ಬ್ರೇಕಿಂಗ್ ನ್ಯೂಸ್
18-10-20 03:15 pm Mangaluru Reporter ಕರಾವಳಿ
ಉಳ್ಳಾಲ, ಅಕ್ಟೋಬರ್ .18: ಇತ್ತೀಚೆಗೆ ಮೃತಪಟ್ಟ ಯುವಸೇನೆ ಮುಖಂಡ ಎಕ್ಕೂರು ಶುಭಕರ ಶೆಟ್ಟಿ (ಎಕ್ಕೂರು ಬಾಬ) ಅವರ ಸ್ಮರಣಾರ್ಥ ತೊಕ್ಕೊಟ್ಟು ಅಂಬಿಕಾ ರೋಡಿನ ಗಟ್ಟಿ ಸಮಾಜ ಭವನದಲ್ಲಿ ಹಿಂದು ಯುವಸೇನೆ ಪಾಂಚಜನ್ಯ ಶಾಖೆ ತೊಕ್ಕೊಟ್ಟು ಮತ್ತು ಜಿಲ್ಲಾ ವೆನ್ಲಾಕ್ ಆಸ್ಪತ್ರೆ ಸಹಯೋಗದಲ್ಲಿ ಭಾನುವಾರ ಬೃಹತ್ ರಕ್ತದಾನ ಶಿಬಿರ ಆಯೋಜಿಸಲಾಗಿತ್ತು.

ಕಾರ್ಯಕ್ರಮ ಉದ್ಘಾಟಿಸಿದ ಗುರುಪುರ ವಜ್ರದೇಹಿ ಮಠದ ಶ್ರೀ ರಾಜಶೇಖರಾನಂದ ಸ್ವಾಮೀಜಿ ಮಾತನಾಡಿ ಹಿಂದು ಸಮಾಜದ ಹುಲಿಯಂತಿದ್ದ ಬಾಬ ಅವರು ಸಂಘಟನಾತ್ಮಕವಾಗಿ ಅನೇಕ ಯುವಕರ ಮನಸ್ಸನ್ನು ಗೆದ್ದಿದ್ದರು. ಸಾಮಾನ್ಯ ಮನೆತನದ ಹುಡುಗ ಈ ಮಟ್ಟದಲ್ಲಿ ಹೆಸರು ಗಳಿಸಿದ್ದು ನೋಡಿದರೆ ಅಚ್ಚರಿಯಾಗುತ್ತದೆ. ಆಧ್ಯಾತ್ಮದ ಮುಂದೆ ವಿಜ್ಞಾನ ಬೆಳೆಯಲಿಲ್ಲ ಎಂಬ ವಿಚಾರ ಕೊರೊನಾ ಕಾಲಘಟ್ಟದಲ್ಲಿ ಜನರಿಗೆ ಮನದಟ್ಟಾಗಿದೆ. ವಿಜ್ಞಾನವನ್ನು ನಂಬಿ ಕೂತವರು, ನಾಸ್ತಿಕರು ಕೂಡ ಇವತ್ತು ರೋಗ ನಿರ್ಮೂಲನೆಗೆ ದೇವರ ಮೊರೆ ಹೋಗಿದ್ದಾರೆ. ಇಂತಹ ಅರ್ಥಪೂರ್ಣ ಶಿಬಿರಗಳು, ಸೇವೆಗಳ ಮೂಲಕ ಎಕ್ಕೂರು ಬಾಬರ ಹೆಸರನ್ನು ಅಜರಾಮರವನ್ನಾಗಿಸುವ ಕಾರ್ಯ ಯುವಸೇನೆ ಮಾಡಿದೆ ಎಂದರು.

ಹಿಂದು ಯುವಸೇನೆ ಕೇಂದ್ರೀಯ ಮಂಡಳಿ ಅಧ್ಯಕ್ಷರಾದ ಯಶೋಧರ ಚೌಟ ಮಾತನಾಡಿ ಅಂದಿನ ಕಾಲದಲ್ಲಿ ಹಿಂದೂ ಸಂಘಟನೆಗಳನ್ನು ಹುಟ್ಟು ಹಾಕುವುದು ಆಗಲಿ, ಮುನ್ನಡೆಸುವುದಾಗಲಿ ಸುಲಭದ ಮಾತಾಗಿರಲಿಲ್ಲ. ಹಿಂದುತ್ವಕ್ಕೆ ಪ್ರತಿಕೂಲ ವಾತಾವರಣ ಇದ್ದ ಸಂಧರ್ಭದಲ್ಲಿ ಯುವಸೇನೆಯನ್ನು ಮುನ್ನಡೆಸಿದ ಕೀರ್ತಿ ಎಕ್ಕೂರು ಬಾಬಾರಿಗೆ ಸಲ್ಲಬೇಕು ಎಂದರು.
ಶಿಬಿರದಲ್ಲಿ ನೂರಾರು ಮಂದಿ ರಕ್ತದಾನಗೈದು ಮಾದರಿಯಾದರು. ರಕ್ತದಾನಿಗಳಿಗೆ ಟೀ ಶರ್ಟ್ ಮತ್ತು ಪ್ರಮಾಣ ಪತ್ರ ನೀಡಲಾಯಿತು. ಈ ವೇಳೆ ಪ್ರಧಾನ ಮಂತ್ರಿ ಜನ್ ಧನ್ ಖಾತೆ ತೆರೆಯಲು ಉಚಿತ ನೋಂದಣಿ ಪ್ರಕ್ರಿಯೆ ನಡೆಯಿತು.

ಧಾರ್ಮಿಕ ಪರಿಷತ್ ಮಾಜಿ ಸದಸ್ಯ ಕೆ.ಟಿ ಸುವರ್ಣ ಅಧ್ಯಕ್ಷತೆ ವಹಿಸಿದ್ದರು. ಹಿಂದು ಯುವಸೇನೆ ಕೇಂದ್ರೀಯ ಮಂಡಳಿ ಗೌರವಾಧ್ಯಕ್ಷ ಭಾಸ್ಕರಚಂದ್ರ ಶೆಟ್ಟಿ, ಜಿಲ್ಲಾ ಸಮಿತಿ ಅಧ್ಯಕ್ಷ ವೀರಪ್ಪ ಮೂಡುಶೆಡ್ಡೆ, ಉಪಾಧ್ಯಕ್ಷ ಯಾದವ್ ಕುಂದರ್ ವಾಮಂಜೂರು ,ಕಾರ್ಯದರ್ಶಿ ರವಿಚಂದ್ರ ಎಕ್ಕೂರು,ಮಾತೃ ಮಂಡಳಿ ಪ್ರಮುಖರು ಹೇಮ ಪ್ರಕಾಶ್ ಹೆಗ್ಡೆ , ಬಿಜೆಪಿ ಜಿಲ್ಲಾ ಕಾರ್ಯದರ್ಶಿ ಸತೀಶ್ ಕುಂಪಲ, ಮುಖಂಡರಾದ ಚಂದ್ರಶೇಖರ್ ಉಚ್ಚಿಲ್,ಬಿಜೆಪಿ ಯುವಮೋರ್ಚದ ಕ್ಷೇತ್ರ ಅಧ್ಯಕ್ಷ ಸಚಿನ್ ಮೋರೆ, ಉದ್ಯಮಿಗಳಾದ ಸತೀಶ್ ಕರ್ಕೇರ, ಜಯಂತ್ ಕಾಪಿಕಾಡ್, ಜಗದೀಶ್ ಆಚಾರ್ಯ,ಗಣೇಶ್ ಅಂಚನ್ , ಮುಖಂಡರಾದ ದಯಾನಂದ್ ತೊಕ್ಕೊಟ್ಟು, ಲೋಕೇಶ್ ಶೆಟ್ಟಿ, ಹಿಂದೂ ಯುವಸೇನೆ ಪಾಂಚಜನ್ಯ ಶಾಖೆ ಅಧ್ಯಕ್ಷ ದೀಕ್ಷಿತ್ ತೊಕ್ಕೊಟ್ಟು, ಪ್ರವೀಣ್ ಎಸ್.ಕುಂಪಲ, ಪುರುಷೋತ್ತಮ ಕಲ್ಲಾಪು, ಆಶಿಕ್ ಗೋಪಾಲಕೃಷ್ಣ ಮೊದಲಾದವರು ಇದ್ದರು.
In memory of late Yekkur Baba the Hindu Yuva Sena, Thokottu organised a blood donation camp here on Sunday 18 October, 2020.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 02:55 pm
HK News Staffer
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
25-08-26 12:46 pm
HK News Staffer
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am
ಪಡಿತರ ಅಕ್ಕಿ ಸಾಗಾಟದ ಲಾರಿಗೆ ಸ್ಕೂಟರ್ ಢಿಕ್ಕಿ! ಸಚಿ...
24-08-26 09:06 pm
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm