ಬ್ರೇಕಿಂಗ್ ನ್ಯೂಸ್
28-01-23 12:18 pm Mangalore Correspondent ಕರಾವಳಿ
ಮಂಗಳೂರು, ಜ.28: ಲಂಚ ಪಡೆದು ಕೋಟ್ಯಂತರ ಆಸ್ತಿ ಗಳಿಸಿದ್ದ ಭ್ರಷ್ಟ ಅರಣ್ಯಾಧಿಕಾರಿಗೆ ಒಂದೂವರೆ ಕೋಟಿ ರೂಪಾಯಿ ದಂಡ ಮತ್ತು ಐದು ವರ್ಷ ಜೈಲು ಶಿಕ್ಷೆ ವಿಧಿಸಿ ಮಂಗಳೂರಿನ 3ನೇ ಹೆಚ್ಚುವರಿ ಜಿಲ್ಲಾ ಸತ್ರ (ವಿಶೇಷ) ನ್ಯಾಯಾಲಯ ತೀರ್ಪು ನೀಡಿದೆ.
ಬೆಳ್ತಂಗಡಿ ವಲಯ ಅರಣ್ಯಾಧಿಕಾರಿಯಾಗಿದ್ದ ಎಸ್.ರಾಘವ ಪಾಟಾಳಿ ಪ್ರಕರಣದ ಆರೋಪಿ. ಈತನಿಗೆ 5 ವರ್ಷಗಳ ಸಾದಾ ಸಜೆ ಹಾಗೂ 1 ಕೋಟಿ ಐವತ್ತು ಲಕ್ಷ ರೂಪಾಯಿ ದಂಡ ವಿಧಿಸಲಾಗಿದೆ.
ಅಲ್ಲದೆ, ದಂಡ ಕಟ್ಟಲು ವಿಫಲನಾದಲ್ಲಿ ಮತ್ತೆ ಒಂದು ವರ್ಷಗಳ ಸಾದಾ ಶಿಕ್ಷೆ ನೀಡಲಾಗಿದೆ. ರಾಘವ ಪಾಟಾಳಿ ವಿರುದ್ಧ ಆದಾಯಕ್ಕಿಂತ ಹೆಚ್ಚು ಆಸ್ತಿ ಹೊಂದಿದ ಹಿನ್ನೆಲೆ 2011ರಲ್ಲಿ ಕರ್ನಾಟಕ ಲೋಕಾಯುಕ್ತ ಪೊಲೀಸ್ ಠಾಣೆಯಲ್ಲಿ ಎಫ್ ಐಆರ್ ದಾಖಲಾಗಿತ್ತು. 13(1)(ಇ) ಜೊತೆಗೆ 13(2) ಭ್ರಷ್ಟಾಚಾರ ತಡೆ ಕಾಯ್ದೆ 1988ರ ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು. ತನಿಖೆ ನಡೆಸಿದ ಲೋಕಾಯುಕ್ತ ಪೊಲೀಸ್ ಇನ್ಸ್ಪೆಕ್ಟರ್ ಉದಯ ನಾಯಕ್, ಡಿವೈಎಸ್ಪಿ ವಿಠಲದಾಸ್ ಪೈ ನ್ಯಾಯಾಲಯಕ್ಕೆ ದೋಷಾರೋಪ ಸಲ್ಲಿಸಿದ್ದರು.
ಸುದೀರ್ಘ ವಿಚಾರಣೆ ನಡೆಸಿದ ನ್ಯಾಯಾಧೀಶ ಬಿಬಿ ಜಕಾತಿ ಅವರು, ಸಾಕ್ಷ್ಯಾಧಾರಗಳನ್ನು ಪರಿಗಣಿಸಿ 295 ಪುಟಗಳ ತೀರ್ಪು ಪ್ರಕಟಿಸಿದ್ದಾರೆ. ಆರೋಪಿ ಎಸ್. ರಾಘವ ಪಾಟಾಳಿ ಮಂಗಳೂರಿನ ಕೊಂಚಾಡಿಯಲ್ಲಿ ವಾಸವಿದ್ದು ಬೆಳ್ತಂಗಡಿ ಸಹ್ಯಾದ್ರಿ ವಲಯದಲ್ಲಿ ಅರಣ್ಯಾಧಿಕಾರಿಯಾಗಿ ಕರ್ತವ್ಯದಲ್ಲಿದ್ದಾರೆ.
A zonal forest officer was sentenced to five years in prison and slapped a fine of Rs 1.5 lac in a disproportionate asset case. S Raghava Patali, a resident of Derebail Konchady, retired zonal forest officer of Sahyadri zone of Beltangady, is the person who is convicted by the court.
14-07-25 01:43 pm
HK News Desk
Dr B Saroja Devi Death: 17ನೇ ವಯಸ್ಸಲ್ಲೇ ಚಿತ್ರರ...
14-07-25 12:50 pm
Mantralaya, Tungabhadra River, drowning: ತುಂಬ...
13-07-25 08:37 pm
ಆಧ್ಯಾತ್ಮಿಕ ಸಾಧನೆಯತ್ತ ಚಿತ್ತ ; ಗೋಕರ್ಣ ಬಳಿಯ ದಟ್ಟ...
13-07-25 04:03 pm
Shivamogga Jail News, Mobile phone: ಶಿವಮೊಗ್ಗ...
12-07-25 10:47 pm
14-07-25 03:24 pm
HK News Desk
ಅಹ್ಮದಾಬಾದ್ ವಿಮಾನ ದುರಂತ ; ಭಾರೀ ಅನುಮಾನ ಹುಟ್ಟಿಸಿ...
12-07-25 09:25 pm
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
Coimbatore Serial Blasts, 'Tailor Raja' Arres...
11-07-25 12:08 pm
13-07-25 11:13 pm
Mangalore Correspondent
Mangalore News: ಸಾರಿಗೆ ಕಚೇರಿಗಳಿಗೆ ಸ್ವಂತ ಕಟ್ಟಡ...
13-07-25 11:11 pm
Mangalore, E Bus, MP Chowta: ಕೇಂದ್ರ ಸರ್ಕಾರದಿಂ...
13-07-25 10:12 pm
Mangalore DK Transport, DK Group Alwyn Joel N...
13-07-25 07:00 pm
ಬೆಳ್ತಂಗಡಿ ; ಶಿಕ್ಷಕಿಯಾಗಿದ್ದ ವಿವಾಹಿತ ಮಹಿಳೆ ನೇಣು...
13-07-25 05:56 pm
13-07-25 05:23 pm
Bangalore Correspondent
ಅಪ್ರಾಪ್ತ ಬಾಲಕಿಯನ್ನು ಶಾಲೆಗೆ ಕರೆದೊಯ್ಯುವ ನೆಪದಲ್ಲ...
12-07-25 11:10 pm
Dowry Harassment, Mysuru: ಮದುವೆಯಾದ ಎರಡೇ ತಿಂಗಳ...
12-07-25 01:32 pm
Mangalore Job Fraud, KCOCA, Police: ಫಾರಿನ್ ಉದ...
12-07-25 11:59 am
Robbery, Gold Workshop in Kalaburagi: ಕಲಬುರಗಿ...
11-07-25 10:10 pm