ವಕೀಲನಿಗೆ ಹಲ್ಲೆ ಪ್ರಕರಣ ;  ಪುಂಜಾಲಕಟ್ಟೆ ಎಸ್ಐಗೆ 3 ಲಕ್ಷ ದಂಡ ನೀಡಿ ಹೈಕೋರ್ಟ್ ಆದೇಶ

20-01-23 03:32 pm       Mangalore Correspondent   ಕರಾವಳಿ

ಪ್ರಕರಣ ಒಂದಕ್ಕೆ ಸಂಬಂಧಿಸಿ ಯುವ ವಕೀಲನನ್ನು ರಾತ್ರೋರಾತ್ರಿ ಮನೆಗೆ ನುಗ್ಗಿ ಎಳೆತಂದು ಹಲ್ಲೆ ನಡೆಸಿದ ಆರೋಪದಲ್ಲಿ ಅಮಾನತಿಗೆ ಒಳಗಾಗಿರುವ ಪುಂಜಾಲಕಟ್ಟೆ ಪೊಲೀಸ್ ಸಬ್ ಇನ್ಸ್‌ಪೆಕ್ಟರ್ ಸುತೇಶ್ ಅವರಿಗೆ ಹೈಕೋರ್ಟ್ ಚಾಟಿ ಬೀಸಿದ್ದು ಸಂತ್ರಸ್ತ ವಕೀಲನಿಗೆ ಮೂರು ಲಕ್ಷ ರೂಪಾಯಿ ಪರಿಹಾರ ನೀಡುವಂತೆ ಆದೇಶಿಸಿದೆ. 

ಮಂಗಳೂರು, ಜ.20 : ಪ್ರಕರಣ ಒಂದಕ್ಕೆ ಸಂಬಂಧಿಸಿ ಯುವ ವಕೀಲನನ್ನು ರಾತ್ರೋರಾತ್ರಿ ಮನೆಗೆ ನುಗ್ಗಿ ಎಳೆತಂದು ಹಲ್ಲೆ ನಡೆಸಿದ ಆರೋಪದಲ್ಲಿ ಅಮಾನತಿಗೆ ಒಳಗಾಗಿರುವ ಪುಂಜಾಲಕಟ್ಟೆ ಪೊಲೀಸ್ ಸಬ್ ಇನ್ಸ್‌ಪೆಕ್ಟರ್ ಸುತೇಶ್ ಅವರಿಗೆ ಹೈಕೋರ್ಟ್ ಚಾಟಿ ಬೀಸಿದ್ದು ಸಂತ್ರಸ್ತ ವಕೀಲನಿಗೆ ಮೂರು ಲಕ್ಷ ರೂಪಾಯಿ ಪರಿಹಾರ ನೀಡುವಂತೆ ಆದೇಶಿಸಿದೆ. 

ಪುಂಜಾಲಕಟ್ಟೆ ಠಾಣೆಯ ಸಬ್‌ ಇನ್ಸ್‌ಪೆಕ್ಟರ್ ಕೆ.ಪಿ.ಸುತೇಶ್ ತನ್ನ ಮೇಲೆ ಹಲ್ಲೆ ನಡೆಸಿದ್ದು, ಅವರ ವಿರುದ್ಧ ಎಫ್‌ಐಆರ್ ದಾಖಲಿಸಿ ತನಿಖೆ ನಡೆಸಬೇಕು. ಹಲ್ಲೆಗೊಳಗಾದ ತನಗೆ ಪರಿಹಾರ ನೀಡಬೇಕು ಎಂದು ಯುವ ವಕೀಲ ಕುಲದೀಪ್ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು.

ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ನೇತೃತ್ವದ ಏಕಸದಸ್ಯ ಪೀಠ ಕುಲದೀಪ್ ಅವರಿಗೆ ಪರಿಹಾರ ನೀಡಲು ಆದೇಶಿಸಿದೆ. ಪರಿಹಾರ ಮೊತ್ತವನ್ನು ತಪ್ಪಿತಸ್ಥ ಪೊಲೀಸ್ ಅಧಿಕಾರಿಗಳ ವೇತನದಿಂದ ವಸೂಲಿ ಮಾಡಬೇಕು ಎಂದು ಆದೇಶಿಸಿದೆ. ಅಲ್ಲದೆ, ತಪ್ಪಿತಸ್ಥ ಅಧಿಕಾರಿಯ ಇಲಾಖಾ ವಿಚಾರಣೆ ಬಗ್ಗೆ ವರದಿಯನ್ನು ಹೈಕೋರ್ಟಿಗೆ ಸಲ್ಲಿಸಬೇಕೆಂದು ನ್ಯಾಯಾಲಯ ಆದೇಶ ಮಾಡಿದೆ.

Mangalore Punjalkatte Police Sub Inspector Sutesh Assault Case on lawyer, court slaps three lakhs fine. The IGP Western Range Dr Chandra Gupta has suspended Punjalkatte Police Sub Inspector Suthesh on December 11, for assaulting young advocate Kuldeep Shetty.