ಮಂಗಳೂರು ಪಾಲಿಕೆಯ ಲೆಕ್ಕಾಧಿಕಾರಿ ಕಾರು ಚಾಲಕ ರೈಲಿನಡಿಗೆ ಹಾರಿ ಆತ್ಮಹತ್ಯೆ 

25-01-23 02:02 pm       Udupi Correspondent   ಕರಾವಳಿ

ಮಂಗಳೂರು ಮಹಾನಗರ ಪಾಲಿಕೆಯ ಮುಖ್ಯ ಲೆಕ್ಕಾಧಿಕಾರಿ ಅವರ ಕಾರು ಚಾಲಕರಾಗಿದ್ದ ವ್ಯಕ್ತಿ ಬುಧವಾರ ಬೆಳಗ್ಗೆ (ಜ.25) ಇಂದ್ರಾಳಿಯಲ್ಲಿ ಚಲಿಸುತ್ತಿದ್ದ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. 

ಉಡುಪಿ, ಜ.25 : ಮಂಗಳೂರು ಮಹಾನಗರ ಪಾಲಿಕೆಯ ಮುಖ್ಯ ಲೆಕ್ಕಾಧಿಕಾರಿ ಅವರ ಕಾರು ಚಾಲಕರಾಗಿದ್ದ ವ್ಯಕ್ತಿ ಬುಧವಾರ ಬೆಳಗ್ಗೆ (ಜ.25) ಇಂದ್ರಾಳಿಯಲ್ಲಿ ಚಲಿಸುತ್ತಿದ್ದ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. 

ಹೆಬ್ರಿ ಸಳಂಜೆ ಗ್ರಾಮದ ನಿವಾಸಿ ಸಂಜೀವ ಹೆಗ್ಡೆ ಎಂಬವರ ಪುತ್ರ ರಾಘವೇಂದ್ರ ಹೆಗ್ಡೆ ಮೃತ ವ್ಯಕ್ತಿ. ಮಂಗಳೂರು ಪಾಲಿಕೆಯ ಮುಖ್ಯ ಲೆಕ್ಕಾಧಿಕಾರಿ ಎಂದು ಬೋರ್ಡ್ ಹಾಕಿದ್ದ ಕಾರನ್ನು ಇಂದ್ರಾಳಿ ಸೇತುವೆಯ ಬಳಿ ನಿಲ್ಲಿಸಲಾಗಿತ್ತು. ಮೃತದೇಹ ಸಂಪೂರ್ಣ ಛಿದ್ರಗೊಂಡಿದ್ದು ಗುರುತು ಸಿಗದಂತಾಗಿದ್ದು ರೈಲಿನಡಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಶಂಕೆ ವ್ಯಕ್ತವಾಗಿದೆ.‌

ಸ್ಥಳದಲ್ಲಿ ಪತ್ತೆಯಾದ ಕಾರಿನ ಹಸಿರು ಫಲಕದಲ್ಲಿ ಮಂಗಳೂರು ಮಹಾನಗರ ಪಾಲಿಕೆಯ ಮುಖ್ಯ ಲೆಕ್ಕಾಧಿಕಾರಿ ಎಂದಿದ್ದರಿಂದ ಪೊಲೀಸರು ಪತ್ತೆ ಕಾರ್ಯ ಮಾಡಿದ್ದಾರೆ. ಅಲ್ಲದೆ, ಮೃತದೇಹದ ಅಂಗಿಯಲ್ಲಿ ಆಧಾರ್ ಕಾರ್ಡ್ ಸಿಕ್ಕಿದ್ದು ಗುರುತು ಹಚ್ಚಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Mangalore city corporation Mcc chief auditor car drivers commits suicide under train near Indrali. The deceased has been identified as Raghavendra Hedge.