗಳೂರು ಯುನಿವರ್ಸಿಟಿಯ ಅಕಾಡೆಮಿಕ್ ಕೌನ್ಸಿಲ್ ಸದಸ್ಯರೂ ಆಗಿರುವ ಶಾಸಕ ಭರತ್ ಶೆಟ್ಟಿ ಒತ್ತಾಯಿಸಿದ್ದಾರೆ.
2018ರಲ್ಲಿ ವಿವಿಯ ಆಂತರಿಕ ತನಿಖಾ ಸಮಿತಿ ಪ್ರೊಫೆಸರ್ ವಿರುದ್ಧ ತನಿಖೆ ನಡೆಸಿ ವರದಿ ನೀಡಿದ್ದರೂ ವಿವಿ ಆಡಳಿತ ಅದನ್ನು ಮುಚ್ಚಿ ಹಾಕಿತ್ತು. ಪ್ರೊಫೆಸರ್ ವಿರುದ್ಧ ಯಾವುದೇ ಕ್ರಮ ಕೈಗೊಳ್ಳದೆ ಪ್ರಕರಣ ಮುಚ್ಚಿ ಹಾಕಿದ್ದು ವಿದ್ಯಾರ್ಥಿಗಳಿಗೆ ತಪ್ಪು ಸಂದೇಶ ನೀಡಿದಂತಾಗಿದೆ. ಇತ್ತೀಚೆಗೆ ಕರ್ನಾಟಕ ಮಹಿಳಾ ಆಯೋಗ ವರದಿ ಕೇಳಿದ್ದರಿಂದ ವಿವಿ ಎಚ್ಚತ್ತುಕೊಂಡಿದೆ. ಕಾನೂನು ಪ್ರಕಾರ ಕ್ರಮ ತೆಗೆದುಕೊಳ್ಳಬೇಕು ಜೊತೆಗೆ ಭವಿಷ್ಯದಲ್ಲಿ ಇಂತಹ ಪ್ರಕರಣ ಮರುಕಳಿಸದಂತೆ ನೋಡಿಕೊಳ್ಳಬೇಕು ಎಂದು ಶಾಸಕರು ಪತ್ರದಲ್ಲಿ ಡಿಸಿಎಂ ಗಮನ ಸೆಳೆದಿದ್ದಾರೆ.
ಇದೇ ವೇಳೆ, ವಿವಿ ಕುಲಪತಿ ಪಿ.ಎಸ್ ಯಡಪಡಿತ್ತಾಯ ಟೈಂಸ್ ಆಫ್ ಇಂಡಿಯಾಗೆ ಪ್ರತಿಕ್ರಿಯಿಸಿದ್ದು ಪ್ರೊ.ಅರಬಿ ವಿರುದ್ಧ ಯಾವ ರೀತಿಯ ಕ್ರಮ ತೆಗೆದುಕೊಳ್ಳಬೇಕೆಂದು ಕಾನೂನು ಸಲಹೆ ಕೇಳಿದ್ದೇವೆ. ಅದು ಇದೇ ಅ.19ರಂದು ಕೈಸೇರುವ ನಿರೀಕ್ಷೆಯಿದೆ. ಇದೇ ಸಂದರ್ಭದಲ್ಲಿ ರಾಷ್ಟ್ರೀಯ ಮಹಿಳಾ ಆಯೋಗಕ್ಕೂ ಪ್ರಕರಣದ ಕುರಿತು ಮತ್ತು ಒಟ್ಟು ಬೆಳವಣಿಗೆ ಬಗ್ಗೆ ವರದಿ ಸಲ್ಲಿಸಲಾಗಿದೆ. ಏನು ಕ್ರಮ ತೆಗೆದುಕೊಳ್ಳಬಹುದು ಮತ್ತು ಒಟ್ಟು ಪ್ರಕ್ರಿಯೆಗೆ ಒಂದು ತಿಂಗಳು ಬೇಕಾಗಬಹುದು ಎಂದು ಮೀನಮೇಷದ ಮಾತನಾಡಿದ್ದಾರೆ.
ಪ್ರಕರಣದ ಬಗ್ಗೆ 2018ರಲ್ಲಿ ವಿವಿ ಆಂತರಿಕ ತನಿಖಾ ಸಮಿತಿ ವರದಿ ನೀಡಿದ್ದರೂ, ಆಗಿನ ವಿವಿ ರಿಜಿಸ್ಟ್ರಾರ್ ಪ್ರೊ.ಎ.ಎಂ. ಖಾನ್ ವರದಿಯನ್ನು ಮುಚ್ಚಿಟ್ಟ ವಿಚಾರದ ಬಗ್ಗೆ ಖಾನ್ ವಿರುದ್ಧ ಕಾರಣ ಕೇಳಿ ಶೋಕಾಸ್ ನೋಟೀಸ್ ನೀಡಲಾಗಿದೆ ಎಂದು ವಿವಿಯ ಮೂಲಗಳಿಂದ ತಿಳಿದುಬಂದಿದೆ.
Mla Bharath Shetty, Mangaluru has urged C N Ashwath Narayan, minister for higher education, to take action against professor Arabi in the department of post-graduate studies in economics, Mangalore University, accused of sexually harassing a student.
19-09-24 10:42 pm
Bangalore Correspondent
BJP MLA Munirathna, honeytrap, Blackmail: ಏಡ್...
19-09-24 08:42 pm
N Santosh Hegde: ಭ್ರಷ್ಟಾಚಾರ ಮಿತಿಮೀರಿದರೆ ದೇಶದಲ...
19-09-24 08:07 pm
Zameer Ahmed, Palestinian flag: ಪ್ಯಾಲೆಸ್ತೀನ್...
19-09-24 08:03 pm
Shobha Karandlaje, R Ashok, Nagamangala riot...
19-09-24 06:48 pm
19-09-24 09:51 pm
HK News Desk
Lebanon blast, Pager; ಪೇಜರ್ ಸ್ಫೋಟ ಬೆನ್ನಲ್ಲೇ ವ...
19-09-24 11:42 am
ಸ್ಮಾರ್ಟ್ ಫೋನ್ ಹ್ಯಾಕ್ ಆಗುತ್ತೆ ಎಂದು ಪೇಜರ್ ಬಳಸುತ...
18-09-24 02:52 pm
ಹೆದ್ದಾರಿ ವೆಚ್ಚಕ್ಕಿಂತ ಹೆಚ್ಚು ಟೋಲ್ ವಸೂಲಿ ಯಾಕೆ ?...
18-09-24 02:46 pm
ಜಿಂಬಾಬ್ವೆಯಲ್ಲಿ ಭೀಕರ ಬರ ; ಜನರ ಹಸಿವು ನೀಗಿಸಲು ನ...
18-09-24 11:03 am
19-09-24 11:12 pm
Mangalore Correspondent
Lokayukta, Kinnigoli, Crime: ಗುತ್ತಿಗೆದಾರರಿಂದ...
19-09-24 10:38 pm
Mangalore, Off roading, Car: 20-21ರಂದು ಮುಡಿಪಿ...
19-09-24 09:08 pm
By elections, Kota Srinivas Poojary; ಕೋಟರಿಂದ...
19-09-24 04:53 pm
Mcc elections, Manoj Kumar mayor: ಮಂಗಳೂರು ಪಾಲ...
19-09-24 03:39 pm
18-09-24 10:08 pm
Mangalore Correspondent
Bangalore fraud, Siddalingaiah Hiremath, Scam...
15-09-24 01:21 pm
MLA Munirathna Arrest: ತಿಂಗಳಿಗೆ 30 ಲಕ್ಷ ಲಂಚಕ್...
14-09-24 06:54 pm
Srimathi Shetty murder case, Mangalore Court...
14-09-24 11:52 am
Kristina Joksimovic, Miss Switzerland finalis...
13-09-24 10:50 pm