ಬ್ರೇಕಿಂಗ್ ನ್ಯೂಸ್
31-01-23 07:42 pm Mangalore Correspondent ಕರಾವಳಿ
ಮಂಗಳೂರು, ಜ.31 : ದಕ್ಷಿಣ ಕನ್ನಡ-ಉಡುಪಿ- ಮಂಜೇಶ್ವರ-ಕಾಸರಗೋಡು- ಕಾಞಂಗಾಡ್ ಜಿಲ್ಲೆಗಳಲ್ಲಿ ಬೀಡಿ ಗುತ್ತಿಗೆದಾರರಾಗಿ ಸುಮಾರು 5 ಸಾವಿರದಷ್ಟು ಸದಸ್ಯರಿದ್ದಾರೆ. ಜಿಲ್ಲೆಯಲ್ಲಿ ವಿವಿಧ ಮಾರ್ಕಿನ ಬೀಡಿ ಸಂಸ್ಥೆಯಿಂದ ಗುತ್ತಿಗೆದಾರರು ಎಲೆ ತಂಬಾಕು ಇತರ ವಸ್ತುಗಳನ್ನು ಪಡೆದು ಅದನ್ನು ಬೀಡಿ ಕಾರ್ಮಿಕರಿಗೆ ವಿತರಿಸಿ ಅದರಿಂದ ತಯಾರಾದ ಬೀಡಿಯನ್ನು ಕಾರ್ಮಿಕರಿಂದ ಪಡೆದು ಆಯಾಯ ಕಂಪೆನಿಗಳಿಗೆ ತಲುಪಿಸುವ ಕೆಲಸ ಗುತ್ತಿಗೆದಾರರದ್ದಾಗಿದೆ. ಅವರ ದುಡಿಮೆಗೆ ಕೇವಲ ಒಂದು
ಸಾವಿರ ಬೀಡಿಯ ಮೇಲೆ ಕಮಿಷನ್ ಮಾತ್ರ ನೀಡಲಾಗಿದ್ದು, ಬೇರೆ ಯಾವುದೇ ಸೌಲಭ್ಯವಿರುವುದಿಲ್ಲ
ಬೀಡಿ ಗುತ್ತಿಗೆದಾರರ ವಿವಿಧ ಸಂಘಟನೆಗಳು ಪ್ರತಿವರ್ಷ ಹೆಚ್ಚುವರಿ ಕಮಿಷನ್ಗಾಗಿ ಆಡಳಿತ ವರ್ಗಕ್ಕೆ ಮನವಿಯ ಮೂಲಕ ಒತ್ತಾಯಿಸುತ್ತಿದ್ದರೂ ಆಡಳಿತ ವರ್ಗ ಎಪ್ರಿಲ್ನಲ್ಲಿ ಹೆಚ್ಚುವರಿ ಕಮಿಷನ್ ನೀಡದೇ ಸತಾಯಿಸಿ ಡಿಸೆಂಬರ್ ಜನವರಿಯಲ್ಲಿ ನೀಡುತ್ತಾ ಬಂದಿದೆ. ಈ ಬಾರಿ 2022/23 ರ ಅವಧಿಗೆ ರೂಪಾಯಿ 10ನ್ನು ಹೆಚ್ಚುವರಿಯಾಗಿ ನೀಡಲು
ಒತ್ತಾಯಿಸಲಾಯಿತು. ಅದರಂತೆ ಕಳೆದ ಜ.5ರಂದು ವಿವಿಧ ಬೀಡಿ ಗುತ್ತಿಗೆದಾರರು ಜಂಟಿಯಾಗಿ ಜ.16 ರ ಒಳಗೆ ಹೆಚ್ಚುವರಿ ಕಮಿಷನ್ ನೀಡಲು ಮನವಿ ಸಲ್ಲಿಸಿದ್ದರೂ ಆಡಳಿತ ವರ್ಗ ಯಾವುದೇ ಕ್ರಮ ಜರುಗಿಸದೆ ದಬ್ಬಾಳಿಕೆ ನಡೆಸುತ್ತಿದೆ" ಎಂದು ಬೀಡಿ ಗುತ್ತಿಗೆದಾರರ ಒಕ್ಕೂಟದ ಕಾರ್ಯಾಧ್ಯಕ್ಷ ಮಹಮ್ಮದ್ ರಫಿ ಆರೋಪಿಸಿದರು.
ಪತ್ರಿಕಾಗೋಷ್ಟಿಯಲ್ಲಿ ಮಾತಾಡಿದ ಅವರು, ಜ.17ರಂದು ಮಾಲಕರ ಒಕ್ಕೂಟದ ಅಧ್ಯಕ್ಷರ ಅನುಮತಿಯಂತೆ ಜ.30ರಂದು ಜಂಟಿ ಸಭೆ ಕರೆದು ಹೋರಾಟ ನಡೆಸುವ ಕುರಿತು ಚರ್ಚಿಸಲಾಗಿದ್ದು ಒಕ್ಕೂಟದ ಕಾರ್ಯದರ್ಶಿ ಬಿ. ಸತೀಶ್ ಪೈಯವರು ವಿವಿಧ ಬೀಡಿ ಗುತ್ತಿಗೆದಾರರ ಸಂಘಟನೆಗಳ ಅಧ್ಯಕ್ಷರುಗಳಿಗೆ ಮೆಸೇಜ್ ರವಾನಿಸಿದ್ದು ಅದರಂತೆ ಜಂಟಿ ಸಭೆ ರದ್ದುಗೊಂಡಿತ್ತು. ಆದ್ದರಿಂದ ಫೆ.10ರೊಳಗೆ ಮಾತುಕತೆಗೆ ಆಹ್ವಾನ ನೀಡದಿದ್ದಲ್ಲಿ ಅಂದಿನಿಂದ 3 ಜಿಲ್ಲೆಗಳ ಬೀಡಿ ಗುತ್ತಿಗೆದಾರರು ಕೆಲಸ ಸ್ಥಗಿತಗೊಳಿಸಿ, ಬೇಡಿಕೆ ಈಡೇರುವ ತನಕ ಅನಿರ್ದಿಷ್ಟಾವಧಿ ಮುಷ್ಕರ ನಡೆಸುವುದು. ಸುಮಾರು 60 ಡಿಪೋಗಳ ಎದುರು ಧರಣಿ ಸತ್ಯಾಗ್ರಹ, ಬೀಡಿ, ಎಲೆ, ತಂಬಾಕು, ಲೇಬಲ್ ಬೀಡಿ, ಸಾಗಾಟಕ್ಕೆ ತಡೆಹಿಡಿದು ಮಂಗಳೂರು ಗಣೇಶ್ ಬೀಡಿ ಕಚೇರಿ ಮತ್ತು ಭಾರತ್ ಬೀಡಿ ಸಮೂಹ ಸಂಸ್ಥೆಯ ಎದುರು ಬೀಡಿ ಗುತ್ತಿಗೆದಾರರು ಮತ್ತು ಬೀಡಿ ಕಾರ್ಮಿಕರನ್ನು ಒಗ್ಗೂಡಿಸಿ ಬೃಹತ್ ಪ್ರತಿಭಟನೆ ನಡೆಸುತ್ತೇವೆ ಎಂದು ಹೇಳಿದರು.
ಪತ್ರಿಕಾಗೋಷ್ಠಿಯಲ್ಲಿ ಸಂಘಟನೆಯ ಗೌರವಾಧ್ಯಕ್ಷ ಎಂ. ಸುರೇಶ್ಚಂದ್ರ ಶೆಟ್ಟಿ, ಅಧ್ಯಕ್ಷರಾದ ರವಿ ಉಡುಪಿ, ಹರೀಶ್ ಕೆ.ಎಸ್., ಕೃಷ್ಣಪ್ಪ ತೊಕ್ಕೊಟ್ಟು, ಗಂಗಾಧರ್ ಶೆಟ್ಟಿ, ಕೃಷ್ಣ ಕಾಸರಗೋಡು ಹಾಗೂ ಕರ್ನಾಟಕ ರಾಜ್ಯ ಬೀಡಿ ಕಂಟ್ರಾಕ್ಟ್ರುದಾರರ ಸಂಘ, ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ಬೀಡಿ ಕಂಟ್ರಾಕ್ಟ್ರುದಾರರ ಸಂಘ, ಸೌತ್ ಕೆನರಾ-ಉಡುಪಿ ಜಿಲ್ಲಾ ಬೀಡಿ ಕಂಟ್ರಾಕ್ಟರ್ ಯೂನಿಯನ್(ರಿ), ಜಯಕರ್ನಾಟಕ ಬೀಡಿ ಗುತ್ತಿಗೆದಾರರ ಸಂಘ ಪುತ್ತೂರು, ಕಾಸರಗೋಡು ಜಿಲ್ಲಾ ಬೀಡಿ ಗುತ್ತಿಗೆದಾರರ ಸಂಘ, ಕಾಸರಗೋಡು ಜಿಲ್ಲೆ ಇದರ ಪದಾಧಿಕಾರಿಗಳು ಉಪಸ್ಥಿತರಿದ್ದರು.
Mangalore Beedi contractors warn of protest if there is no raise in commission.
04-11-25 04:38 pm
Bangalore Correspondent
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
04-11-25 10:51 pm
Mangalore Correspondent
Mangalore Police, Panambur Beach: ಗಂಡ - ಹೆಂಡತ...
04-11-25 08:37 pm
ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ಹಣಕ್ಕಾಗಿ...
04-11-25 06:15 pm
ವ್ಯಾಟಿಕನ್ ಸಿಟಿಯ ಭಾರತದ ರಾಯಭಾರಿ ಆ್ಯಂಡ್ರಿಯಾ ಫಾನ್...
04-11-25 05:06 pm
ಧರ್ಮಸ್ಥಳ ಪ್ರಕರಣ ; ಎಸ್ಐಟಿ ತನಿಖಾ ಪ್ರಕ್ರಿಯೆಗೆ ಮಹ...
04-11-25 05:03 pm
04-11-25 02:11 pm
Mangalore Correspondent
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm