ಬ್ರೇಕಿಂಗ್ ನ್ಯೂಸ್
30-01-23 02:59 pm Mangalore Correspondent ಕರಾವಳಿ
ಮಂಗಳೂರು, ಜ.30 : ಸುರತ್ಕಲ್ ನಲ್ಲಿ ಇತ್ತೀಚೆಗೆ ಕೊಲೆಯಾಗಿದ್ದ ಫಾಝಿಲ್ ಹತ್ಯೆಯನ್ನು ನಮ್ಮದೇ ಹುಡುಗರು ಮಾಡಿದ್ದಾಗಿ ಪ್ರಚೋದನಕಾರಿ ಹೇಳಿಕೆ ನೀಡಿದ್ದ ವಿಎಚ್ ಪಿ ಮುಖಂಡ ಶರಣ್ ಪಂಪ್ವೆಲ್ ಅವರನ್ನು ಬಂಧಿಸಬೇಕು ಎಂದು ಫಾಜಿಲ್ ತಂದೆ ಉಮರ್ ಫಾರೂಕ್ ಮಂಗಳೂರು ನಗರ ಪೊಲೀಸ್ ಕಮೀಷನರ್ ಗೆ ದೂರು ನೀಡಿದ್ದಾರೆ.
ಕಮಿಷನರ್ ಶಶಿಕುಮಾರ್ ಅವರನ್ನು ಭೇಟಿಯಾದ ಉಮರ್ ಫಾರೂಕ್, ಶರಣ್ ಪಂಪ್ವೆಲ್ ತನ್ನ ಮಗನ ಹತ್ಯೆಯನ್ನು ಸಂಭ್ರಮಿಸಿದ್ದಾನೆ. ಆತನ ಮೇಲೆ ಮೊದಲೇ ಸಂಶಯವಿತ್ತು. ಈಗ ಬಹಿರಂಗ ಹೇಳಿಕೆ ನೀಡಿದ್ದು ಕೂಡಲೇ ಬಂಧಿಸಿ ಪ್ರಕರಣದ ಬಗ್ಗೆ ಮರು ತನಿಖೆ ಮಾಡುವಂತೆ ಮನವಿ ಮಾಡಿದ್ದಾರೆ.
ಈ ಬಗ್ಗೆ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದ ಉಮರ್ ಫಾರೂಕ್, ಶರಣ್ ಪಂಪ್ವೆಲ್ ನನ್ನ ಮಗನ ಹತ್ಯೆಯನ್ನು ಸಂಭ್ರಮಿಸಿದ್ದಾನೆ. ಎಂಟು ಮಂದಿ ಒಬ್ಬ ಹುಡುಗನನ್ನು ಹೊಡೆದಿದ್ದನ್ನು ಶೌರ್ಯ ಎಂದಿದ್ದಾನೆ. ಇದು ನಿಜವಾದ ಶೌರ್ಯ ಅಲ್ಲ, ಅದು ಹೇಡಿತನ. ಶರಣ್ ಪಂಪ್ವೆಲ್ ಗೆ ತಾಕತ್ ಇದ್ರೆ ನಾನು ಒಬ್ಬನೇ ಬರುತ್ತೇನೆ. ನನ್ನ ಜೊತೆ ಕಾದಾಡಲಿ, ನಾನು ನೋಡಿಕೊಳ್ಳುತ್ತೇನೆ ಎಂದು ಸವಾಲು ಹಾಕಿದ್ದಾರೆ.
ಶರಣ್ ಹಿಂದು, ಹಿಂದುತ್ವದ ಬಗ್ಗೆ ಮಾತನಾಡುತ್ತಾನೆ. ಹಿಂದು ಬೇರೆ, ಇವರ ಹಿಂದುತ್ವ ಬೇರೆ. ಹಿಂದುತ್ವದಲ್ಲಿ ಇರುವವರು ಹಣ ತೆಗೆದುಕೊಂಡು ಕೃತ್ಯ ಮಾಡುವವರು. ಫಾಝೀಲ್ ಹತ್ಯೆಯ ರೂವಾರಿ ಶರಣ್ ಪಂಪ್ವೆಲ್ ಅನ್ನೋದು ನಿನ್ನೆಯ ಭಾಷಣದಲ್ಲಿ ಆತನೇ ಹೇಳಿದ್ದಾನೆ. ಎಡಿಜಿಪಿ ಅವರಿಗೂ ಈ ಬಗ್ಗೆ ಮನವಿ ಮಾಡಿದ್ದೇನೆ. ಪೊಲೀಸರು ಶರಣ್ ಪಂಪ್ವೆಲ್ ವಿರುದ್ಧ ಸುಮೋಟೋ ಕೇಸ್ ದಾಖಲಿಸಬಹುದಿತ್ತು. ಆದರೆ ಪೊಲೀಸರಿಗೂ ಒತ್ತಡ ಇರಬಹುದು, ಸುರತ್ಕಲ್ ಠಾಣೆಗೆ ತೆರಳಿ ದೂರು ನೀಡಲು ಕಮೀಷನರ್ ಹೇಳಿದ್ದಾರೆ. ದೂರು ಕೊಡುತ್ತೇನೆ. ಕೊಲೆ ಪ್ರಕರಣವನ್ನು ಸಂಪೂರ್ಣ ಮರು ತನಿಖೆ ಮಾಡಬೇಕು. ಪ್ರಕರಣದಲ್ಲಿ ಎಂಟು ಮಂದಿಯನ್ನು ಬಂಧಿಸಿ ಪೊಲೀಸರು ಚಾರ್ಜ್ ಶೀಟ್ ಹಾಕಿದ್ದರು. ಆದರೆ ಕೊಲೆಯ ಸೂತ್ರಧಾರರು ಯಾರೆಂದು ಪತ್ತೆ ಮಾಡಿರಲಿಲ್ಲ. ಶರಣ್ ಹೇಳಿಕೆಯಿಂದ ಈತನೇ ಸೂತ್ರಧಾರ ಎನ್ನುವುದು ತಿಳಿದುಬರುತ್ತಿದೆ. ಬಂಧಿಸಿ ತನಿಖೆ ನಡೆಸಿದರೆ ನೈಜಾಂಶ ಹೊರಬಹುದು ಎಂದು ಫಾಝಿಲ್ ತಂದೆ ಉಮರ್ ಫಾರೂಕ್ ಹೇಳಿದ್ದಾರೆ.
ಕರಸೇವಕರ ಜೀವಂತ ದಹನಕ್ಕಾಗಿ ಗುಜರಾತ್ ನರಮೇಧ ; ಹಿಂದುಗಳ ಪರಾಕ್ರಮ ಎಂದು ಸಮರ್ಥಿಸಿದ ಶರಣ್ ಪಂಪ್ವೆಲ್ !
Surathkal Fazil murder case, Fazil father slams Sharan Pumpwell over provocative statement stating that Fazils murder was a revenge murder for Praveen Nettaru Murder in Sullia. Speaking to Media here Fazil Father stated that Sharan Pumpwell has rejoiced over my sons death. Father alleged that Sharan is the Supari killer and master mind of Fazils killing.
15-09-25 08:53 pm
Bangalore Correspondent
Actor Upendra, Wife Priyanka, Cyber Fraud, Ha...
15-09-25 04:45 pm
Pratap Simha, Banu Mushtaq: ಬಾನು ಮುಷ್ತಾಕ್ ದಸರ...
15-09-25 03:39 pm
Bommai, SIT, Dharmasthala, Bommai: ನಿರೀಕ್ಷೆಗೆ...
14-09-25 05:18 pm
ವಾಹನ ಸವಾರರಿಗೆ ಶೇ.50 ರಿಯಾಯಿತಿ ಆಫರ್ ಎಫೆಕ್ಟ್ ...
13-09-25 10:38 pm
15-09-25 04:57 pm
HK News Desk
ನಾನು ಶಿವಭಕ್ತ ; ನಿಂದನೆಯ ವಿಷವನ್ನು ಕುಡಿದು ಜೀರ್ಣಿ...
14-09-25 10:49 pm
ಪ್ರಧಾನಿ ಮೋದಿ ಅಸ್ಸಾಂನಲ್ಲಿ ಇರುವಾಗಲೇ 5.8ರ ತೀವ್ರತ...
14-09-25 07:31 pm
ಮಿಜೋರಾಂ ರಾಜ್ಯದಲ್ಲಿ ಮೊದಲ ರೈಲು ಮಾರ್ಗ ಪ್ರಧಾನಿ ಮೋ...
13-09-25 03:25 pm
ವಾಷಿಂಗ್ ಮೆಷಿನ್ ವಿಷಯದಲ್ಲಿ ವಾಗ್ವಾದ ; ಅಮೆರಿಕದಲ...
12-09-25 11:33 am
15-09-25 08:28 pm
Mangalore Correspondent
Mangalore Accident, Saudi, Ullal: ಸೌದಿ ಅರೇಬಿಯ...
15-09-25 02:08 pm
ಬಂಗ್ಲೆಗುಡ್ಡೆ ಕಾಡಿನಲ್ಲಿ ಸ್ಥಳ ಶೋಧಕ್ಕೆ ಎಸ್ಐಟಿ ಸಿ...
15-09-25 01:58 pm
Mangalore, Ullal News, Boat: ಕೈಕೊಟ್ಟ ಇಂಜಿನ್ ;...
15-09-25 11:27 am
Vittal Gowda, Mangalore, Dharmasthala: ವಿಠಲ ಗ...
14-09-25 10:55 pm
15-09-25 10:47 pm
Bangalore Correspondent
Udupi, Surat Murder, Arrest: ವೃದ್ಧ ದಂಪತಿಯನ್ನು...
14-09-25 06:01 pm
Mangalore Fake Aadhar, RTC Scam, Police: ಆರೋಪ...
13-09-25 11:36 am
ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರಗೈದು ಹತ್ಯೆ ; ಬೆಳಗ...
12-09-25 11:07 pm
Ullal Police, Mangalore, Gold Robbery: ತೊಕ್ಕೊ...
12-09-25 10:48 pm