ಬ್ರೇಕಿಂಗ್ ನ್ಯೂಸ್
18-01-23 11:02 pm Mangalore Correspondent ಕರಾವಳಿ
ಮಂಗಳೂರು, ಜ.18: ಮೀಸಲಾತಿ ನೀಡುವುದು ದೇಶಕ್ಕೆ, ಅಭಿವೃದ್ಧಿಗೆ ಮಾರಕ ಎಂದು ತಿಳಿದಿದ್ದರೂ ರಾಜ್ಯ ಮತ್ತು ಕೇಂದ್ರ ಸರಕಾರಗಳು ಅಧಿಕಾರ ದಾಹದಿಂದ ಅವುಗಳ ತಾಳಕ್ಕೆ ಕುಣಿಯುತ್ತಿವೆ. ಈ ರೀತಿ ಮೀಸಲಾತಿ ನೀಡುತ್ತಾ ಹೋದರೆ ದೇಶದಲ್ಲಿ ಮುಂದೆ ದಂಗೆಯೇಳುವ ಸ್ಥಿತಿ ಬಂದೀತು. ಮೀಸಲಾತಿಗೆ ಹೋರಾಟ ನಡೆಸುವುದನ್ನು ನಾವು ಖಂಡಿಸುತ್ತೇವೆ. ಇದರ ಬಗ್ಗೆ ಜನಾಂದೋಲನ ರೂಪಿಸುತ್ತೇವೆ ಎಂದು ಹಿಂದು ಮಹಾಸಭಾ ರಾಜ್ಯ ಕಾರ್ಯದರ್ಶಿ ಧರ್ಮೇಂದ್ರ ಹೇಳಿದ್ದಾರೆ.
ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ನಮ್ಮ ಮೂಲ ಸಂವಿಧಾನದಲ್ಲಿ ಯಾವುದೇ ಮೀಸಲಾತಿ ನೀಡುವುದನ್ನು ವಿರೋಧಿಸಲಾಗಿದೆ. ಅಲ್ಲದೆ, ಧರ್ಮಾಧರಿತ ಮೀಸಲಾತಿ ನೀಡಲೇಬಾರದು ಎಂದಿದೆ. ಆದರೆ ನಮ್ಮಲ್ಲಿ ಅಲ್ಪಸಂಖ್ಯಾತ ಹೆಸರಲ್ಲಿ ಧರ್ಮ ಆಧರಿತ ಮೀಸಲಾತಿ ಕಲ್ಪಿಸಲಾಗಿದೆ. ಧರ್ಮಕ್ಕೆ, ಜಾತಿಗೊಂದು ಮೀಸಲಾತಿ ನೀಡುತ್ತಾ ಹೋದರೆ ಸಮರ್ಥ ಯುವಜನತೆ ಅವಕಾಶ ವಂಚಿತರಾಗುತ್ತಾರೆ. ಅಧಿಕಾರ ಲಾಭ ಪಡೆಯಲು ಮೀಸಲಾತಿ ಕೊಡುವುದು, ಒಂದು ವರ್ಗವನ್ನು ಓಲೈಸುವುದು ಎಷ್ಟು ಸರಿ. ಮೀಸಲಾತಿ ಕೊಡುವದರ ಅರ್ಥ ಏನೆಂಬುದನ್ನು ರಾಜಕಾರಣಿಗಳು ಮೊದಲು ತಿಳಿದುಕೊಳ್ಳಬೇಕಿದೆ.

ಮೀಸಲಾತಿ ಹೆಸರಲ್ಲಿ ಒಂದು ಕುಟುಂಬದ ಎಲ್ಲರಿಗೂ ಸರಕಾರಿ ಹುದ್ದೆಗಳಲ್ಲಿ ಅವಕಾಶ ಕೊಡುತ್ತಾ ಹೋದರೆ, ಇತರೇ ಸಮುದಾಯಗಳು ಏನು ಮಾಡಬೇಕು. ಒಮ್ಮೆ ಮೀಸಲಾತಿ ಪಡೆದವರು ಆರ್ಥಿಕ ಸಬಲರಾದರೂ ಮತ್ತೆ ಮತ್ತೆ ತಮ್ಮ ಮಕ್ಕಳಿಗೆಲ್ಲ ಮೀಸಲಾತಿಯಿಂದ ಲಾಭ ಪಡೆಯುತ್ತಾ ಹೋದರೆ ಮೀಸಲಾತಿಗೇನು ಅರ್ಥವಿದೆ. ಇತ್ತೀಚಿನ ದಿನಗಳಲ್ಲಿ ಸ್ವಾಮೀಜಿಗಳಾದವರು ಕೂಡ ಒಂದು ಜಾತಿಯ ಪರವಾಗಿ ಮೀಸಲಾತಿಗೆ ಆಗ್ರಹಿಸುತ್ತಿದ್ದಾರೆ. ಈಡಿಗ, ಬಿಲ್ಲವರಿಗಾಗಿ ಒಬ್ಬ ಸ್ವಾಮೀಜಿ, ಪಂಚಮಸಾಲಿ ಪರ ಇನ್ನೊಬ್ಬ ಸ್ವಾಮೀಜಿ ಧ್ವನಿ ಎತ್ತುವುದಾದರೆ ಇವರು ಕಾವಿ ಹಾಕಿ ಹಿಂದು ಸಮಾಜವನ್ನು ಪ್ರತಿನಿಧಿಸುವುದು ಯಾಕೆ ಎಂದು ಧರ್ಮೇಂದ್ರ ಪ್ರಶ್ನೆ ಮಾಡಿದರು.
ಇದಕ್ಕಾಗಿ ಒಂದೋ ಆರ್ಥಿಕ ಮೀಸಲಾತಿಯನ್ನು ಮಾತ್ರ ನೀಡಬೇಕು. ಇಲ್ಲವೇ ಗ್ರಾಮಾಂತರ ಪ್ರದೇಶದವರಿಗೆ ಮೀಸಲಾತಿ ನೀಡಲಿ. ಜಾತಿಗೊಂದು ಮೀಸಲಾತಿ ನೀಡುವುದನ್ನು ವಿರೋಧಿಸಿ ನಾವು ಸಮಾನ ಮನಸ್ಕರು ಪಕ್ಷ ಭೇದ ಮರೆತು ವಿರೋಧಿಸುತ್ತೇವೆ. ಇದಕ್ಕೊಂದು ಎನ್ ಜಿಓ ಸ್ಥಾಪನೆ ಮಾಡುವ ಉದ್ದೇಶ ಇದೆ. ಜಾತ್ಯತೀತ ರಾಷ್ಟ್ರ ಎಂದ ಮೇಲೆ ಜಾತಿಗೇನು ಕೆಲಸವಿದೆ. ಜಾತಿ ಕೇಳಿ ಉದ್ಯೋಗ ಕೊಡುವುದೇ ಅಸಭ್ಯ. ಶಾಲೆ, ಕಾಲೇಜಿನಲ್ಲಿ ಜಾತಿ ಕಾಲಂ ತೆಗೆದು ಹಾಕಬೇಕು ಎಂದು ಧರ್ಮೇಂದ್ರ ಹೇಳಿದರು.
Reservation is a threat to nation slams Hindu Maha saba in Mangalore
14-05-26 10:19 am
HK News Staffer
ಬಿಜೆಪಿ ಸರ್ಕಾರ ನಿಷೇಧಿಸಿದ್ದ ಹಿಜಾಬ್ ನಿಷೇಧ ಹಿಂಪಡೆ...
13-05-26 10:18 pm
3 ಸಾವಿರ ರೂ. ಬಿಲ್ ಬಾಕಿ; 8 ತಿಂಗಳಿಂದ ಕತ್ತಲಲ್ಲಿ...
12-05-26 02:26 pm
ಶೃಂಗೇರಿ ಕ್ಷೇತ್ರದ ಅಂಚೆ ಮತ ಗೊಂದಲ; ಕಾಂಗ್ರೆಸಿನ ರಾ...
11-05-26 09:36 pm
D Sudhakar Death: ಚಿತ್ರದುರ್ಗದ ಜನಾನುರಾಗಿ ಶಾಸಕ,...
10-05-26 01:04 pm
14-05-26 12:36 pm
HK News Staffer
ಜ್ಯೋತಿಷಿಗೆ ಕೂಡದ ಜಾತಕ ; ಟೀಕೆಗಳ ಸುಳಿಯಲ್ಲಿ ವಿಜಯ್...
13-05-26 06:42 pm
ಅಗ್ನಿ ಪರೀಕ್ಷೆಯಲ್ಲಿ ಗೆದ್ದ ವಿಜಯ್; ನಿರೀಕ್ಷೆಗೂ ಮ...
13-05-26 02:26 pm
ಎಐಎಡಿಎಂಕೆ ಪಕ್ಷವೇ ಇಬ್ಭಾಗ ; 30 ಶಾಸಕರ ಬಣ ವಿಜಯ್ ಸ...
12-05-26 08:15 pm
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ; ಮೇ 3ರಂದು ನಡೆದಿದ...
12-05-26 08:01 pm
14-05-26 10:48 pm
HK News Staffer
ರಿಯಲ್ ಎಸ್ಟೇಟ್ ಉದ್ಯಮಿ, ‘ಲ್ಯಾನ್ಸಿ ಕನ್ಸ್ಟ್ರಕ್ಷನ...
14-05-26 05:39 pm
ಮಂಗಳೂರಿನಲ್ಲೂ "ಲಾಕ್ಡ್ ಹೌಸ್ ಬೀಟ್ ಸಿಸ್ಟಮ್" ಜಾರಿ...
13-05-26 11:02 pm
Gruha Lakshmi Mangalore: ಸತ್ತವರ ಖಾತೆಗೂ ಗೃಹಲಕ್...
13-05-26 04:04 pm
NEET ಪರೀಕ್ಷೆ ರದ್ದು ; 22.5 ಲಕ್ಷ ವಿದ್ಯಾರ್ಥಿಗಳ ಭ...
12-05-26 06:26 pm
14-05-26 01:41 pm
HK News Staffer
ತುಮಕೂರಿನ ಮದರಸಾದಲ್ಲಿ ಸಿಬ್ಬಂದಿಗಳಿಂದ ಮಕ್ಕಳ ಮೇಲೆ...
14-05-26 10:49 am
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; 30 ಸಾವಿರದಿಂದ 28...
13-05-26 09:25 pm
ಹಾಸನದಲ್ಲಿ ಜಿಮ್ ಕಿರಿಕ್; ವರ್ಕೌಟ್ ವೇಳೆ ಭುಜ ಟಚ್ ಆ...
13-05-26 06:36 pm
ಚಾರ್ಜ್ಗೆ ಹಾಕಿದ್ದ ಎಲೆಕ್ಟ್ರಿಕಲ್ ಬೈಕ್ ಸ್ಫೋಟ; ಮ...
13-05-26 03:39 pm