ಬ್ರೇಕಿಂಗ್ ನ್ಯೂಸ್
30-01-23 05:11 pm Mangalore Correspondent ಕರಾವಳಿ
ಮಂಗಳೂರು, ಜ.30 : ಇನ್ ಸ್ಟ್ರಾಗ್ರಾಮ್ ನಲ್ಲಿ ಪರಿಚಯವಾಗಿದ್ದ ವ್ಯಕ್ತಿಯೊಬ್ಬ ತನ್ನಲ್ಲಿ ನಿನ್ನ ಖಾಸಗಿ ವಿಡಿಯೋ ಇದೆಯೆಂದು ಬ್ಲಾಕ್ಮೇಲ್ ಮಾಡಿದ್ದು ಇದರಿಂದ ಬೆದರಿದ ಬಿಕಾಂ ವಿದ್ಯಾರ್ಥಿ ಕೀಟನಾಶಕ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಳ್ತಂಗಡಿಯಲ್ಲಿ ನಡೆದಿದೆ.
ಧರ್ಮಸ್ಥಳ ಗ್ರಾಮದ ನಿವಾಸಿ, ಬೆಳ್ತಂಗಡಿ ಖಾಸಗಿ ಕಾಲೇಜಿನ ವಿದ್ಯಾರ್ಥಿ ಹರ್ಷಿತ್ (19) ಮೃತಪಟ್ಟ ವಿದ್ಯಾರ್ಥಿ. ದ್ವಿತೀಯ ವರ್ಷದ ಬಿಕಾಂ ಕಲಿಯುತ್ತಿದ್ದ ಹರ್ಷಿತ್ ಗೆ ಇನ್ಸ್ಟಾಗ್ರಾಂ ಮೂಲಕ 15 ದಿನಗಳ ಹಿಂದೆ ಅಪರಿಚಿತ ವ್ಯಕ್ತಿಯೊಬ್ಬ ಸಂಪರ್ಕಕ್ಕೆ ಬಂದಿದ್ದ. ಹರ್ಷಿತ್ ಆತನೊಂದಿಗೆ ವಿಡಿಯೋ ಕರೆ ಮಾಡಿ ಮಾತಾಡುತ್ತಿದ್ದ.
ಈ ನಡುವೆ, ಹರ್ಷಿತ್ ಬಳಿ ನಿನ್ನ ವೈಯಕ್ತಿಕ ವಿಡಿಯೋ ನನ್ನ ಬಳಿ ಇದ್ದು, ಅದನ್ನು ವೈರಲ್ ಮಾಡುತ್ತೇನೆ, ತನಗೆ 11,000 ರೂ. ಕೊಡಬೇಕೆಂದು ಅಪರಿಚಿತ ಬೇಡಿಕೆ ಇಟ್ಟಿದ್ದ. ಇದಕ್ಕೆ ಹರ್ಷಿತ್ ಜ.23ರ ವರೆಗೆ ಅವಕಾಶ ಕೇಳಿದ್ದು, ಜ.24 ಮಧ್ಯಾಹ್ನದ ವರೆಗೂ ಹಣ ಹೊಂದಿಸಲು ಸಾಧ್ಯವಾಗಿರಲಿಲ್ಲ. ಇದರಿಂದ ಬೆದರಿದ ಹರ್ಷಿತ್ ತನ್ನ ವೈಯಕ್ತಿಕ ವಿಡಿಯೋ ವೈರಲ್ ಮಾಡಿದರೆ ಮಾನ ಹೋಗಬಹುದೆಂಬ ಭಯದಿಂದ ಜ.24 ರಂದು ಮಧ್ಯಾಹ್ನ ಇಲಿ ಪಾಷಾಣ ಸೇವಿಸಿದ್ದ. ಮನೆಯಲ್ಲಿ ಅಸ್ವಸ್ಥನಾಗಿದ್ದ ಹರ್ಷಿತ್ ನನ್ನು ಚಿಕಿತ್ಸೆಗಾಗಿ ಉಜಿರೆಯ ಬೆನಕ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು.
ವೈದ್ಯರು ಪರೀಕ್ಷಿಸಿ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ವೆನ್ಲಾಕ್ ಆಸ್ಪತ್ರೆಗೆ ಕರೆದೊಯ್ಯಲು ತಿಳಿಸಿದ್ದರು. ಅದರಂತೆ ಮಂಗಳೂರಿನ ಆಸ್ಪತ್ರೆಗೆ ಕರೆತಂದಿದ್ದು ವೈದ್ಯರು ಚಿಕಿತ್ಸೆ ನೀಡಿದ್ದರು. ಆದರೆ ಚಿಕಿತ್ಸೆಗೆ ಸ್ಪಂದಿಸದೆ ಜ.29 ರಂದು ಸಂಜೆ ಹರ್ಷಿತ್ ಮೃಪಟ್ಟಿದ್ದಾನೆ. ಈ ಬಗ್ಗೆ ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
A 19-year-old student in Belthangady allegedly died by suicide after being blackmailed over an objectionable video by an Instagram friend. The deceased has been identified as Harshit (19 years old), a resident of Ashok Nagar of Dharmasthala.
31-03-26 10:13 am
HK News Staffer
ತಮಿಳುನಾಡಿನಲ್ಲಿ ಬಿಜೆಪಿ ಸೀಟು ಹಂಚಿಕೆಯಲ್ಲಿ ಲೋಪ ;...
29-03-26 10:19 am
RCB ಗೆಲುವಿಗೆ ರಕ್ತದಾನ ಅಭಿಯಾನ ; ಚಿನ್ನಸ್ವಾಮಿ ಉದ್...
28-03-26 08:39 pm
ಆಸ್ತಿ ಕಲಹ ; ಮೂವರು ಪುಟ್ಟ ಮಕ್ಕಳೊಂದಿಗೆ ಬಾವಿಗೆ ಹಾ...
28-03-26 02:54 pm
ಭಾರತದಲ್ಲಿ ಮತ್ತೆ ಲಾಕ್ಡೌನ್ ; ಜಾಲತಾಣದಲ್ಲಿ ಟ್ರೆಂ...
27-03-26 04:49 pm
31-03-26 11:00 pm
HK News Staffer
ಜೈಶ್-ಎ-ಮೊಹಮ್ಮದ್ ಮುಖ್ಯಸ್ಥ ಮಸೂದ್ ಅಜರ್ ಸೋದರ ತಾಹಿ...
31-03-26 03:30 pm
ಸಂಧಾನ ಮಾತುಕತೆ ಒಪ್ಪದಿದ್ದರೆ ಇರಾನ್ ಸರ್ವನಾಶ ; ಭೂದ...
31-03-26 10:43 am
ಗಲ್ಫ್ ಯುದ್ಧ ಎಫೆಕ್ಟ್ ; ಡಾಲರ್ ಮುಂದೆ ರುಪಾಯಿ ಮಹಾಪ...
30-03-26 10:31 pm
ಹರ್ಮುಜ್ ಜಲಸಂಧಿಯಲ್ಲಿ ಇರಾನ್ ಟೋಲ್ ಬೂತ್ ; ಶುಲ್ಕ ಕ...
28-03-26 04:06 pm
31-03-26 10:06 pm
HK News Desk
Moodbidri Accident: ಮೂಡುಬಿದ್ರೆ ; ರಸ್ತೆ ಬದಿ ನಿ...
31-03-26 09:02 pm
ಅವಳೇ ಮಗನನ್ನು ವಿಷ ಕೊಟ್ಟು ಕೊಂದಿದ್ದಾಳೆ, ವಿಷಯ ಮುಚ...
31-03-26 06:27 pm
ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ಸಿನಿಂದ ಹೊರಬಿದ್...
31-03-26 03:01 pm
ಮಂಗಳೂರು ಬಂದರಿಗೆ ಬರಲಿದೆ ಮತ್ತೆರಡು ಎಲ್ಪಿಜಿ ಹೊತ್ತ...
30-03-26 11:13 pm
31-03-26 11:11 am
HK News Staffer
ಮದುವೆ ಆಗಿದ್ರೂ ಲವರ್ ನಂಟು ; ಹಣಕ್ಕಾಗಿ ಪೀಡಿಸಿ ಬ್ಲ...
30-03-26 07:35 pm
ತಿಂಗಳ ಹಿಂದಷ್ಟೇ ರಿಜಿಸ್ಟರ್ ಮದುವೆಯಾಗಿದ್ದ ಬೆಳ್ತಂಗ...
29-03-26 10:36 pm
ಟ್ಯಾಬ್ಲೆಟ್ ಆರಿಫ್ ಹತ್ಯೆ ; ಟೋಪಿ ನೌಫಾಲ್ ಸಾವನ್ನ ಸ...
29-03-26 10:22 pm
ಅರ್ಕುಳ ಬಳಿ ಹೆದ್ದಾರಿಯಲ್ಲಿ ಹಾಲಿನ ಟ್ಯಾಂಕರ್ ಗೆ ಹಿ...
29-03-26 07:49 pm