ಬ್ರೇಕಿಂಗ್ ನ್ಯೂಸ್
20-01-23 01:45 pm Mangalore Correspondent ಕರಾವಳಿ
ಮಂಗಳೂರು, ಜ.20 : ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದಲ್ಲಿ ತಲೆಮರೆಸಿಕೊಂಡಿರುವ ಮತ್ತಿಬ್ಬರು ಆರೋಪಿಗಳ ಪತ್ತೆಗೆ ಎನ್ಐಎ ಹತ್ತು ಲಕ್ಷ ಬಹುಮಾನ ಘೋಷಣೆ ಮಾಡಿದೆ.
ಬಂಟ್ವಾಳ ತಾಲೂಕಿನ ಕೋಡಾಜೆ ನಿವಾಸಿ ಮೊಹಮ್ಮದ್ ಷರೀಫ್(53) ಮತ್ತು ಮಿತ್ತೂರು ಕಮ್ಯುನಿಟಿ ಸೆಂಟರಿನ ಮಸೂದ್ ಕೆ.ಎ. ಅಗ್ನಾಡಿ (40) ಪತ್ತೆಗೆ ತಲಾ 5 ಲಕ್ಷ ಬಹುಮಾನ ಘೋಷಣೆ ಮಾಡಲಾಗಿದೆ. ಇವರಿಬ್ಬರು ಕೂಡ ನಿಷೇಧಿತ ಪಿಎಫ್ಐ ಸಂಘಟನೆಯ ನಾಯಕರಾಗಿದ್ದರು. ವಿಟ್ಲ ಬಳಿಯ ಮಿತ್ತೂರಿನ ಕಮ್ಯುನಿಟಿ ಸೆಂಟರಿಗೆ ಪಿಎಫ್ಐ ನಿಷೇಧ ಸಂದರ್ಭದಲ್ಲಿ ದಾಳಿ ನಡೆದಿತ್ತು. ಪಿಎಫ್ಐ ಕಾರ್ಯಕರ್ತರ ಸಭೆ, ತರಬೇತಿ ಕಮ್ಯುನಿಟಿ ಸೆಂಟರಿನಲ್ಲಿ ನಡೀತಿತ್ತು ಎನ್ನುವುದು ತನಿಖೆಯಲ್ಲಿ ಕಂಡುಬಂದಿದ್ದರಿಂದ ಆ ಸೆಂಟರನ್ನು ಜಿಲ್ಲಾಡಳಿತ ಸೀಲ್ ಮಾಡಿತ್ತು.

ಆ ಕಮ್ಯುನಿಟಿ ಸೆಂಟರನ್ನು ಮಸೂದ್ ಅಗ್ನಾಡಿ ನಡೆಸುತ್ತಿದ್ದ ಎನ್ನುವ ವಿಚಾರವೂ ಅಂದು ಹರಿದಾಡಿತ್ತು. ಆನಂತರ, ಮಸೂದ್ ಪೊಲೀಸರ ವಿಚಾರಣೆಗೆ ಸಿಗದೆ ತಲೆಮರೆಸಿಕೊಂಡಿದ್ದ. ಎನ್ಐಎ ಅಧಿಕಾರಿಗಳು ಇದೀಗ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದಲ್ಲಿಯೂ ಮಸೂದ್ ಪಾತ್ರ ಕಂಡುಕೊಂಡಿದ್ದು ಆತನ ಪತ್ತೆಗಾಗಿ ಈಗ ಐದು ಲಕ್ಷ ಬಹುಮಾನ ಘೋಷಣೆ ಮಾಡಿದ್ದಾರೆ.

ಇವರ ಬಗ್ಗೆ ಮಾಹಿತಿ ಇದ್ದರೆ ಬೆಂಗಳೂರಿನ ದೊಮ್ಮಲೂರು ಬಳಿ ಇರುವ ಎನ್ಐಎ ಕಚೇರಿಗೆ ಮಾಹಿತಿ ನೀಡುವಂತೆ ಅಧಿಕಾರಿಗಳು ಮನವಿ ಮಾಡಿದ್ದಾರೆ. ಪ್ರವೀಣ್ ಹತ್ಯೆ ಪ್ರಕರಣದಲ್ಲಿ ಈ ಹಿಂದೆ ನಾಲ್ವರು ಆರೋಪಿಗಳ ಪತ್ತೆಗಾಗಿ ಎನ್ಐಎ 14 ಲಕ್ಷ ಬಹುಮಾನ ಘೋಷಿಸಿತ್ತು. ಆರೋಪಿಗಳು ತಲೆಮರೆಸಿಕೊಂಡಿದ್ದು ಇನ್ನೂ ಕೂಡ ಯಾವುದೇ ಸುಳಿವು ಸಿಕ್ಕಿಲ್ಲ.
The National Investigation Agency (NIA) has announced a cash prize of Rs 5 lac for helping the agency find the whereabouts of two more accused in the murder case of BJP Yuva Morcha leader Praveen Nettaru. Mohammed Sharif and Masood have been identified as accused in the murder case.
19-06-26 04:18 pm
HK News Staffer
ರೈ ಅವರೇ ಧನ ಸಹಾಯ ಮಾಡಿ ಬುರುಡೆ ಗ್ಯಾಂಗ್ ನಡೆಸುತ್ತ...
18-06-26 09:57 pm
ಪರಿಷತ್ ಚುನಾವಣೆ; ಮೈತ್ರಿ ಪಕ್ಷಕ್ಕೆ ತೀವ್ರ ಮುಖಭಂಗ,...
18-06-26 07:15 pm
ಆರೆಸ್ಸೆಸ್ ನೋಂದಣಿ ; ಪ್ರಿಯಾಂಕ ಖರ್ಗೆ ಪತ್ರಕ್ಕೆ ಸಾ...
18-06-26 01:25 pm
Jayadeva Hospital, Mysuru: ಮೈಸೂರಿನ ಜಯದೇವ ಆಸ್ಪ...
18-06-26 01:17 pm
18-06-26 07:17 pm
HK News Staffer
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
19-06-26 03:31 pm
HK News Staffer
ಅಸ್ಸಾಂ ಕಾರ್ಮಿಕರಿಗೆ ಪೊಲೀಸ್ ಕ್ಲಿಯರೆನ್ಸ್ ಸರ್ಟಿಫಿ...
19-06-26 12:24 pm
Bejai, Kadri Water Issue: ಬಿಜೈ, ಕದ್ರಿಗೆ ಕಲುಷಿ...
18-06-26 12:33 pm
ಬಸ್ಸೋ, ಬಸ್ ನಿಲ್ದಾಣವೋ ? ಗುರುಪುರ ಬಂಡಸಾಲೆಯಲ್ಲಿ ವ...
16-06-26 11:35 am
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
19-06-26 05:47 pm
HK News Staffer
Bhatkal News: ಭಟ್ಕಳದಲ್ಲಿ ಮತ್ತೆ ಕೋಮು ಸಂಘರ್ಷ ;...
18-06-26 01:20 pm
ಸ್ಕೂಟರಲ್ಲಿ ನಾಲ್ವರು ಹೆಣ್ಮಕ್ಕಳ ಜಾಲಿ ರೈಡ್; ನಿಯಂತ...
17-06-26 01:41 pm
ವಾಯುಪಡೆ ಅಧಿಕಾರಿ ಪತ್ನಿಗೆ ಅಮಲು ಪದಾರ್ಥ ನೀಡಿ ಅತ್ಯ...
16-06-26 08:32 pm
SIT Car Accident: ಎಸ್ಐಟಿ ಎಸ್ಪಿ ಸೈಮನ್ ಪ್ರಯಾಣಿಸ...
16-06-26 05:10 pm