ಬ್ರೇಕಿಂಗ್ ನ್ಯೂಸ್
01-02-23 11:23 am Mangalore Correspondent ಕರಾವಳಿ
ಪುತ್ತೂರು, ಫೆ.1: ಉತ್ತರ ಕರ್ನಾಟಕ, ದಕ್ಷಿಣ ಕರ್ನಾಟಕ ಪ್ರವಾಸದ ಬಳಿಕ ಕೇಂದ್ರ ಗೃಹ ಸಚಿವ ಅಮಿತ್ ಷಾ ಕರಾವಳಿಯತ್ತ ಕಣ್ಣಿಟ್ಟಿದ್ದಾರೆ. ಫೆ.11ರಂದು ಅಮಿತ್ ಷಾ ಪುತ್ತೂರಿಗೆ ಆಗಮಿಸಲಿದ್ದು ಕ್ಯಾಂಪ್ಕೋ ನೇತೃತ್ವದಲ್ಲಿ ನಡೆಯುವ ಬೃಹತ್ ಸಹಕಾರಿ ಸಮಾವೇಶದಲ್ಲಿ ಪಾಲ್ಗೊಳಲಿದ್ದಾರೆ. ಕಾರ್ಯಕ್ರಮದಲ್ಲಿ 1 ಲಕ್ಷ ಜನರನ್ನು ಸೇರಿಸಲು ಬಿಜೆಪಿ ಸಿದ್ಧತೆ ನಡೆಸಿದೆ.
ಕ್ಯಾಂಪ್ಕೋ ಸಂಸ್ಥೆಯ 50ನೇ ವರ್ಷಾಚರಣೆ ಹಿನ್ನೆಲೆಯಲ್ಲಿ ಕೇಂದ್ರ ಗೃಹ ಸಚಿವರು ಆಗಮಿಸುತ್ತಿದ್ದಾರೆ. ಹೀಗಾಗಿ ಕ್ಯಾಂಪ್ಕೋ ನೇತೃತ್ವದಲ್ಲಿ ಬೃಹತ್ ಸಹಕಾರಿ ಸಮಾವೇಶ ಹಮ್ಮಿಕೊಳ್ಳಲಾಗಿದೆ. ಫೆ 11 ರಂದು ಸಂಜೆ 3 ಗಂಟೆಗೆ ಪುತ್ತೂರಿನ ತೆಂಕಿಲ ವಿವೇಕಾನಂದ ವಿದ್ಯಾಸಂಸ್ಥೆ ಆವರಣದ ಮೈದಾನದಲ್ಲಿ ಸಮಾವೇಶ ನಡೆಯಲಿದೆ. ಅದೇ ದಿನ ಗೃಹ ಸಚಿವರು ಕ್ಯಾಂಪ್ಕೋ ಚಾಕಲೇಟ್ ಫ್ಯಾಕ್ಟರಿಗೂ ಭೇಟಿ ನೀಡುವ ಕಾರ್ಯಕ್ರಮವಿದೆ.
ಸದ್ಯಕ್ಕೆ ಅಮಿತ್ ಷಾ ಕಾರ್ಯಕ್ರಮದ ಸಂಪೂರ್ಣ ಪಟ್ಟಿ ಸಿದ್ಧವಾಗಿಲ್ಲ. ಸಹಕಾರಿ ಸಚಿವರೂ ಆಗಿರುವುದರಿಂದ ಸಹಕಾರಿ ಸಮಾವೇಶ ಉದ್ದೇಶಿಸಿ ಮಾತನಾಡಲಿದ್ದಾರೆ. ಸಂಜೆ 5.30ಕ್ಕೆ ವಿಶೇಷ ವಿಮಾನದಲ್ಲಿ ನಿರ್ಗಮಿಸಲಿದ್ದಾರೆ. ಅಂತಿಮ ಹಂತದ ಬದಲಾವಣೆಯಿದ್ದರೆ ಕೇಂದ್ರ ಗೃಹ ಸಚಿವಾಲಯದಿಂದ ಪರಿಷ್ಕೃತ ಪ್ರವಾಸ ಪಟ್ಟಿ ಬರಬಹುದು ಎಂದು ಪುತ್ತೂರು ಬಿಜೆಪಿ ಪ್ರಮುಖರು ತಿಳಿಸಿದ್ದಾರೆ. ಕಾರ್ಯಕ್ರಮದಲ್ಲಿ ರೈತರು ಮತ್ತು ಕಾರ್ಯಕರ್ತರನ್ನು ಸೇರಿಸುವ ನಿಟ್ಟಿನಲ್ಲಿ ಸುಳ್ಯ, ಪುತ್ತೂರು, ಬೆಳ್ತಂಗಡಿ ಭಾಗದ ಪ್ರತೀ ಗ್ರಾಮ ಮಟ್ಟದಲ್ಲೂ ಅಭಿಯಾನ ನಡೆಯಲಿದೆ ಎಂದವರು ತಿಳಿಸಿದ್ದಾರೆ.
BJP Amith Shah to visit Puttur on Feb 11, one lakh people expected.
10-07-26 07:42 pm
HK News Staffer
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
ಬೆಳಗಾವಿಯಲ್ಲಿ ಆರೆಸ್ಸೆಸ್ ಪ್ರತಿನಿಧಿ ಸಭೆ ; ಖಾಸಗಿ...
08-07-26 02:06 pm
ಗುಂಡ್ಲುಪೇಟೆ ಬಳಿಯ ಮಲ್ಲಯ್ಯನಪುರ ಗುಡ್ಡದಲ್ಲಿ ಅಪರೂಪ...
08-07-26 01:13 pm
09-07-26 03:40 pm
HK News Staffer
18 ವರ್ಷಗಳ ಬಳಿಕ ಅಹಮದಾಬಾದ್ ಸರಣಿ ಬಾಂಬ್ ಸ್ಫೋಟ ಪ್ರ...
07-07-26 03:22 pm
ವಯನಾಡಿನಲ್ಲಿ ಮತ್ತೆ ಭೀಕರ ಭೂಕುಸಿತ ; ಭಾರೀ ಮಳೆಗೆ ಸ...
07-07-26 01:51 pm
ಮುಂಬೈನಲ್ಲಿ ಮರಣ ಮಳೆಗೆ 13 ಮಂದಿ ಬಲಿ; ಕುಸಿದ ರಸ್ತ...
06-07-26 01:14 pm
ಅಟ್ಲಾಂಟಿಕ್ ಸಾಗರದಲ್ಲಿ 80 ವರ್ಷಗಳ ಹಿಂದೆ ಮುಳುಗಿದ್...
05-07-26 08:39 pm
10-07-26 05:25 pm
HK News Staffer
ಬಾಲಕನಿಗೆ ಛಡಿಯೇಟು ; ಕಾಟಿಪಳ್ಳ ಮದ್ರಸಾ ಶಿಕ್ಷಕ ಉಸ್...
09-07-26 11:09 pm
ಮೋದಿಯನ್ನ ಪ್ರಶ್ನಿಸುವ ಕೈ ಮುಖಂಡ ಅಭಿಷೇಕ್ ಮೂಡಾ ಭ್ರ...
09-07-26 10:47 pm
ಕೆಪಿಟಿ ಜಂಕ್ಷನ್ ಬಳಿಯಲ್ಲಿ ಡಿವೈಡರ್ ಡಿಕ್ಕಿಯಾಗಿ ಬೈ...
08-07-26 11:04 pm
ಸಚಿವರಿಲ್ಲದ ಶಿಕ್ಷಣ ಇಲಾಖೆ ಬಣ ಬಣ ; ಪಿಯು ಕಾಲೇಜಿಗೆ...
08-07-26 08:38 pm
10-07-26 08:22 pm
HK News Staffer
ರಿವರ್ಸ್ ಮಾಡುವಾಗ ನಿಯಂತ್ರಣ ತಪ್ಪಿ ತೋಡಿಗೆ ಉರುಳಿ ಬ...
10-07-26 05:29 pm
ರೆಡ್ ಅಲರ್ಟ್; ರಜೆ ಆದೇಶ ಪಾಲಿಸದ ಹತ್ತಕ್ಕೂ ಹೆಚ್ಚು...
10-07-26 03:25 pm
ಕಟ್ಟಡ ಕಾರ್ಮಿಕರ ಸೋಗಿನಲ್ಲಿ ಅಡಗಿದ್ದ ಎಂಟು ಮಂದಿ ಬಾ...
10-07-26 02:22 pm
ಟೀಚರ್ ಬುದ್ಧಿವಾದ ಹೇಳಿದ್ದೇ ತಪ್ಪಾಯ್ತು ; ಈ ಅವಮಾನ...
09-07-26 09:11 pm