ಬ್ರೇಕಿಂಗ್ ನ್ಯೂಸ್
27-01-23 03:49 pm Mangalore Correspondent ಕರಾವಳಿ
ಉಳ್ಳಾಲ, ಜ.27: ಟ್ಯಾಂಕರ್ ಒಂದರಲ್ಲಿ ಸಾಗಿಸುತ್ತಿದ್ದ ಫಿಶ್ ಮಿಲ್ ಫ್ಯಾಕ್ಟರಿಯ ದುರ್ನಾತ ತ್ಯಾಜ್ಯವು ರಸ್ತೆಯುದ್ದಕ್ಕೂ ಹರಿದ ಪರಿಣಾಮ ದ್ವಿಚಕ್ರ ವಾಹನಗಳು ಅಪಘಾತಕ್ಕೀಡಾಗಿದ್ದು ರೊಚ್ಚಿಗೆದ್ದ ಸ್ಥಳೀಯರು ಟ್ಯಾಂಕರನ್ನ ತಡೆದು ಪ್ರತಿಭಟನೆ ನಡೆಸಿದ ಘಟನೆ ಉಳ್ಳಾಲದಲ್ಲಿ ನಡೆದಿದೆ.
ಫಿಶ್ ಮೀಲ್ ತ್ಯಾಜ್ಯ ಹೊತ್ತಿದ್ದ ಟ್ಯಾಂಕರ್ ಇಂದು ಬೆಳಗ್ಗೆ ಉಳ್ಳಾಲ ಕೋಟೆಪುರದ ಫ್ಯಾಕ್ಟರಿ ಕಡೆ ಸಾಗುತ್ತಿದ್ದ ವೇಳೆ ಅಬ್ಬಕ್ಕ ವೃತ್ತದಿಂದ ಮೊಗವೀರ ಪಟ್ಣದವರೆಗೆ ರಸ್ತೆಯುದ್ದಕ್ಕೂ ದುರ್ನಾತ ಬೀರುವ ರಾಸಾಯನಿಕ ಮಿಶ್ರಿತ ತ್ಯಾಜ್ಯವನ್ನ ಚೆಲ್ಲುತ್ತಾ ಸಾಗಿದೆ. ಪರಿಣಾಮ ರಸ್ತೆಯಲ್ಲಿ ಚಲಿಸುತ್ತಿದ್ದ ದ್ವಿಚಕ್ರ ವಾಹನಗಳು ಜಾರಿ ಬಿದ್ದಿದ್ದು, ಸ್ಥಳೀಯರು ತಕ್ಷಣ ಟ್ಯಾಂಕರನ್ನ ತಡೆದು ನಿಲ್ಲಿಸಿ ಚಾಲಕನನ್ನ ತರಾಟೆಗೆ ತೆಗೆದಿದ್ದಾರೆ.


ಸ್ಥಳೀಯ ಮೀನುಗಾರರಾದ ಗಣೇಶ್ ಉಳ್ಳಾಲ್ ಮಾತನಾಡಿ ಉಳ್ಳಾಲ ಕೋಟೆಪುರದಲ್ಲಿರುವ ಫಿಶ್ ಮೀಲ್ ಫ್ಯಾಕ್ಟರಿಗಳು ಸರಕಾರದ ನಿಯಮಗಳನ್ನ ಗಾಳಿಗೆ ತೂರಿ ಕಾರ್ಯಾಚರಿಸುತ್ತಿವೆ. ತಮ್ಮ ಫ್ಯಾಕ್ಟರಿಗಳ ಮಲಿನಗಳನ್ನ ಸಮುದ್ರಕ್ಕೆ ಬಿಟ್ಟು ಮತ್ಸ್ಯ ಸಂತತಿಗಳ ಮಾರಣ ಹೋಮ ನಡೆಸಿವೆ. ಸಾಲದಕ್ಕೆ ಇದೀಗ ಹೊರ ರಾಜ್ಯಗಳಿಂದಲೂ ಫಿಶ್ ಮೀಲ್ ಮಲಿನಗಳನ್ನ ಆಮದು ಮಾಡಿಸಿ ಉಳ್ಳಾಲ ನಗರವನ್ನೆ ಗಬ್ಬು ನಾರವಂತೆ ಮಾಡುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.


ಘಟನೆ ಬಗ್ಗೆ ಎಚ್ಚೆತ್ತ ಫಿಶ್ ಮೀಲ್ ಫ್ಯಾಕ್ಟರಿಯವರು ಟ್ಯಾಂಕರ್ ನೀರನ್ನ ಬಳಸಿ ರಸ್ತೆಯನ್ನ ಸ್ವಚ್ಛಗೊಳಿಸಿದ್ದಾರೆ. ಸ್ಥಳಕ್ಕೆ ಉಳ್ಳಾಲ ನಗರಸಭೆ ಆಯುಕ್ತರಾದ ವಿದ್ಯಾ ಕಾಳೆ ಭೇಟಿ ನೀಡಿದ್ದು ಟ್ಯಾಂಕರಲ್ಲಿದ್ದ ತ್ಯಾಜ್ಯವನ್ನ ಸುರಕ್ಷಿತವಾಗಿ ವಿಲೇವಾರಿ ನಡೆಸದ ಚಾಲಕನ ವಿರುದ್ಧ ಕ್ರಮ ಕೈಗೊಂಡಿದ್ದಾರೆ.
Mangalore Truck spills dirty fish water all over the road at Kotepura in Ullal, public stop truck and protest.
14-05-26 10:19 am
HK News Staffer
ಬಿಜೆಪಿ ಸರ್ಕಾರ ನಿಷೇಧಿಸಿದ್ದ ಹಿಜಾಬ್ ನಿಷೇಧ ಹಿಂಪಡೆ...
13-05-26 10:18 pm
3 ಸಾವಿರ ರೂ. ಬಿಲ್ ಬಾಕಿ; 8 ತಿಂಗಳಿಂದ ಕತ್ತಲಲ್ಲಿ...
12-05-26 02:26 pm
ಶೃಂಗೇರಿ ಕ್ಷೇತ್ರದ ಅಂಚೆ ಮತ ಗೊಂದಲ; ಕಾಂಗ್ರೆಸಿನ ರಾ...
11-05-26 09:36 pm
D Sudhakar Death: ಚಿತ್ರದುರ್ಗದ ಜನಾನುರಾಗಿ ಶಾಸಕ,...
10-05-26 01:04 pm
14-05-26 12:36 pm
HK News Staffer
ಜ್ಯೋತಿಷಿಗೆ ಕೂಡದ ಜಾತಕ ; ಟೀಕೆಗಳ ಸುಳಿಯಲ್ಲಿ ವಿಜಯ್...
13-05-26 06:42 pm
ಅಗ್ನಿ ಪರೀಕ್ಷೆಯಲ್ಲಿ ಗೆದ್ದ ವಿಜಯ್; ನಿರೀಕ್ಷೆಗೂ ಮ...
13-05-26 02:26 pm
ಎಐಎಡಿಎಂಕೆ ಪಕ್ಷವೇ ಇಬ್ಭಾಗ ; 30 ಶಾಸಕರ ಬಣ ವಿಜಯ್ ಸ...
12-05-26 08:15 pm
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ; ಮೇ 3ರಂದು ನಡೆದಿದ...
12-05-26 08:01 pm
14-05-26 10:48 pm
HK News Staffer
ರಿಯಲ್ ಎಸ್ಟೇಟ್ ಉದ್ಯಮಿ, ‘ಲ್ಯಾನ್ಸಿ ಕನ್ಸ್ಟ್ರಕ್ಷನ...
14-05-26 05:39 pm
ಮಂಗಳೂರಿನಲ್ಲೂ "ಲಾಕ್ಡ್ ಹೌಸ್ ಬೀಟ್ ಸಿಸ್ಟಮ್" ಜಾರಿ...
13-05-26 11:02 pm
Gruha Lakshmi Mangalore: ಸತ್ತವರ ಖಾತೆಗೂ ಗೃಹಲಕ್...
13-05-26 04:04 pm
NEET ಪರೀಕ್ಷೆ ರದ್ದು ; 22.5 ಲಕ್ಷ ವಿದ್ಯಾರ್ಥಿಗಳ ಭ...
12-05-26 06:26 pm
14-05-26 01:41 pm
HK News Staffer
ತುಮಕೂರಿನ ಮದರಸಾದಲ್ಲಿ ಸಿಬ್ಬಂದಿಗಳಿಂದ ಮಕ್ಕಳ ಮೇಲೆ...
14-05-26 10:49 am
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; 30 ಸಾವಿರದಿಂದ 28...
13-05-26 09:25 pm
ಹಾಸನದಲ್ಲಿ ಜಿಮ್ ಕಿರಿಕ್; ವರ್ಕೌಟ್ ವೇಳೆ ಭುಜ ಟಚ್ ಆ...
13-05-26 06:36 pm
ಚಾರ್ಜ್ಗೆ ಹಾಕಿದ್ದ ಎಲೆಕ್ಟ್ರಿಕಲ್ ಬೈಕ್ ಸ್ಫೋಟ; ಮ...
13-05-26 03:39 pm