ಬ್ರೇಕಿಂಗ್ ನ್ಯೂಸ್
22-01-23 01:26 pm Mangalore Correspondent ಕರಾವಳಿ
ಮಂಗಳೂರು, ಜ 22; ಪ್ರಯಾಣಿಕರ ಬೇಡಿಕೆಗೆ ಭಾರತೀಯ ರೈಲ್ವೆ ಮಣಿದಿದೆ. ಮುರುಡೇಶ್ವರ- ಬೆಂಗಳೂರು ನಡುವಿನ ರೈಲು ಸೇವೆಯನ್ನು 2023ರ ಮೇ ತಿಂಗಳ ಕೊನೆಯ ತನಕ ವಿಸ್ತರಣೆ ಮಾಡಿ ಆದೇಶ ಹೊರಡಿಸಿದೆ.
ಚಳಿಗಾಲದ ಅವಧಿಗಾಗಿ ಜನವರಿ ಅಂತ್ಯದ ತನಕ ಮಾತ್ರ ಮುರುಡೇಶ್ವರ-ಪಡೀಲ್ ಬೈಪಾಸ್-ಯಶವಂತಪುರ ನಡುವೆ ಸಾಪ್ತಾಹಿಕ ವಿಶೇಷ ಎಕ್ಸ್ಪ್ರೆಸ್ ರೈಲು ಘೋಷಣೆ ಮಾಡಲಾಗಿತ್ತು.

ಕರಾವಳಿ ಭಾಗದ ಜನರು ಈ ರೈಲು ಸೇವೆ ವಿಸ್ತರಣೆ ಮಾಡಬೇಕು ಎಂದು ಬೇಡಿಕೆ ಇಟ್ಟಿದ್ದರು. ನೈಋತ್ಯ ರೈಲ್ವೆ ಈ ವಿಶೇಷ ಎಕ್ಸ್ಪ್ರೆಸ್ ರೈಲು ಸೇವೆಯನ್ನು ಮೇ ತಿಂಗಳ ಅಂತ್ಯದ ತನಕ ವಿಸ್ತರಣೆ ಮಾಡಿ ಆದೇಶ ಹೊರಡಿಸಿದೆ.
ಈ ರೈಲಿಗೆ ಪ್ರಯಾಣಿಕರಿಂದಲೂ ಉತ್ತಮ ಪ್ರತಿಕ್ರಿಯೆ ಸಿಗುತ್ತಿದೆ. ಹೆಚ್ಚಿನ ಪ್ರಯಾಣಿಕರು ಇರುವ ಹಿನ್ನಲೆಯಲ್ಲಿ ಈ ರೈಲನ್ನು ಪ್ರತಿದಿನ ಓಡಿಸಬೇಕು ಎಂದು ಸಹ ಕುಂದಾಪುರ ರೈಲ್ವೆ ಹಿತರಕ್ಷಣಾ ಸಮಿತಿ ಒತ್ತಾಯಿಸುತ್ತಿದೆ.
ವೇಳಾಪಟ್ಟಿ;
ಈ ರೈಲು ಬೆಂಗಳೂರು ನಗರದ ಯಶವಂತಪುರದಿಂದ ಶನಿವಾರ ರಾತ್ರಿ 11.55ಕ್ಕೆ ಹೊರಡಲಿದೆ. ಮರುದಿನ ಮಧ್ಯಾಹ್ನ 1 ಗಂಟೆಗೆ ಮುರುಡೇಶ್ವರ ತಲುಪಲಿದೆ. ಮುರುಡೇಶ್ವರದಿಂದ ಭಾನುವಾರ ಮಧ್ಯಾಹ್ನ 1.30ಕ್ಕೆ ಹೊರಟು, ಮರುದಿನ ಮುಂಜಾನೆ 4 ಗಂಟೆಗೆ ಯಶವಂತಪುರ ತಲುಪುತ್ತದೆ.
ವಾರಾಂತ್ಯದ ಶನಿವಾರ ಬೆಂಗಳೂರಿನಿಂದ ರಾತ್ರಿ ತಡವಾಗಿ ರೈಲು ಹೊರಡುವ ಕಾರಣದಿಂದ ಬೆಂಗಳೂರಿನಲ್ಲಿರುವ ದಕ್ಷಿಣ ಕನ್ನಡ, ಉಡುಪಿ, ಕುಂದಾಪುರ ಕಡೆಯ ಜನರು ಸಂಚಾರ ನಡೆಸಲು ಅನುಕೂಲವಾಗಿತ್ತು.
ಈ ರೈಲು ಸೇವೆಗೆ ಉತ್ತಮ ಪ್ರತಿಕ್ರಿಯೆ ಇದೆ. ಎಲ್ಲಾ ಸೀಟುಗಳು ಭರ್ತಿಯಾಗಿ ವೈಟಿಂಗ್ ಲಿಸ್ಟ್ನಲ್ಲಿ ಜನರು ಕಾಯಬೇಕಿತ್ತು. ಆದ್ದರಿಂದ ಈ ರೈಲನ್ನು ಪ್ರತಿದಿನ ಓಡಿಸಬೇಕು ಎಂದು ಬೇಡಿಕೆ ಇಡಲಾಗಿದೆ.
ಮುರುಡೇಶ್ವರ-ಪಡೀಲ್ ಬೈಪಾಸ್-ಯಶವಂತಪುರ ನಡುವೆ ಸಾಪ್ತಾಹಿಕ ವಿಶೇಷ ಎಕ್ಸ್ಪ್ರೆಸ್ ರೈಲು ಡಿಸೆಂಬರ್ 10 ರಿಂದ ಜನವರಿ 29ರ ತನಕ ಸಂಚಾರ ನಡೆಸಲಿದೆ ಎಂದು ನೈಋತ್ಯ ರೈಲ್ವೆ ಈ ಮೊದಲು ಘೋಷಣೆ ಮಾಡಿತ್ತು. ಈಗ ಮತ್ತೆ ರೈಲು ಸೇವೆಯನ್ನು ಮೇ ಅಂತ್ಯದ ತನಕ ವಿಸ್ತರಣೆ ಮಾಡಲಾಗಿದೆ.
ಮುರುಡೇಶ್ವರ ಬೆಂಗಳೂರು ನಡುವೆ ರೈಲು ಸಂಖ್ಯೆ 06564, 06563 ರೈಲು ಸಂಚಾರ ನಡೆಸುತ್ತದೆ. ಈ ರೈಲು ಯಶವಂತಪುರದಿಂದ ಹೊರಟು ಚಿಕ್ಕಬಾಣಾವರ, ನೆಲಮಂಗಲ, ಕುಣಿಗಲ್, ಶ್ರವಣಬೆಳಗೊಳ, ಚನ್ನರಾಯಪಟ್ಟಣ, ಹಾಸನ, ಸಕಲೇಶಪುರ, ಸುಬ್ರಮಣ್ಯ ರಸ್ತೆ, ಕಬಕ ಪುತ್ತೂರು, ಬಂಟ್ವಾಳ, ಸುರತ್ಕಲ್, ಮೂಲ್ಕಿ, ಉಡುಪಿ, ಬಾರ್ಕೂರು, ಕುಂದಾಪುರ, ಬೈಂದೂರು, ಭಟ್ಕಳ ಮಾರ್ಗವಾಗಿ ಮುರುಡೇಶ್ವರಕ್ಕೆ ತಲುಪಲಿದೆ.
ಬೆಂಗಳೂರಿನ ಯಶವಂತಪುರದಿಂದ-ಮುರುಡೇಶ್ವರಕ್ಕೆ ಈ ವಿಶೇಷ ರೈಲು ವಾರಕ್ಕೆ ಒಮ್ಮೆ ಸಂಚಾರ ನಡೆಸುತ್ತದೆ. ಆದರೆ ರೈಲು ದಕ್ಷಿಣ ಕನ್ನಡ, ಉಡುಪಿ ಮೂಲಕ ಸಾಗುವುದರಿಂದ ನೂರಾರು ಜನರಿಗೆ ಅನುಕೂಲವಾಗಲಿದೆ. ಈ ರೈಲು ಸೇವೆಗೆ ಜನರ ಪ್ರತಿಕ್ರಿಯೆ ಹೀಗೆ ಮುಂದುವರೆದರೆ ಮತ್ತೆ ಅದನ್ನು ವಿಸ್ತರಣೆ ಮಾಡಲಾಗುತ್ತದೆ.
ವೇಗ ಪರೀಕ್ಷೆ;
ನೈಋತ್ಯ ರೈಲ್ವೆಯ ಪ್ರಧಾನ ಮುಖ್ಯ ಎಲೆಕ್ಟ್ರಿಕಲ್ ಇಂಜಿನಿಯರ್ ಜೈಪಾಲ್ ಸಿಂಗ್ ಶನಿವಾರ ಮೈಸೂರು ವಿಭಾಗದ ಮಾಸರಹಳ್ಳಿ-ಶಿವಮೊಗ್ಗ ಸಿಂಗಲ್ ಲೈನ್ ವಿಭಾಗದಲ್ಲಿ ರೈಲ್ವೆ ವಿದ್ಯುದ್ದೀಕರಣ ಕಾಮಗಾರಿಯ ಪರಿಶೀಲನೆ ನಡೆಸಿದರು. ಗಂಟೆಗೆ 90 ಕಿ. ಮೀ. ವೇಗದಲ್ಲಿ ವೇಗ ಪರೀಕ್ಷೆಯನ್ನು ಯಶಸ್ವಿಯಾಗಿ ನಡೆಸಿದರು.
ಮತ್ತೊಂದು ಕಡೆ ಲೋಂಡಾ-ಮೀರಜ್ ಡಬ್ಲಿಂಗ್ ಯೋಜನೆಯ ಭಾಗವಾಗಿ ಗೋಕಾಕ್-ಘಟಪ್ರಭಾ ನಿಲ್ದಾಣಗಳ ನಡುವಿನ ಸೇತುವೆ ಸಂಖ್ಯೆ 125ರಲ್ಲಿ ಹೊಸದಾಗಿ ದ್ವಿಗುಣಗೊಂಡ ಮಾರ್ಗದಲ್ಲಿ ವೇಗ ಪ್ರಯೋಗ ನಡೆಸಲಾಯಿತು. ರೈಲು ಗಂಟೆಗೆ 120 ಕಿ. ಮೀ. ಗರಿಷ್ಠ ವೇಗದಲ್ಲಿ ಸಾಗಿದೆ.
Murudeshwar bangalore train extended till may end by railway department.
19-06-26 04:18 pm
HK News Staffer
ರೈ ಅವರೇ ಧನ ಸಹಾಯ ಮಾಡಿ ಬುರುಡೆ ಗ್ಯಾಂಗ್ ನಡೆಸುತ್ತ...
18-06-26 09:57 pm
ಪರಿಷತ್ ಚುನಾವಣೆ; ಮೈತ್ರಿ ಪಕ್ಷಕ್ಕೆ ತೀವ್ರ ಮುಖಭಂಗ,...
18-06-26 07:15 pm
ಆರೆಸ್ಸೆಸ್ ನೋಂದಣಿ ; ಪ್ರಿಯಾಂಕ ಖರ್ಗೆ ಪತ್ರಕ್ಕೆ ಸಾ...
18-06-26 01:25 pm
Jayadeva Hospital, Mysuru: ಮೈಸೂರಿನ ಜಯದೇವ ಆಸ್ಪ...
18-06-26 01:17 pm
18-06-26 07:17 pm
HK News Staffer
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
19-06-26 03:31 pm
HK News Staffer
ಅಸ್ಸಾಂ ಕಾರ್ಮಿಕರಿಗೆ ಪೊಲೀಸ್ ಕ್ಲಿಯರೆನ್ಸ್ ಸರ್ಟಿಫಿ...
19-06-26 12:24 pm
Bejai, Kadri Water Issue: ಬಿಜೈ, ಕದ್ರಿಗೆ ಕಲುಷಿ...
18-06-26 12:33 pm
ಬಸ್ಸೋ, ಬಸ್ ನಿಲ್ದಾಣವೋ ? ಗುರುಪುರ ಬಂಡಸಾಲೆಯಲ್ಲಿ ವ...
16-06-26 11:35 am
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
19-06-26 05:47 pm
HK News Staffer
Bhatkal News: ಭಟ್ಕಳದಲ್ಲಿ ಮತ್ತೆ ಕೋಮು ಸಂಘರ್ಷ ;...
18-06-26 01:20 pm
ಸ್ಕೂಟರಲ್ಲಿ ನಾಲ್ವರು ಹೆಣ್ಮಕ್ಕಳ ಜಾಲಿ ರೈಡ್; ನಿಯಂತ...
17-06-26 01:41 pm
ವಾಯುಪಡೆ ಅಧಿಕಾರಿ ಪತ್ನಿಗೆ ಅಮಲು ಪದಾರ್ಥ ನೀಡಿ ಅತ್ಯ...
16-06-26 08:32 pm
SIT Car Accident: ಎಸ್ಐಟಿ ಎಸ್ಪಿ ಸೈಮನ್ ಪ್ರಯಾಣಿಸ...
16-06-26 05:10 pm