ಬ್ರೇಕಿಂಗ್ ನ್ಯೂಸ್
27-01-23 09:53 pm Mangalore Correspondent ಕರಾವಳಿ
ಬಂಟ್ವಾಳ, ಜ.27 : ಕರೆಂಟ್ ಕೇಳಿದ್ದಕ್ಕೆ ಜೈಲಿಗೆ ಹಾಕಿದವರು ಈಗ ಕರೆಂಟ್ ಫ್ರೀ ಕೊಡ್ತಾರಂತೆ ಎಂದು ಬಿಜೆಪಿ ಶಾಸಕ ಸಿಟಿ ರವಿ ವ್ಯಂಗ್ಯವಾಡಿದ್ದಾರೆ. ಶಾಸಕ ರಾಜೇಶ್ ನಾಯ್ಕ್ ಅವರ ಗ್ರಾಮವಿಕಾಸ ಯಾತ್ರೆ ಸಮಾರೋಪ ಸಮಾರಂಭದಲ್ಲಿ ಸಿ.ಟಿ.ರವಿ ಮಾತನಾಡಿದರು.
ಈಗ 200 ಯುನಿಟ್ ಕರೆಂಟ್ ಫ್ರೀ ಕೊಡ್ತಾರಂತೆ. ಬೆಳ್ಳಾರೆಯ ಸಾಯಿ ಗಿರಿಧರ್ ಕರೆಂಟ್ ಇಲ್ಲ ಅಂತ ಡಿಕೆಶಿ ಗೆ ಕರೆ ಮಾಡಿದ್ದರು. ಎಂಥ ಮಾರ್ರೆ ಸಾವು, ಕರೆಂಟ್ ಇಲ್ಲ ಅಂತ ಗಿರಿಧರ್ ರೈ ಹೇಳಿದ್ದರು. ಆದರೆ ತನ್ನ ಸಾವಿನ ಬಗ್ಗೆ ಮಾತನಾಡಿದ ಅಂತ ಡಿಕೆಶಿ, ಗಿರಿಧರ್ ರೈಯನ್ನ ಪೊಲೀಸ್ ಮೂಲಕ ಅರೆಸ್ಟ್ ಮಾಡಿಸಿದ್ದರು. ಇಂಥವರು ಇನ್ನೂರು ಯುನಿಟ್ ಕರೆಂಟ್ ಫ್ರೀ ಕೊಡ್ತಾರಂತೆ ಎಂದು ರವಿ ವ್ಯಂಗ್ಯವಾಡಿದ್ದಾರೆ.

ಇತ್ತೀಚೆಗೆ ಇಲ್ಲಿಗೆ ಕಾಂಗ್ರೆಸ್ ನ ಪ್ರಜಾಧ್ವನಿ ಯಾತ್ರೆ ಬಂದಿತ್ತು. ಪ್ರಜೆಗಳ ಧ್ವನಿ ಕೇಳಿದ್ರೆ ಮಕ್ಕಳ ಅನ್ನ ಕಿತ್ತವರು ಅನ್ನೋ ಧ್ವನಿ ಕೇಳ್ತಾ ಇತ್ತು. ಕಲ್ಲಡ್ಕದ ಮಕ್ಕಳ ಅನ್ನ ಕಿತ್ತ ಪಾಪಿಗಳು ಅನ್ನುವ ಧ್ವನಿ ಕೇಳ್ತಾ ಇತ್ತು. ಇಲ್ಲಿನ ಕೊಲೆಗಳು ಮತ್ತು ಕೊಲೆ ಹಿಂದೆ ಇರೋರಿಗೆ ಬೆಂಬಲಕ್ಕೆ ನಿಂತ ಕೊಲೆಗಡುಕರು ಅನ್ನೋ ಧ್ವನಿ ಕೇಳ್ತಾ ಇತ್ತು. ಎದ್ದರೆ ಕೂರಲು ಆಗದ, ಕೂತರೆ ನಿಲ್ಲಲು ಆಗದ ಶಾಸಕ ನಮ್ಮವರಲ್ಲ. ಇವರ ಪ್ರಜಾಧ್ವನಿ ಯಾತ್ರೆ ಕೇವಲ ಬಿಜೆಪಿ ಬೈಯ್ಯುವ ಯಾತ್ರೆ.
ದೈವ ವಿರೋಧಿಗಳು, ಕುಂಕುಮ ಕಂಡ್ರೆ ಭಯ ಪಡೋರು ನೈಜ ಹಿಂದುಗಳಲ್ಲ. ಕೇಸರಿ ಕಂಡರೆ ಭಯ ಪಡೋರು ನೈಜ ಹಿಂದುಗಳಲ್ಲ. ನೈಜ ಹಿಂದುಗಳು ಪಂಜುರ್ಲಿ ದೈವ, ದೇವರ ಹತ್ರ ಹೋಗ್ತಾರೆ. ಆದರೆ ಈ ನಕಲಿ ಹಿಂದೂಗಳು ಅದರ ಬಳಿ ಯಾವತ್ತೂ ಹೋಗಲ್ಲ. ಜೈ ಶ್ರೀರಾಮ್ ಅನ್ನೋರು, ರಾಮ ಮಂದಿರದ ತುಡಿತ ಇದ್ದವರು ನೈಜ ಹಿಂದೂಗಳು. ರಾಮ ಮಂದಿರ ವಿರೋಧಿಸಿದವರು ನಕಲಿ ಹಿಂದೂಗಳು.
ಪ್ರಜಾಧ್ವನಿಯಲ್ಲಿ ನಿನ್ನೆ ವೇದಿಕೆ ಮೇಲೆ ಮಾತನಾಡಿದವರೆಲ್ಲಾ ನಕಲಿ ಹಿಂದುಗಳು. ಮಕ್ಕಳ ಮನಸ್ಸಲ್ಲೂ ಜಾತಿ ವಿಷ ಬೀಜ ಬಿತ್ತುವ ಕೆಲಸ ಕಾಂಗ್ರೆಸ್ ಮಾಡಿತ್ತು. ಮುಂಚೆ ಒಬ್ಬ ಇಲ್ಲಿ ವಿವಾದಿತ ರಾಜಕಾರಣಿ ಇದ್ದರು. ಆದ್ರೆ ನಮ್ಮ ರಾಜೇಶ್ ನಾಯ್ಕ್ ವಿವಾದ ಇಲ್ಲದ ರಾಜಕಾರಣಿ ಎಂದು ಟಾಂಗ್ ಇಟ್ಟರು.
Mangalore CT Ravi slams DK Shivakumar over giving free current to the state if congress comes to power.
31-03-26 10:13 am
HK News Staffer
ತಮಿಳುನಾಡಿನಲ್ಲಿ ಬಿಜೆಪಿ ಸೀಟು ಹಂಚಿಕೆಯಲ್ಲಿ ಲೋಪ ;...
29-03-26 10:19 am
RCB ಗೆಲುವಿಗೆ ರಕ್ತದಾನ ಅಭಿಯಾನ ; ಚಿನ್ನಸ್ವಾಮಿ ಉದ್...
28-03-26 08:39 pm
ಆಸ್ತಿ ಕಲಹ ; ಮೂವರು ಪುಟ್ಟ ಮಕ್ಕಳೊಂದಿಗೆ ಬಾವಿಗೆ ಹಾ...
28-03-26 02:54 pm
ಭಾರತದಲ್ಲಿ ಮತ್ತೆ ಲಾಕ್ಡೌನ್ ; ಜಾಲತಾಣದಲ್ಲಿ ಟ್ರೆಂ...
27-03-26 04:49 pm
31-03-26 11:00 pm
HK News Staffer
ಜೈಶ್-ಎ-ಮೊಹಮ್ಮದ್ ಮುಖ್ಯಸ್ಥ ಮಸೂದ್ ಅಜರ್ ಸೋದರ ತಾಹಿ...
31-03-26 03:30 pm
ಸಂಧಾನ ಮಾತುಕತೆ ಒಪ್ಪದಿದ್ದರೆ ಇರಾನ್ ಸರ್ವನಾಶ ; ಭೂದ...
31-03-26 10:43 am
ಗಲ್ಫ್ ಯುದ್ಧ ಎಫೆಕ್ಟ್ ; ಡಾಲರ್ ಮುಂದೆ ರುಪಾಯಿ ಮಹಾಪ...
30-03-26 10:31 pm
ಹರ್ಮುಜ್ ಜಲಸಂಧಿಯಲ್ಲಿ ಇರಾನ್ ಟೋಲ್ ಬೂತ್ ; ಶುಲ್ಕ ಕ...
28-03-26 04:06 pm
31-03-26 10:06 pm
HK News Desk
Moodbidri Accident: ಮೂಡುಬಿದ್ರೆ ; ರಸ್ತೆ ಬದಿ ನಿ...
31-03-26 09:02 pm
ಅವಳೇ ಮಗನನ್ನು ವಿಷ ಕೊಟ್ಟು ಕೊಂದಿದ್ದಾಳೆ, ವಿಷಯ ಮುಚ...
31-03-26 06:27 pm
ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ಸಿನಿಂದ ಹೊರಬಿದ್...
31-03-26 03:01 pm
ಮಂಗಳೂರು ಬಂದರಿಗೆ ಬರಲಿದೆ ಮತ್ತೆರಡು ಎಲ್ಪಿಜಿ ಹೊತ್ತ...
30-03-26 11:13 pm
31-03-26 11:11 am
HK News Staffer
ಮದುವೆ ಆಗಿದ್ರೂ ಲವರ್ ನಂಟು ; ಹಣಕ್ಕಾಗಿ ಪೀಡಿಸಿ ಬ್ಲ...
30-03-26 07:35 pm
ತಿಂಗಳ ಹಿಂದಷ್ಟೇ ರಿಜಿಸ್ಟರ್ ಮದುವೆಯಾಗಿದ್ದ ಬೆಳ್ತಂಗ...
29-03-26 10:36 pm
ಟ್ಯಾಬ್ಲೆಟ್ ಆರಿಫ್ ಹತ್ಯೆ ; ಟೋಪಿ ನೌಫಾಲ್ ಸಾವನ್ನ ಸ...
29-03-26 10:22 pm
ಅರ್ಕುಳ ಬಳಿ ಹೆದ್ದಾರಿಯಲ್ಲಿ ಹಾಲಿನ ಟ್ಯಾಂಕರ್ ಗೆ ಹಿ...
29-03-26 07:49 pm