ಬ್ರೇಕಿಂಗ್ ನ್ಯೂಸ್
21-01-23 03:26 pm Mangalore Correspondent ಕರಾವಳಿ
ಮಂಗಳೂರು, ಜ.21 : ಭಾರತೀಯ ನೌಕಾಪಡೆಯಲ್ಲಿ ಲೆಫ್ಟಿನೆಂಟ್ ಕಮಾಂಡರ್ ಆಗಿರುವ ಮಂಗಳೂರು ಮೂಲದ ದಿಶಾ ಅಮೃತ್ ಈ ಬಾರಿ ದೆಹಲಿಯ ಗಣರಾಜ್ಯೋತ್ಸವ ಪಥಸಂಚಲನದಲ್ಲಿ ನೌಕಾಪಡೆಯ ತುಕಡಿಯನ್ನು ಮುನ್ನಡೆಸಲಿದ್ದಾರೆ. ನೌಕಾಪಡೆಯ 144 ಮಂದಿ ಯುವ ಯೋಧರು ಮತ್ತು “ನಾರಿಶಕ್ತಿ’ ಎನ್ನುವ ಸ್ತಬ್ಧಚಿತ್ರಕ್ಕೆ ದಿಶಾ ನೇತೃತ್ವ ನೀಡಲಿದ್ದಾರೆ.
2016ರಲ್ಲಿ ನೌಕಾ ಪಡೆ ಸೇರಿದ್ದ ದಿಶಾ ತರಬೇತಿ ಮುಗಿಸಿ 2017ರಲ್ಲಿ ಅಂಡಮಾನ್ ದ್ವೀಪದಲ್ಲಿ ಕರ್ತವ್ಯಕ್ಕೆ ನಿಯೋಜನೆಗೊಂಡಿದ್ದರು. ಚಿಕ್ಕಂದಿನಲ್ಲೇ ಸೇನೆಗೆ ಸೇರಬೇಕು ಎಂಬ ತುಡಿತ ಇತ್ತು. ತಂದೆಗೂ ಸೇನೆ ಸೇರಬೇಕೆಂಬ ಆಸೆ ಇತ್ತು. ನಾನು ಸೇನೆ ಸೇರುವುದಕ್ಕೆ ಪೋಷಕರೇ ಸ್ಫೂರ್ತಿ. ಈಗ ನಾನು ನೌಕಾಪಡೆ ಸೇರಿರುವುದಕ್ಕೆ ಹೆಮ್ಮೆಯೆನಿಸುತ್ತಿದೆ ಎಂದಿದ್ದಾರೆ ದಿಶಾ ಅಮೃತ್.
ಮಂಗಳೂರಿನ ಬೋಳೂರು ನಿವಾಸಿ ಅಮೃತ್ ಕುಮಾರ್ ಮತ್ತು ಲೀಲಾ ದಂಪತಿಯ ಪುತ್ರಿಯಾಗಿರುವ ದಿಶಾ, ಪ್ರಾಥಮಿಕ ಶಿಕ್ಷಣದಿಂದ ಪಿಯುಸಿ ವರೆಗೆ ಕೆನರಾ ಶಿಕ್ಷಣ ಸಂಸ್ಥೆಯಲ್ಲಿ ಶಿಕ್ಷಣ ಪಡೆದಿದ್ದರು. ಹೈಸ್ಕೂಲ್ ನಲ್ಲಿದ್ದಾಗಲೇ ಎನ್ಸಿಸಿ ಕೇಡೆಟ್ ಆಗಿದ್ದರು. ಬಳಿಕ ಬೆಂಗಳೂರಿನ ಬಿಎಂಎಸ್ ಶಿಕ್ಷಣ ಸಂಸ್ಥೆಯಲ್ಲಿ ಬಿಇ ಕಂಪ್ಯೂಟರ್ ಸೈನ್ಸ್ ಮಾಡಿದ್ದರು. ಆನಂತರ ಪರೀಕ್ಷೆ ಬರೆದು ನೌಕಾಪಡೆಗೆ ಆಯ್ಕೆಯಾಗಿದ್ದರು. ಸದ್ಯ ನೌಕಾಪಡೆಯಲ್ಲಿ ಅಂಡಮಾನ್ ನಿಕೋಬಾರ್ನಲ್ಲಿ ಲೆಫ್ಟಿನೆಂಟ್ ಕಮಾಂಡರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.
ನಾರಿಶಕ್ತಿ ಪ್ರದರ್ಶನದಲ್ಲಿ ನೌಕಾಪಡೆಯ ಯುವ ಮಹಿಳಾ ವಿಭಾಗದ ಸಿಬಂದಿ ಪ್ರದರ್ಶನ ನೀಡಲಿದ್ದಾರೆ. ಡಾರ್ನಿಯರ್ ಯುದ್ಧ ವಿಮಾನದ ಪ್ರತಿಕೃತಿಯೂ ಇರಲಿದ್ದು, ಮಹಿಳೆಯರು ಸಾಧನೆ ತೋರಲಿದ್ದಾರೆ.
Lieutenant commander (Lt Cdr) of Indian Navy, Disha Amrith, native of the city, will lead the naval contingent in the Republic Day parade.
The contingent has 144 youth soldiers of the navy and a tableau of Narishakti. Three women officers and five Agniveer men will also be part of the contingent. Sub Lt Valli Meena will also accompany Lt Cdr Disha Amrith.
14-07-25 01:43 pm
HK News Desk
Dr B Saroja Devi Death: 17ನೇ ವಯಸ್ಸಲ್ಲೇ ಚಿತ್ರರ...
14-07-25 12:50 pm
Mantralaya, Tungabhadra River, drowning: ತುಂಬ...
13-07-25 08:37 pm
ಆಧ್ಯಾತ್ಮಿಕ ಸಾಧನೆಯತ್ತ ಚಿತ್ತ ; ಗೋಕರ್ಣ ಬಳಿಯ ದಟ್ಟ...
13-07-25 04:03 pm
Shivamogga Jail News, Mobile phone: ಶಿವಮೊಗ್ಗ...
12-07-25 10:47 pm
14-07-25 03:24 pm
HK News Desk
ಅಹ್ಮದಾಬಾದ್ ವಿಮಾನ ದುರಂತ ; ಭಾರೀ ಅನುಮಾನ ಹುಟ್ಟಿಸಿ...
12-07-25 09:25 pm
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
Coimbatore Serial Blasts, 'Tailor Raja' Arres...
11-07-25 12:08 pm
13-07-25 11:13 pm
Mangalore Correspondent
Mangalore News: ಸಾರಿಗೆ ಕಚೇರಿಗಳಿಗೆ ಸ್ವಂತ ಕಟ್ಟಡ...
13-07-25 11:11 pm
Mangalore, E Bus, MP Chowta: ಕೇಂದ್ರ ಸರ್ಕಾರದಿಂ...
13-07-25 10:12 pm
Mangalore DK Transport, DK Group Alwyn Joel N...
13-07-25 07:00 pm
ಬೆಳ್ತಂಗಡಿ ; ಶಿಕ್ಷಕಿಯಾಗಿದ್ದ ವಿವಾಹಿತ ಮಹಿಳೆ ನೇಣು...
13-07-25 05:56 pm
13-07-25 05:23 pm
Bangalore Correspondent
ಅಪ್ರಾಪ್ತ ಬಾಲಕಿಯನ್ನು ಶಾಲೆಗೆ ಕರೆದೊಯ್ಯುವ ನೆಪದಲ್ಲ...
12-07-25 11:10 pm
Dowry Harassment, Mysuru: ಮದುವೆಯಾದ ಎರಡೇ ತಿಂಗಳ...
12-07-25 01:32 pm
Mangalore Job Fraud, KCOCA, Police: ಫಾರಿನ್ ಉದ...
12-07-25 11:59 am
Robbery, Gold Workshop in Kalaburagi: ಕಲಬುರಗಿ...
11-07-25 10:10 pm