ಬ್ರೇಕಿಂಗ್ ನ್ಯೂಸ್
27-01-23 10:47 pm Mangalore Correspondent ಕರಾವಳಿ
ಬಂಟ್ವಾಳ, ಜ.27 : ತಮಿಳುನಾಡಿನಲ್ಲಿ ಡಿಎಂಕೆ ಸುಳ್ಳು ಹೇಳಿ ಅಧಿಕಾರಕ್ಕೆ ಬಂದಿದೆ. ಡಿಎಂಕೆ ಮತ್ತು ಕಾಂಗ್ರೆಸ್ ನವರು ಅಲ್ಲಿ ಹೇಳಿದ ಸುಳ್ಳನ್ನೇ ಕರ್ನಾಟಕದಲ್ಲಿ ರಿಪೀಟ್ ಮಾಡಲಾಗ್ತಿದೆ ಎಂದು ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಅಣ್ಣಾಮಲೈ ಹೇಳಿದ್ದಾರೆ.
ಬಿಸಿ ರೋಡಿನಲ್ಲಿ ಗ್ರಾಮದಡೆಗೆ ಶಾಸಕರ ನಡಿಗೆ ಪಾದಯಾತ್ರೆ ಸಮಾರೋಪ ಸಮಾರಂಭದಲ್ಲಿ ಅಣ್ಣಾಮಲೈ ಮಾತನಾಡಿದರು. ತಮಿಳುನಾಡಿನಲ್ಲಿ ರೇಷನ್ ಕಾರ್ಡ್ ಮುಂದಿಟ್ಟು ಪ್ರತಿ ತಿಂಗಳು ಒಂದು ಸಾವಿರ ರೂ. ಕೊಡುವುದಾಗಿ ಹೇಳಿದ್ದರು. 21 ತಿಂಗಳಾಯಿತು, ಯಾವೊಬ್ಬರಿಗೂ ಈವರೆಗೂ ಒಂದು ರೂಪಾಯಿ ಬಂದಿಲ್ಲ. ಕೇವಲ ಸುಳ್ಳು ಹೇಳಿಕೊಂಡೇ ಅಧಿಕಾರಕ್ಕೆ ಬಂದಿದ್ದಾರೆ. ಅದೇ ರೀತಿ ಕರ್ನಾಟಕದಲ್ಲಿಯೂ ಕಾಂಗ್ರೆಸ್ ಮತ್ತೆ ಸುಳ್ಳು ಭರವಸೆ ನೀಡುತ್ತಿದೆ. ಪ್ರಿಯಾಂಕಾ ಗಾಂಧಿ ಬಂದು ಪ್ರತಿ ಮನೆಯ ಮಹಿಳೆಗೆ ಎರಡು ಸಾವಿರ ಕೊಡುತ್ತೇವೆ ಅಂತ ಹೇಳುತ್ತಿದ್ದಾರೆ.








ಕರ್ನಾಟಕದ ಜನ ಈ ಸುಳ್ಳು ಭರವಸೆಯನ್ನು ನಂಬಬಾರದು, ಜಾಗೃತರಾಗಬೇಕು. ಕಾಂಗ್ರೆಸ್ ಗೆ ಕರ್ನಾಟಕ ಎಟಿಎಂ ಇದ್ದ ಹಾಗೆ. ಮುಂದಿನ ಚುನಾವಣೆಯಲ್ಲಿ ಅಧಿಕಾರಕ್ಕೆ ಬಂದು ಈ ಎಟಿಎಂ ಬಳಸಿಕೊಳ್ಳಲು ಪ್ಲಾನ್ ಮಾಡಿದೆ. ಮುಂದಿನ ಲೋಕಸಭಾ ಚುನಾವಣೆಗೆ ಈ ಎಟಿಎಂ ಅನ್ನು ಬಳಸಿಕೊಳ್ಳಲು ಕಾಂಗ್ರೆಸ್ ಪ್ಲಾನ್ ಮಾಡಿದೆ. ಇದಕ್ಕೆ ಕರ್ನಾಟಕದ ಜನ ಅವಕಾಶ ನೀಡಬಾರದು.






ಹಿಂದೆ ಕೋಮು ಗಲಭೆಗಳಿಂದ ಬಂಟ್ವಾಳ ನಲುಗಿತ್ತು. ಕಳೆದ ನಾಲ್ಕುವರೆ ವರ್ಷದಲ್ಲಿ ಬಂಟ್ವಾಳ ಚಿತ್ರಣ ಬದಲಾಗಿದೆ. ಬಂಟ್ವಾಳ ಈಗ ಶಾಂತವಾಗಿದೆ, ಬಹಳ ಅಭಿವೃದ್ಧಿಯಾಗಿದೆ. ಶಾಂತಿ, ಸಾಮರಸ್ಯವೂ ನೆಲೆಸಿದೆ ಎಂದರು.
DMK has come to power with false hopes to people of Tamilnadu slams BJP Annamalai in Mangalore taking part at the The 12-day -long Grama Vikasa Yatra, led by Bantwal MLA Rajesh Naik.
19-06-26 04:18 pm
HK News Staffer
ರೈ ಅವರೇ ಧನ ಸಹಾಯ ಮಾಡಿ ಬುರುಡೆ ಗ್ಯಾಂಗ್ ನಡೆಸುತ್ತ...
18-06-26 09:57 pm
ಪರಿಷತ್ ಚುನಾವಣೆ; ಮೈತ್ರಿ ಪಕ್ಷಕ್ಕೆ ತೀವ್ರ ಮುಖಭಂಗ,...
18-06-26 07:15 pm
ಆರೆಸ್ಸೆಸ್ ನೋಂದಣಿ ; ಪ್ರಿಯಾಂಕ ಖರ್ಗೆ ಪತ್ರಕ್ಕೆ ಸಾ...
18-06-26 01:25 pm
Jayadeva Hospital, Mysuru: ಮೈಸೂರಿನ ಜಯದೇವ ಆಸ್ಪ...
18-06-26 01:17 pm
18-06-26 07:17 pm
HK News Staffer
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
19-06-26 07:48 pm
HK News Staffer
ಬಂಗ್ಲೆಗುಡ್ಡೆ ಅಸ್ಥಿಪಂಜರಗಳ ಗುರುತು ಪತ್ತೆಗಿಳಿದ ಎಸ...
19-06-26 03:31 pm
ಅಸ್ಸಾಂ ಕಾರ್ಮಿಕರಿಗೆ ಪೊಲೀಸ್ ಕ್ಲಿಯರೆನ್ಸ್ ಸರ್ಟಿಫಿ...
19-06-26 12:24 pm
Bejai, Kadri Water Issue: ಬಿಜೈ, ಕದ್ರಿಗೆ ಕಲುಷಿ...
18-06-26 12:33 pm
ಬಸ್ಸೋ, ಬಸ್ ನಿಲ್ದಾಣವೋ ? ಗುರುಪುರ ಬಂಡಸಾಲೆಯಲ್ಲಿ ವ...
16-06-26 11:35 am
19-06-26 08:30 pm
HK News Staffer
ಕೋಡಿ ಬೀಚ್ನಲ್ಲಿ ಬೆಂಗಳೂರು ಮೂಲದ ಯುವಕ ಸಮುದ್ರ ಪಾಲ...
19-06-26 05:47 pm
Bhatkal News: ಭಟ್ಕಳದಲ್ಲಿ ಮತ್ತೆ ಕೋಮು ಸಂಘರ್ಷ ;...
18-06-26 01:20 pm
ಸ್ಕೂಟರಲ್ಲಿ ನಾಲ್ವರು ಹೆಣ್ಮಕ್ಕಳ ಜಾಲಿ ರೈಡ್; ನಿಯಂತ...
17-06-26 01:41 pm
ವಾಯುಪಡೆ ಅಧಿಕಾರಿ ಪತ್ನಿಗೆ ಅಮಲು ಪದಾರ್ಥ ನೀಡಿ ಅತ್ಯ...
16-06-26 08:32 pm