ಬ್ರೇಕಿಂಗ್ ನ್ಯೂಸ್
23-01-23 12:38 pm Mangalore Correspondent ಕರಾವಳಿ
ಮಂಗಳೂರು, ಜ.23 : ಒಂದು ವರ್ಷದ ಹಿಂದೆ ಪ್ರೀತಿಸಿ ಮದುವೆಯಾಗಿದ್ದ ಯುವತಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಸುರತ್ಕಲ್ ಠಾಣೆ ವ್ಯಾಪ್ತಿಯ ಬಾಳ ಗ್ರಾಮದ ಒಟ್ಟೆಕಾಯರ್ ಎಂಬಲ್ಲಿ ನಡೆದಿದೆ.
ದಿವ್ಯಾ(26) ಮೃತ ಯುವತಿ. ಉಳ್ಳಾಲ ಕೋಟೆಕಾರಿನ ಮಾಡೂರು ನಿವಾಸಿ ಚಂದ್ರಶೇಖರ್ ಮತ್ತು ಗಿರಿಜಾ ದಂಪತಿಯ ಪುತ್ರಿ ದಿವ್ಯಾ(26) ಒಂದು ವರ್ಷದ ಹಿಂದೆ ಹರೀಶ್ ಎಂಬವರನ್ನು ಪ್ರೀತಿಸಿ ಮದುವೆಯಾಗಿದ್ದರು. ದಿವ್ಯಾ ಮೆಡಿಕಲ್ ಶಾಪ್ ನಲ್ಲಿ ಕೆಲಸ ಮಾಡುತ್ತಿದ್ದರೆ, ಪತಿ ಹರೀಶ್ ಸುರತ್ಕಲ್ ನಲ್ಲಿ ಆಟೋ ಓಡಿಸುತ್ತಿದ್ದರು.
ಜನವರಿ 21ರಂದು ರಾತ್ರಿ ದಿವ್ಯಾ ಮತ್ತು ಪತಿ ಹರೀಶ್ ನೆರೆಮನೆಯಲ್ಲಿ ನಡೆದ ಕಾರ್ಯಕ್ರಮಕ್ಕೆ ತೆರಳಿದ್ದರು. ಅಲ್ಲಿದ್ದಾಗ ದಂಪತಿ ನಡುವೆ ಮನಸ್ತಾಪ ಉಂಟಾಗಿದ್ದು ಇದರಿಂದ ಬೇಸರಗೊಂಡಿದ್ದ ದಿವ್ಯಾ ರಾತ್ರಿ ಒಬ್ಬಳೇ ಮನೆಗೆ ಹಿಂದಿರುಗಿದ್ದರು. ಹರೀಶ್ ಆಬಳಿಕ ಬರುತ್ತೇನೆಂದು ಅಲ್ಲಿಯೇ ಉಳಿದಿದ್ದರು. ಇದರಿಂದ ಅಸಮಾಧಾನಗೊಂಡಿದ್ದ ದಿವ್ಯಾ ಜ.22ರಂದು ಸಂಜೆ ತನ್ನ ಮನೆಯ ಬೆಡ್ ರೂಂನಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಮೃತರ ತಾಯಿ ಪೊಲೀಸ್ ದೂರಿನಲ್ಲಿ ತಿಳಿಸಿದ್ದಾರೆ.
ಮನೆಯ ಬೆಡ್ ರೂಮ್ ಕಿಟಕಿಯಲ್ಲಿ ಶಾಲನ್ನು ಕುತ್ತಿಗೆಗೆ ಬಿಗಿದು ಸಾವನ್ನಪ್ಪಿದ ಸ್ಥಿತಿಯಲ್ಲಿ ದೇಹ ಪತ್ತೆಯಾಗಿದೆ. ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡಿರುವ ಸುರತ್ಕಲ್ ಠಾಣಾ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
Mangalore Surathkal, 26 year old married woman commits suicide. The deceased has been identified as Divya. It is said she was married a year ago and was working in a medical shop. Some clash during a function at the neighbours house between husband and wife has resulted in suicide.
05-09-26 04:53 pm
HK News Staffer
400 ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ; ಪ್ರತಿ ಹ...
02-09-26 05:06 pm
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
ADGP Chandrashekhar, Seemanth Kumar Singh: ಅಧ...
30-08-26 07:31 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
05-09-26 04:58 pm
HK News Staffer
ಬೆಂಗಳೂರು-ಮಂಗಳೂರು ವಂದೇ ಭಾರತ್ಗೆ ಮತ್ತೊಂದು ಟೆಸ್ಟ...
05-09-26 11:59 am
ಕೆಆರ್ ಐಡಿಎಲ್ ಕಮಿಷನ್ ಆರೋಪದಿಂದ ಮಾನಸಿಕ ಕಿರುಕುಳ,...
04-09-26 04:44 pm
Blinkit Raid, Mangalore: ಬ್ಲಿಂಕ್ ಇಟ್ ಆನ್ಲೈನ್...
03-09-26 10:19 pm
ಮುಂದಿನ ಬಾರಿ ಅಶೋಕ ರೈ ವಿರುದ್ಧ ತಾನೇ ಸ್ಪರ್ಧಿಸುತ್ತ...
03-09-26 09:10 pm
05-09-26 08:58 pm
HK News Staffer
ಶಿವಮೊಗ್ಗ ; ಕಾರಿನಲ್ಲಿ ಜಿಂಕೆ ಮಾಂಸ ಮಾರಾಟ ಯತ್ನ ;...
05-09-26 04:55 pm
ಬಡ್ಡಿ ಕಟ್ಟದಿದ್ದಕ್ಕೆ ಮಹಿಳೆಯನ್ನು ಅಪಹರಿಸಿ ಹಲ್ಲೆ...
05-09-26 03:08 pm
ಅಷ್ಟಮಿ ಭಜನಾ ಕಾರ್ಯಕ್ರಮದಲ್ಲಿ ಹೃದಯಾಘಾತ ; ತೊಕ್ಕೂರ...
05-09-26 02:04 pm
ತ್ರಿಶೂರ್ ನಲ್ಲಿ ಗುರುವಾಯೂರು ದರ್ಶನ ಮುಗಿಸಿ ಹೊರಟಿದ...
05-09-26 01:13 pm