ಬ್ರೇಕಿಂಗ್ ನ್ಯೂಸ್
27-01-23 03:49 pm Mangalore Correspondent ಕರಾವಳಿ
ಉಳ್ಳಾಲ, ಜ.27: ಟ್ಯಾಂಕರ್ ಒಂದರಲ್ಲಿ ಸಾಗಿಸುತ್ತಿದ್ದ ಫಿಶ್ ಮಿಲ್ ಫ್ಯಾಕ್ಟರಿಯ ದುರ್ನಾತ ತ್ಯಾಜ್ಯವು ರಸ್ತೆಯುದ್ದಕ್ಕೂ ಹರಿದ ಪರಿಣಾಮ ದ್ವಿಚಕ್ರ ವಾಹನಗಳು ಅಪಘಾತಕ್ಕೀಡಾಗಿದ್ದು ರೊಚ್ಚಿಗೆದ್ದ ಸ್ಥಳೀಯರು ಟ್ಯಾಂಕರನ್ನ ತಡೆದು ಪ್ರತಿಭಟನೆ ನಡೆಸಿದ ಘಟನೆ ಉಳ್ಳಾಲದಲ್ಲಿ ನಡೆದಿದೆ.
ಫಿಶ್ ಮೀಲ್ ತ್ಯಾಜ್ಯ ಹೊತ್ತಿದ್ದ ಟ್ಯಾಂಕರ್ ಇಂದು ಬೆಳಗ್ಗೆ ಉಳ್ಳಾಲ ಕೋಟೆಪುರದ ಫ್ಯಾಕ್ಟರಿ ಕಡೆ ಸಾಗುತ್ತಿದ್ದ ವೇಳೆ ಅಬ್ಬಕ್ಕ ವೃತ್ತದಿಂದ ಮೊಗವೀರ ಪಟ್ಣದವರೆಗೆ ರಸ್ತೆಯುದ್ದಕ್ಕೂ ದುರ್ನಾತ ಬೀರುವ ರಾಸಾಯನಿಕ ಮಿಶ್ರಿತ ತ್ಯಾಜ್ಯವನ್ನ ಚೆಲ್ಲುತ್ತಾ ಸಾಗಿದೆ. ಪರಿಣಾಮ ರಸ್ತೆಯಲ್ಲಿ ಚಲಿಸುತ್ತಿದ್ದ ದ್ವಿಚಕ್ರ ವಾಹನಗಳು ಜಾರಿ ಬಿದ್ದಿದ್ದು, ಸ್ಥಳೀಯರು ತಕ್ಷಣ ಟ್ಯಾಂಕರನ್ನ ತಡೆದು ನಿಲ್ಲಿಸಿ ಚಾಲಕನನ್ನ ತರಾಟೆಗೆ ತೆಗೆದಿದ್ದಾರೆ.


ಸ್ಥಳೀಯ ಮೀನುಗಾರರಾದ ಗಣೇಶ್ ಉಳ್ಳಾಲ್ ಮಾತನಾಡಿ ಉಳ್ಳಾಲ ಕೋಟೆಪುರದಲ್ಲಿರುವ ಫಿಶ್ ಮೀಲ್ ಫ್ಯಾಕ್ಟರಿಗಳು ಸರಕಾರದ ನಿಯಮಗಳನ್ನ ಗಾಳಿಗೆ ತೂರಿ ಕಾರ್ಯಾಚರಿಸುತ್ತಿವೆ. ತಮ್ಮ ಫ್ಯಾಕ್ಟರಿಗಳ ಮಲಿನಗಳನ್ನ ಸಮುದ್ರಕ್ಕೆ ಬಿಟ್ಟು ಮತ್ಸ್ಯ ಸಂತತಿಗಳ ಮಾರಣ ಹೋಮ ನಡೆಸಿವೆ. ಸಾಲದಕ್ಕೆ ಇದೀಗ ಹೊರ ರಾಜ್ಯಗಳಿಂದಲೂ ಫಿಶ್ ಮೀಲ್ ಮಲಿನಗಳನ್ನ ಆಮದು ಮಾಡಿಸಿ ಉಳ್ಳಾಲ ನಗರವನ್ನೆ ಗಬ್ಬು ನಾರವಂತೆ ಮಾಡುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.


ಘಟನೆ ಬಗ್ಗೆ ಎಚ್ಚೆತ್ತ ಫಿಶ್ ಮೀಲ್ ಫ್ಯಾಕ್ಟರಿಯವರು ಟ್ಯಾಂಕರ್ ನೀರನ್ನ ಬಳಸಿ ರಸ್ತೆಯನ್ನ ಸ್ವಚ್ಛಗೊಳಿಸಿದ್ದಾರೆ. ಸ್ಥಳಕ್ಕೆ ಉಳ್ಳಾಲ ನಗರಸಭೆ ಆಯುಕ್ತರಾದ ವಿದ್ಯಾ ಕಾಳೆ ಭೇಟಿ ನೀಡಿದ್ದು ಟ್ಯಾಂಕರಲ್ಲಿದ್ದ ತ್ಯಾಜ್ಯವನ್ನ ಸುರಕ್ಷಿತವಾಗಿ ವಿಲೇವಾರಿ ನಡೆಸದ ಚಾಲಕನ ವಿರುದ್ಧ ಕ್ರಮ ಕೈಗೊಂಡಿದ್ದಾರೆ.
Mangalore Truck spills dirty fish water all over the road at Kotepura in Ullal, public stop truck and protest.
04-11-25 04:38 pm
Bangalore Correspondent
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
04-11-25 10:51 pm
Mangalore Correspondent
Mangalore Police, Panambur Beach: ಗಂಡ - ಹೆಂಡತ...
04-11-25 08:37 pm
ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ಹಣಕ್ಕಾಗಿ...
04-11-25 06:15 pm
ವ್ಯಾಟಿಕನ್ ಸಿಟಿಯ ಭಾರತದ ರಾಯಭಾರಿ ಆ್ಯಂಡ್ರಿಯಾ ಫಾನ್...
04-11-25 05:06 pm
ಧರ್ಮಸ್ಥಳ ಪ್ರಕರಣ ; ಎಸ್ಐಟಿ ತನಿಖಾ ಪ್ರಕ್ರಿಯೆಗೆ ಮಹ...
04-11-25 05:03 pm
04-11-25 02:11 pm
Mangalore Correspondent
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm