ಬ್ರೇಕಿಂಗ್ ನ್ಯೂಸ್
30-01-23 05:11 pm Mangalore Correspondent ಕರಾವಳಿ
ಮಂಗಳೂರು, ಜ.30 : ಇನ್ ಸ್ಟ್ರಾಗ್ರಾಮ್ ನಲ್ಲಿ ಪರಿಚಯವಾಗಿದ್ದ ವ್ಯಕ್ತಿಯೊಬ್ಬ ತನ್ನಲ್ಲಿ ನಿನ್ನ ಖಾಸಗಿ ವಿಡಿಯೋ ಇದೆಯೆಂದು ಬ್ಲಾಕ್ಮೇಲ್ ಮಾಡಿದ್ದು ಇದರಿಂದ ಬೆದರಿದ ಬಿಕಾಂ ವಿದ್ಯಾರ್ಥಿ ಕೀಟನಾಶಕ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಳ್ತಂಗಡಿಯಲ್ಲಿ ನಡೆದಿದೆ.
ಧರ್ಮಸ್ಥಳ ಗ್ರಾಮದ ನಿವಾಸಿ, ಬೆಳ್ತಂಗಡಿ ಖಾಸಗಿ ಕಾಲೇಜಿನ ವಿದ್ಯಾರ್ಥಿ ಹರ್ಷಿತ್ (19) ಮೃತಪಟ್ಟ ವಿದ್ಯಾರ್ಥಿ. ದ್ವಿತೀಯ ವರ್ಷದ ಬಿಕಾಂ ಕಲಿಯುತ್ತಿದ್ದ ಹರ್ಷಿತ್ ಗೆ ಇನ್ಸ್ಟಾಗ್ರಾಂ ಮೂಲಕ 15 ದಿನಗಳ ಹಿಂದೆ ಅಪರಿಚಿತ ವ್ಯಕ್ತಿಯೊಬ್ಬ ಸಂಪರ್ಕಕ್ಕೆ ಬಂದಿದ್ದ. ಹರ್ಷಿತ್ ಆತನೊಂದಿಗೆ ವಿಡಿಯೋ ಕರೆ ಮಾಡಿ ಮಾತಾಡುತ್ತಿದ್ದ.
ಈ ನಡುವೆ, ಹರ್ಷಿತ್ ಬಳಿ ನಿನ್ನ ವೈಯಕ್ತಿಕ ವಿಡಿಯೋ ನನ್ನ ಬಳಿ ಇದ್ದು, ಅದನ್ನು ವೈರಲ್ ಮಾಡುತ್ತೇನೆ, ತನಗೆ 11,000 ರೂ. ಕೊಡಬೇಕೆಂದು ಅಪರಿಚಿತ ಬೇಡಿಕೆ ಇಟ್ಟಿದ್ದ. ಇದಕ್ಕೆ ಹರ್ಷಿತ್ ಜ.23ರ ವರೆಗೆ ಅವಕಾಶ ಕೇಳಿದ್ದು, ಜ.24 ಮಧ್ಯಾಹ್ನದ ವರೆಗೂ ಹಣ ಹೊಂದಿಸಲು ಸಾಧ್ಯವಾಗಿರಲಿಲ್ಲ. ಇದರಿಂದ ಬೆದರಿದ ಹರ್ಷಿತ್ ತನ್ನ ವೈಯಕ್ತಿಕ ವಿಡಿಯೋ ವೈರಲ್ ಮಾಡಿದರೆ ಮಾನ ಹೋಗಬಹುದೆಂಬ ಭಯದಿಂದ ಜ.24 ರಂದು ಮಧ್ಯಾಹ್ನ ಇಲಿ ಪಾಷಾಣ ಸೇವಿಸಿದ್ದ. ಮನೆಯಲ್ಲಿ ಅಸ್ವಸ್ಥನಾಗಿದ್ದ ಹರ್ಷಿತ್ ನನ್ನು ಚಿಕಿತ್ಸೆಗಾಗಿ ಉಜಿರೆಯ ಬೆನಕ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು.
ವೈದ್ಯರು ಪರೀಕ್ಷಿಸಿ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ವೆನ್ಲಾಕ್ ಆಸ್ಪತ್ರೆಗೆ ಕರೆದೊಯ್ಯಲು ತಿಳಿಸಿದ್ದರು. ಅದರಂತೆ ಮಂಗಳೂರಿನ ಆಸ್ಪತ್ರೆಗೆ ಕರೆತಂದಿದ್ದು ವೈದ್ಯರು ಚಿಕಿತ್ಸೆ ನೀಡಿದ್ದರು. ಆದರೆ ಚಿಕಿತ್ಸೆಗೆ ಸ್ಪಂದಿಸದೆ ಜ.29 ರಂದು ಸಂಜೆ ಹರ್ಷಿತ್ ಮೃಪಟ್ಟಿದ್ದಾನೆ. ಈ ಬಗ್ಗೆ ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
A 19-year-old student in Belthangady allegedly died by suicide after being blackmailed over an objectionable video by an Instagram friend. The deceased has been identified as Harshit (19 years old), a resident of Ashok Nagar of Dharmasthala.
18-12-25 12:37 pm
HK News Desk
ಸಿಎಂ ಸಿದ್ದರಾಮಯ್ಯ ಆರೋಗ್ಯದಲ್ಲಿ ಏರುಪೇರು ; ಸದನಕ್ಕ...
17-12-25 10:30 pm
ಯಶವಂತಪುರ - ಕಾರವಾರ ಗೋಮಟೇಶ್ವರ ಎಕ್ಸ್ ಪ್ರೆಸ್ ರೈಲು...
17-12-25 12:45 pm
ಶೃಂಗೇರಿ ; ಬಿಕಾಂ ಓದುತ್ತಿದ್ದ ವಿದ್ಯಾರ್ಥಿನಿ ಹಠಾತ್...
17-12-25 12:42 pm
ಶಿವಮೊಗ್ಗ, ಧಾರವಾಡ ಸೇರಿ ಹಲವೆಡೆ ಲೋಕಾಯುಕ್ತ ದಾಳಿ ;...
16-12-25 03:08 pm
17-12-25 10:27 pm
HK News Desk
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
18-12-25 10:52 am
Mangalore Correspondent
Dharmasthala case, Chinnayya: ಜಾಮೀನು ಸಿಕ್ಕರೂ...
17-12-25 08:54 pm
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
Udupi, Baby death: ಉಡುಪಿ ; ತಾಯಿ ಕೈಯಿಂದ ಜಾರಿ ಬ...
17-12-25 05:23 pm
Mangalore Jail, Fight, Ccb Police: ಮಂಗಳೂರು ಜೈ...
17-12-25 05:05 pm
17-12-25 11:14 am
Bangalore Correspondent
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm