ಬ್ರೇಕಿಂಗ್ ನ್ಯೂಸ್
27-01-23 09:53 pm Mangalore Correspondent ಕರಾವಳಿ
ಬಂಟ್ವಾಳ, ಜ.27 : ಕರೆಂಟ್ ಕೇಳಿದ್ದಕ್ಕೆ ಜೈಲಿಗೆ ಹಾಕಿದವರು ಈಗ ಕರೆಂಟ್ ಫ್ರೀ ಕೊಡ್ತಾರಂತೆ ಎಂದು ಬಿಜೆಪಿ ಶಾಸಕ ಸಿಟಿ ರವಿ ವ್ಯಂಗ್ಯವಾಡಿದ್ದಾರೆ. ಶಾಸಕ ರಾಜೇಶ್ ನಾಯ್ಕ್ ಅವರ ಗ್ರಾಮವಿಕಾಸ ಯಾತ್ರೆ ಸಮಾರೋಪ ಸಮಾರಂಭದಲ್ಲಿ ಸಿ.ಟಿ.ರವಿ ಮಾತನಾಡಿದರು.
ಈಗ 200 ಯುನಿಟ್ ಕರೆಂಟ್ ಫ್ರೀ ಕೊಡ್ತಾರಂತೆ. ಬೆಳ್ಳಾರೆಯ ಸಾಯಿ ಗಿರಿಧರ್ ಕರೆಂಟ್ ಇಲ್ಲ ಅಂತ ಡಿಕೆಶಿ ಗೆ ಕರೆ ಮಾಡಿದ್ದರು. ಎಂಥ ಮಾರ್ರೆ ಸಾವು, ಕರೆಂಟ್ ಇಲ್ಲ ಅಂತ ಗಿರಿಧರ್ ರೈ ಹೇಳಿದ್ದರು. ಆದರೆ ತನ್ನ ಸಾವಿನ ಬಗ್ಗೆ ಮಾತನಾಡಿದ ಅಂತ ಡಿಕೆಶಿ, ಗಿರಿಧರ್ ರೈಯನ್ನ ಪೊಲೀಸ್ ಮೂಲಕ ಅರೆಸ್ಟ್ ಮಾಡಿಸಿದ್ದರು. ಇಂಥವರು ಇನ್ನೂರು ಯುನಿಟ್ ಕರೆಂಟ್ ಫ್ರೀ ಕೊಡ್ತಾರಂತೆ ಎಂದು ರವಿ ವ್ಯಂಗ್ಯವಾಡಿದ್ದಾರೆ.

ಇತ್ತೀಚೆಗೆ ಇಲ್ಲಿಗೆ ಕಾಂಗ್ರೆಸ್ ನ ಪ್ರಜಾಧ್ವನಿ ಯಾತ್ರೆ ಬಂದಿತ್ತು. ಪ್ರಜೆಗಳ ಧ್ವನಿ ಕೇಳಿದ್ರೆ ಮಕ್ಕಳ ಅನ್ನ ಕಿತ್ತವರು ಅನ್ನೋ ಧ್ವನಿ ಕೇಳ್ತಾ ಇತ್ತು. ಕಲ್ಲಡ್ಕದ ಮಕ್ಕಳ ಅನ್ನ ಕಿತ್ತ ಪಾಪಿಗಳು ಅನ್ನುವ ಧ್ವನಿ ಕೇಳ್ತಾ ಇತ್ತು. ಇಲ್ಲಿನ ಕೊಲೆಗಳು ಮತ್ತು ಕೊಲೆ ಹಿಂದೆ ಇರೋರಿಗೆ ಬೆಂಬಲಕ್ಕೆ ನಿಂತ ಕೊಲೆಗಡುಕರು ಅನ್ನೋ ಧ್ವನಿ ಕೇಳ್ತಾ ಇತ್ತು. ಎದ್ದರೆ ಕೂರಲು ಆಗದ, ಕೂತರೆ ನಿಲ್ಲಲು ಆಗದ ಶಾಸಕ ನಮ್ಮವರಲ್ಲ. ಇವರ ಪ್ರಜಾಧ್ವನಿ ಯಾತ್ರೆ ಕೇವಲ ಬಿಜೆಪಿ ಬೈಯ್ಯುವ ಯಾತ್ರೆ.
ದೈವ ವಿರೋಧಿಗಳು, ಕುಂಕುಮ ಕಂಡ್ರೆ ಭಯ ಪಡೋರು ನೈಜ ಹಿಂದುಗಳಲ್ಲ. ಕೇಸರಿ ಕಂಡರೆ ಭಯ ಪಡೋರು ನೈಜ ಹಿಂದುಗಳಲ್ಲ. ನೈಜ ಹಿಂದುಗಳು ಪಂಜುರ್ಲಿ ದೈವ, ದೇವರ ಹತ್ರ ಹೋಗ್ತಾರೆ. ಆದರೆ ಈ ನಕಲಿ ಹಿಂದೂಗಳು ಅದರ ಬಳಿ ಯಾವತ್ತೂ ಹೋಗಲ್ಲ. ಜೈ ಶ್ರೀರಾಮ್ ಅನ್ನೋರು, ರಾಮ ಮಂದಿರದ ತುಡಿತ ಇದ್ದವರು ನೈಜ ಹಿಂದೂಗಳು. ರಾಮ ಮಂದಿರ ವಿರೋಧಿಸಿದವರು ನಕಲಿ ಹಿಂದೂಗಳು.
ಪ್ರಜಾಧ್ವನಿಯಲ್ಲಿ ನಿನ್ನೆ ವೇದಿಕೆ ಮೇಲೆ ಮಾತನಾಡಿದವರೆಲ್ಲಾ ನಕಲಿ ಹಿಂದುಗಳು. ಮಕ್ಕಳ ಮನಸ್ಸಲ್ಲೂ ಜಾತಿ ವಿಷ ಬೀಜ ಬಿತ್ತುವ ಕೆಲಸ ಕಾಂಗ್ರೆಸ್ ಮಾಡಿತ್ತು. ಮುಂಚೆ ಒಬ್ಬ ಇಲ್ಲಿ ವಿವಾದಿತ ರಾಜಕಾರಣಿ ಇದ್ದರು. ಆದ್ರೆ ನಮ್ಮ ರಾಜೇಶ್ ನಾಯ್ಕ್ ವಿವಾದ ಇಲ್ಲದ ರಾಜಕಾರಣಿ ಎಂದು ಟಾಂಗ್ ಇಟ್ಟರು.
Mangalore CT Ravi slams DK Shivakumar over giving free current to the state if congress comes to power.
19-06-26 04:18 pm
HK News Staffer
ರೈ ಅವರೇ ಧನ ಸಹಾಯ ಮಾಡಿ ಬುರುಡೆ ಗ್ಯಾಂಗ್ ನಡೆಸುತ್ತ...
18-06-26 09:57 pm
ಪರಿಷತ್ ಚುನಾವಣೆ; ಮೈತ್ರಿ ಪಕ್ಷಕ್ಕೆ ತೀವ್ರ ಮುಖಭಂಗ,...
18-06-26 07:15 pm
ಆರೆಸ್ಸೆಸ್ ನೋಂದಣಿ ; ಪ್ರಿಯಾಂಕ ಖರ್ಗೆ ಪತ್ರಕ್ಕೆ ಸಾ...
18-06-26 01:25 pm
Jayadeva Hospital, Mysuru: ಮೈಸೂರಿನ ಜಯದೇವ ಆಸ್ಪ...
18-06-26 01:17 pm
18-06-26 07:17 pm
HK News Staffer
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
19-06-26 07:48 pm
HK News Staffer
ಬಂಗ್ಲೆಗುಡ್ಡೆ ಅಸ್ಥಿಪಂಜರಗಳ ಗುರುತು ಪತ್ತೆಗಿಳಿದ ಎಸ...
19-06-26 03:31 pm
ಅಸ್ಸಾಂ ಕಾರ್ಮಿಕರಿಗೆ ಪೊಲೀಸ್ ಕ್ಲಿಯರೆನ್ಸ್ ಸರ್ಟಿಫಿ...
19-06-26 12:24 pm
Bejai, Kadri Water Issue: ಬಿಜೈ, ಕದ್ರಿಗೆ ಕಲುಷಿ...
18-06-26 12:33 pm
ಬಸ್ಸೋ, ಬಸ್ ನಿಲ್ದಾಣವೋ ? ಗುರುಪುರ ಬಂಡಸಾಲೆಯಲ್ಲಿ ವ...
16-06-26 11:35 am
19-06-26 08:30 pm
HK News Staffer
ಕೋಡಿ ಬೀಚ್ನಲ್ಲಿ ಬೆಂಗಳೂರು ಮೂಲದ ಯುವಕ ಸಮುದ್ರ ಪಾಲ...
19-06-26 05:47 pm
Bhatkal News: ಭಟ್ಕಳದಲ್ಲಿ ಮತ್ತೆ ಕೋಮು ಸಂಘರ್ಷ ;...
18-06-26 01:20 pm
ಸ್ಕೂಟರಲ್ಲಿ ನಾಲ್ವರು ಹೆಣ್ಮಕ್ಕಳ ಜಾಲಿ ರೈಡ್; ನಿಯಂತ...
17-06-26 01:41 pm
ವಾಯುಪಡೆ ಅಧಿಕಾರಿ ಪತ್ನಿಗೆ ಅಮಲು ಪದಾರ್ಥ ನೀಡಿ ಅತ್ಯ...
16-06-26 08:32 pm