ಬ್ರೇಕಿಂಗ್ ನ್ಯೂಸ್
27-01-23 03:49 pm Mangalore Correspondent ಕರಾವಳಿ
ಉಳ್ಳಾಲ, ಜ.27: ಟ್ಯಾಂಕರ್ ಒಂದರಲ್ಲಿ ಸಾಗಿಸುತ್ತಿದ್ದ ಫಿಶ್ ಮಿಲ್ ಫ್ಯಾಕ್ಟರಿಯ ದುರ್ನಾತ ತ್ಯಾಜ್ಯವು ರಸ್ತೆಯುದ್ದಕ್ಕೂ ಹರಿದ ಪರಿಣಾಮ ದ್ವಿಚಕ್ರ ವಾಹನಗಳು ಅಪಘಾತಕ್ಕೀಡಾಗಿದ್ದು ರೊಚ್ಚಿಗೆದ್ದ ಸ್ಥಳೀಯರು ಟ್ಯಾಂಕರನ್ನ ತಡೆದು ಪ್ರತಿಭಟನೆ ನಡೆಸಿದ ಘಟನೆ ಉಳ್ಳಾಲದಲ್ಲಿ ನಡೆದಿದೆ.
ಫಿಶ್ ಮೀಲ್ ತ್ಯಾಜ್ಯ ಹೊತ್ತಿದ್ದ ಟ್ಯಾಂಕರ್ ಇಂದು ಬೆಳಗ್ಗೆ ಉಳ್ಳಾಲ ಕೋಟೆಪುರದ ಫ್ಯಾಕ್ಟರಿ ಕಡೆ ಸಾಗುತ್ತಿದ್ದ ವೇಳೆ ಅಬ್ಬಕ್ಕ ವೃತ್ತದಿಂದ ಮೊಗವೀರ ಪಟ್ಣದವರೆಗೆ ರಸ್ತೆಯುದ್ದಕ್ಕೂ ದುರ್ನಾತ ಬೀರುವ ರಾಸಾಯನಿಕ ಮಿಶ್ರಿತ ತ್ಯಾಜ್ಯವನ್ನ ಚೆಲ್ಲುತ್ತಾ ಸಾಗಿದೆ. ಪರಿಣಾಮ ರಸ್ತೆಯಲ್ಲಿ ಚಲಿಸುತ್ತಿದ್ದ ದ್ವಿಚಕ್ರ ವಾಹನಗಳು ಜಾರಿ ಬಿದ್ದಿದ್ದು, ಸ್ಥಳೀಯರು ತಕ್ಷಣ ಟ್ಯಾಂಕರನ್ನ ತಡೆದು ನಿಲ್ಲಿಸಿ ಚಾಲಕನನ್ನ ತರಾಟೆಗೆ ತೆಗೆದಿದ್ದಾರೆ.


ಸ್ಥಳೀಯ ಮೀನುಗಾರರಾದ ಗಣೇಶ್ ಉಳ್ಳಾಲ್ ಮಾತನಾಡಿ ಉಳ್ಳಾಲ ಕೋಟೆಪುರದಲ್ಲಿರುವ ಫಿಶ್ ಮೀಲ್ ಫ್ಯಾಕ್ಟರಿಗಳು ಸರಕಾರದ ನಿಯಮಗಳನ್ನ ಗಾಳಿಗೆ ತೂರಿ ಕಾರ್ಯಾಚರಿಸುತ್ತಿವೆ. ತಮ್ಮ ಫ್ಯಾಕ್ಟರಿಗಳ ಮಲಿನಗಳನ್ನ ಸಮುದ್ರಕ್ಕೆ ಬಿಟ್ಟು ಮತ್ಸ್ಯ ಸಂತತಿಗಳ ಮಾರಣ ಹೋಮ ನಡೆಸಿವೆ. ಸಾಲದಕ್ಕೆ ಇದೀಗ ಹೊರ ರಾಜ್ಯಗಳಿಂದಲೂ ಫಿಶ್ ಮೀಲ್ ಮಲಿನಗಳನ್ನ ಆಮದು ಮಾಡಿಸಿ ಉಳ್ಳಾಲ ನಗರವನ್ನೆ ಗಬ್ಬು ನಾರವಂತೆ ಮಾಡುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.


ಘಟನೆ ಬಗ್ಗೆ ಎಚ್ಚೆತ್ತ ಫಿಶ್ ಮೀಲ್ ಫ್ಯಾಕ್ಟರಿಯವರು ಟ್ಯಾಂಕರ್ ನೀರನ್ನ ಬಳಸಿ ರಸ್ತೆಯನ್ನ ಸ್ವಚ್ಛಗೊಳಿಸಿದ್ದಾರೆ. ಸ್ಥಳಕ್ಕೆ ಉಳ್ಳಾಲ ನಗರಸಭೆ ಆಯುಕ್ತರಾದ ವಿದ್ಯಾ ಕಾಳೆ ಭೇಟಿ ನೀಡಿದ್ದು ಟ್ಯಾಂಕರಲ್ಲಿದ್ದ ತ್ಯಾಜ್ಯವನ್ನ ಸುರಕ್ಷಿತವಾಗಿ ವಿಲೇವಾರಿ ನಡೆಸದ ಚಾಲಕನ ವಿರುದ್ಧ ಕ್ರಮ ಕೈಗೊಂಡಿದ್ದಾರೆ.
Mangalore Truck spills dirty fish water all over the road at Kotepura in Ullal, public stop truck and protest.
10-07-26 10:12 pm
HK News Staffer
ರಾಮಮಂದಿರದ ಶ್ರೇಯಸ್ಸು ಪಡೆದವರೇ, ದೇಣಿಗೆ ಕಳ್ಳತನದ ಹ...
10-07-26 07:42 pm
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
ಬೆಳಗಾವಿಯಲ್ಲಿ ಆರೆಸ್ಸೆಸ್ ಪ್ರತಿನಿಧಿ ಸಭೆ ; ಖಾಸಗಿ...
08-07-26 02:06 pm
10-07-26 10:46 pm
HK News Desk
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
18 ವರ್ಷಗಳ ಬಳಿಕ ಅಹಮದಾಬಾದ್ ಸರಣಿ ಬಾಂಬ್ ಸ್ಫೋಟ ಪ್ರ...
07-07-26 03:22 pm
ವಯನಾಡಿನಲ್ಲಿ ಮತ್ತೆ ಭೀಕರ ಭೂಕುಸಿತ ; ಭಾರೀ ಮಳೆಗೆ ಸ...
07-07-26 01:51 pm
ಮುಂಬೈನಲ್ಲಿ ಮರಣ ಮಳೆಗೆ 13 ಮಂದಿ ಬಲಿ; ಕುಸಿದ ರಸ್ತ...
06-07-26 01:14 pm
10-07-26 05:25 pm
HK News Staffer
ಬಾಲಕನಿಗೆ ಛಡಿಯೇಟು ; ಕಾಟಿಪಳ್ಳ ಮದ್ರಸಾ ಶಿಕ್ಷಕ ಉಸ್...
09-07-26 11:09 pm
ಮೋದಿಯನ್ನ ಪ್ರಶ್ನಿಸುವ ಕೈ ಮುಖಂಡ ಅಭಿಷೇಕ್ ಮೂಡಾ ಭ್ರ...
09-07-26 10:47 pm
ಕೆಪಿಟಿ ಜಂಕ್ಷನ್ ಬಳಿಯಲ್ಲಿ ಡಿವೈಡರ್ ಡಿಕ್ಕಿಯಾಗಿ ಬೈ...
08-07-26 11:04 pm
ಸಚಿವರಿಲ್ಲದ ಶಿಕ್ಷಣ ಇಲಾಖೆ ಬಣ ಬಣ ; ಪಿಯು ಕಾಲೇಜಿಗೆ...
08-07-26 08:38 pm
10-07-26 10:14 pm
HK News Staffer
ಷೇರು ಮಾರ್ಕೆಟ್ ಹೆಸ್ರಲ್ಲಿ 10 ಲಕ್ಷ ರೂ. ವಂಚನೆ ; ಮ...
10-07-26 08:22 pm
ರಿವರ್ಸ್ ಮಾಡುವಾಗ ನಿಯಂತ್ರಣ ತಪ್ಪಿ ತೋಡಿಗೆ ಉರುಳಿ ಬ...
10-07-26 05:29 pm
ರೆಡ್ ಅಲರ್ಟ್; ರಜೆ ಆದೇಶ ಪಾಲಿಸದ ಹತ್ತಕ್ಕೂ ಹೆಚ್ಚು...
10-07-26 03:25 pm
ಕಟ್ಟಡ ಕಾರ್ಮಿಕರ ಸೋಗಿನಲ್ಲಿ ಅಡಗಿದ್ದ ಎಂಟು ಮಂದಿ ಬಾ...
10-07-26 02:22 pm