ಬ್ರೇಕಿಂಗ್ ನ್ಯೂಸ್
20-01-23 01:45 pm Mangalore Correspondent ಕರಾವಳಿ
ಮಂಗಳೂರು, ಜ.20 : ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದಲ್ಲಿ ತಲೆಮರೆಸಿಕೊಂಡಿರುವ ಮತ್ತಿಬ್ಬರು ಆರೋಪಿಗಳ ಪತ್ತೆಗೆ ಎನ್ಐಎ ಹತ್ತು ಲಕ್ಷ ಬಹುಮಾನ ಘೋಷಣೆ ಮಾಡಿದೆ.
ಬಂಟ್ವಾಳ ತಾಲೂಕಿನ ಕೋಡಾಜೆ ನಿವಾಸಿ ಮೊಹಮ್ಮದ್ ಷರೀಫ್(53) ಮತ್ತು ಮಿತ್ತೂರು ಕಮ್ಯುನಿಟಿ ಸೆಂಟರಿನ ಮಸೂದ್ ಕೆ.ಎ. ಅಗ್ನಾಡಿ (40) ಪತ್ತೆಗೆ ತಲಾ 5 ಲಕ್ಷ ಬಹುಮಾನ ಘೋಷಣೆ ಮಾಡಲಾಗಿದೆ. ಇವರಿಬ್ಬರು ಕೂಡ ನಿಷೇಧಿತ ಪಿಎಫ್ಐ ಸಂಘಟನೆಯ ನಾಯಕರಾಗಿದ್ದರು. ವಿಟ್ಲ ಬಳಿಯ ಮಿತ್ತೂರಿನ ಕಮ್ಯುನಿಟಿ ಸೆಂಟರಿಗೆ ಪಿಎಫ್ಐ ನಿಷೇಧ ಸಂದರ್ಭದಲ್ಲಿ ದಾಳಿ ನಡೆದಿತ್ತು. ಪಿಎಫ್ಐ ಕಾರ್ಯಕರ್ತರ ಸಭೆ, ತರಬೇತಿ ಕಮ್ಯುನಿಟಿ ಸೆಂಟರಿನಲ್ಲಿ ನಡೀತಿತ್ತು ಎನ್ನುವುದು ತನಿಖೆಯಲ್ಲಿ ಕಂಡುಬಂದಿದ್ದರಿಂದ ಆ ಸೆಂಟರನ್ನು ಜಿಲ್ಲಾಡಳಿತ ಸೀಲ್ ಮಾಡಿತ್ತು.

ಆ ಕಮ್ಯುನಿಟಿ ಸೆಂಟರನ್ನು ಮಸೂದ್ ಅಗ್ನಾಡಿ ನಡೆಸುತ್ತಿದ್ದ ಎನ್ನುವ ವಿಚಾರವೂ ಅಂದು ಹರಿದಾಡಿತ್ತು. ಆನಂತರ, ಮಸೂದ್ ಪೊಲೀಸರ ವಿಚಾರಣೆಗೆ ಸಿಗದೆ ತಲೆಮರೆಸಿಕೊಂಡಿದ್ದ. ಎನ್ಐಎ ಅಧಿಕಾರಿಗಳು ಇದೀಗ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದಲ್ಲಿಯೂ ಮಸೂದ್ ಪಾತ್ರ ಕಂಡುಕೊಂಡಿದ್ದು ಆತನ ಪತ್ತೆಗಾಗಿ ಈಗ ಐದು ಲಕ್ಷ ಬಹುಮಾನ ಘೋಷಣೆ ಮಾಡಿದ್ದಾರೆ.

ಇವರ ಬಗ್ಗೆ ಮಾಹಿತಿ ಇದ್ದರೆ ಬೆಂಗಳೂರಿನ ದೊಮ್ಮಲೂರು ಬಳಿ ಇರುವ ಎನ್ಐಎ ಕಚೇರಿಗೆ ಮಾಹಿತಿ ನೀಡುವಂತೆ ಅಧಿಕಾರಿಗಳು ಮನವಿ ಮಾಡಿದ್ದಾರೆ. ಪ್ರವೀಣ್ ಹತ್ಯೆ ಪ್ರಕರಣದಲ್ಲಿ ಈ ಹಿಂದೆ ನಾಲ್ವರು ಆರೋಪಿಗಳ ಪತ್ತೆಗಾಗಿ ಎನ್ಐಎ 14 ಲಕ್ಷ ಬಹುಮಾನ ಘೋಷಿಸಿತ್ತು. ಆರೋಪಿಗಳು ತಲೆಮರೆಸಿಕೊಂಡಿದ್ದು ಇನ್ನೂ ಕೂಡ ಯಾವುದೇ ಸುಳಿವು ಸಿಕ್ಕಿಲ್ಲ.
The National Investigation Agency (NIA) has announced a cash prize of Rs 5 lac for helping the agency find the whereabouts of two more accused in the murder case of BJP Yuva Morcha leader Praveen Nettaru. Mohammed Sharif and Masood have been identified as accused in the murder case.
18-12-25 11:05 pm
HK News Desk
Byrathi Suresh, Mangalore, Karavali: 'ಕರಾವಳಿಗ...
18-12-25 08:40 pm
ಪರಮೇಶ್ವರ್ ಸಿಎಂ ಆಗಲೆಂದು ಒಕ್ಕಲಿಗ, ಲಿಂಗಾಯತ, ದಲಿತ...
18-12-25 04:31 pm
Shivamogga, Gold Chain Robbery, Police: ಕಾಂಗ್...
18-12-25 02:26 pm
ಹೃದಯಾಘಾತ ; ರಸ್ತೆ ಮೇಲೆ ಬಿದ್ದುಕೊಂಡ ಪತಿಯನ್ನು ರಕ್...
18-12-25 02:09 pm
18-12-25 04:34 pm
HK News Desk
ಸಮವಸ್ತ್ರ ಕಳಪೆಯೆಂದು ಸಹಪಾಠಿಗಳ ಅಣಕ ; ನೊಂದ ನಾಲ್ಕನ...
17-12-25 10:27 pm
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
18-12-25 10:51 pm
Udupi Correspondent
ಬಜ್ಪೆ ಪೊಲೀಸರ ಬಗ್ಗೆ ಅವಹೇಳನ, ಆರೋಪಿಗಳಿಗೆ ರಾಜಾತಿಥ...
18-12-25 10:24 pm
ಮಹೇಶ್ ಶೆಟ್ಟಿ ತಿಮರೋಡಿ ಮತ್ತೆ ರಾಯಚೂರಿಗೆ ಗಡೀಪಾರು...
18-12-25 10:52 am
Dharmasthala case, Chinnayya: ಜಾಮೀನು ಸಿಕ್ಕರೂ...
17-12-25 08:54 pm
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
18-12-25 04:53 pm
Mangaluru Correspondent
ಫ್ಲಾಟ್, ಜಾಗವನ್ನು ಮಾರಾಟ ಮಾಡಿ ಸೈಬರ್ ವಂಚಕರಿಗೆ 2...
17-12-25 11:14 am
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm