ಬ್ರೇಕಿಂಗ್ ನ್ಯೂಸ್
01-02-23 11:23 am Mangalore Correspondent ಕರಾವಳಿ
ಪುತ್ತೂರು, ಫೆ.1: ಉತ್ತರ ಕರ್ನಾಟಕ, ದಕ್ಷಿಣ ಕರ್ನಾಟಕ ಪ್ರವಾಸದ ಬಳಿಕ ಕೇಂದ್ರ ಗೃಹ ಸಚಿವ ಅಮಿತ್ ಷಾ ಕರಾವಳಿಯತ್ತ ಕಣ್ಣಿಟ್ಟಿದ್ದಾರೆ. ಫೆ.11ರಂದು ಅಮಿತ್ ಷಾ ಪುತ್ತೂರಿಗೆ ಆಗಮಿಸಲಿದ್ದು ಕ್ಯಾಂಪ್ಕೋ ನೇತೃತ್ವದಲ್ಲಿ ನಡೆಯುವ ಬೃಹತ್ ಸಹಕಾರಿ ಸಮಾವೇಶದಲ್ಲಿ ಪಾಲ್ಗೊಳಲಿದ್ದಾರೆ. ಕಾರ್ಯಕ್ರಮದಲ್ಲಿ 1 ಲಕ್ಷ ಜನರನ್ನು ಸೇರಿಸಲು ಬಿಜೆಪಿ ಸಿದ್ಧತೆ ನಡೆಸಿದೆ.
ಕ್ಯಾಂಪ್ಕೋ ಸಂಸ್ಥೆಯ 50ನೇ ವರ್ಷಾಚರಣೆ ಹಿನ್ನೆಲೆಯಲ್ಲಿ ಕೇಂದ್ರ ಗೃಹ ಸಚಿವರು ಆಗಮಿಸುತ್ತಿದ್ದಾರೆ. ಹೀಗಾಗಿ ಕ್ಯಾಂಪ್ಕೋ ನೇತೃತ್ವದಲ್ಲಿ ಬೃಹತ್ ಸಹಕಾರಿ ಸಮಾವೇಶ ಹಮ್ಮಿಕೊಳ್ಳಲಾಗಿದೆ. ಫೆ 11 ರಂದು ಸಂಜೆ 3 ಗಂಟೆಗೆ ಪುತ್ತೂರಿನ ತೆಂಕಿಲ ವಿವೇಕಾನಂದ ವಿದ್ಯಾಸಂಸ್ಥೆ ಆವರಣದ ಮೈದಾನದಲ್ಲಿ ಸಮಾವೇಶ ನಡೆಯಲಿದೆ. ಅದೇ ದಿನ ಗೃಹ ಸಚಿವರು ಕ್ಯಾಂಪ್ಕೋ ಚಾಕಲೇಟ್ ಫ್ಯಾಕ್ಟರಿಗೂ ಭೇಟಿ ನೀಡುವ ಕಾರ್ಯಕ್ರಮವಿದೆ.
ಸದ್ಯಕ್ಕೆ ಅಮಿತ್ ಷಾ ಕಾರ್ಯಕ್ರಮದ ಸಂಪೂರ್ಣ ಪಟ್ಟಿ ಸಿದ್ಧವಾಗಿಲ್ಲ. ಸಹಕಾರಿ ಸಚಿವರೂ ಆಗಿರುವುದರಿಂದ ಸಹಕಾರಿ ಸಮಾವೇಶ ಉದ್ದೇಶಿಸಿ ಮಾತನಾಡಲಿದ್ದಾರೆ. ಸಂಜೆ 5.30ಕ್ಕೆ ವಿಶೇಷ ವಿಮಾನದಲ್ಲಿ ನಿರ್ಗಮಿಸಲಿದ್ದಾರೆ. ಅಂತಿಮ ಹಂತದ ಬದಲಾವಣೆಯಿದ್ದರೆ ಕೇಂದ್ರ ಗೃಹ ಸಚಿವಾಲಯದಿಂದ ಪರಿಷ್ಕೃತ ಪ್ರವಾಸ ಪಟ್ಟಿ ಬರಬಹುದು ಎಂದು ಪುತ್ತೂರು ಬಿಜೆಪಿ ಪ್ರಮುಖರು ತಿಳಿಸಿದ್ದಾರೆ. ಕಾರ್ಯಕ್ರಮದಲ್ಲಿ ರೈತರು ಮತ್ತು ಕಾರ್ಯಕರ್ತರನ್ನು ಸೇರಿಸುವ ನಿಟ್ಟಿನಲ್ಲಿ ಸುಳ್ಯ, ಪುತ್ತೂರು, ಬೆಳ್ತಂಗಡಿ ಭಾಗದ ಪ್ರತೀ ಗ್ರಾಮ ಮಟ್ಟದಲ್ಲೂ ಅಭಿಯಾನ ನಡೆಯಲಿದೆ ಎಂದವರು ತಿಳಿಸಿದ್ದಾರೆ.
BJP Amith Shah to visit Puttur on Feb 11, one lakh people expected.
09-02-26 07:20 pm
Bangalore Correspondent
ಶಿವಮೊಗ್ಗದ ಕಾರು ಚಾಲಕನಲ್ಲಿ 19 ಬಾಡಿಗೆ ಬ್ಯಾಂಕ್ ಖಾ...
09-02-26 01:30 pm
ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ರ...
09-02-26 12:29 pm
Gadag, No phone, Tv: ಎಸ್ಸೆಸ್ಸೆಲ್ಸಿ ಮಕ್ಕಳ ಭವಿಷ...
07-02-26 05:09 pm
ಸಿದ್ದರಾಮಯ್ಯರೇ ಐದು ವರ್ಷ ಸಿಎಂ ; ಪುತ್ರ ಯತೀಂದ್ರ ಪ...
07-02-26 02:58 pm
10-02-26 07:31 pm
HK News Desk
ಅಡೂರು ಮೂಲದ ಸೋಶಿಯಲ್ ಮೀಡಿಯಾ ಸ್ಟಾರ್ ಚಿನ್ನು ಪಾಪು...
10-02-26 02:15 pm
ರಾಮ ಮಂದಿರ ಸ್ಫೋಟಕ್ಕೆ ಸಂಚು ರೂಪಿಸಿದ್ದ ಕೈದಿ ಫರೀದಾ...
10-02-26 11:44 am
ಕೆನಡಾದಲ್ಲಿ ಗುಂಡಿಟ್ಟು ಕನ್ನಡಿಗ ಸಾಫ್ಟ್ವೇರ್ ಇಂಜಿ...
09-02-26 10:25 pm
ಜಾಗತಿಕ ಷೇರು ಮಾರುಕಟ್ಟೆಯಲ್ಲಿ 'ಆಂಥ್ರೋಪಿಕ್' AI ಬಿ...
09-02-26 12:27 pm
10-02-26 11:03 pm
Mangalore Correspondent
Mangaore, Marriage Fraud: ಹಲವಾರು ಹೆಂಡಿರ ಮುದ್ದ...
10-02-26 08:27 pm
Oman Accident: ಒಮಾನ್ ನಲ್ಲಿ ಭೀಕರ ಅಪಘಾತ ; ಕಾಪು...
09-02-26 11:20 pm
Mangalore Accident, Bus: ನಂತೂರಿನಲ್ಲಿ ಅಪಘಾತಕ್ಕ...
09-02-26 08:02 pm
ಕೆಪಿಟಿ ಜಂಕ್ಷನ್ ಬಳಿಯ ಹೆದ್ದಾರಿ ಡಿವೈಡರ್ ಮುಚ್ಚಿದ್...
09-02-26 02:50 pm
10-02-26 09:05 pm
Bangalore Correspondent
Peter Caddy, Arrest: ಉದ್ಯಮಿಗಳಿಗೆ ಸಾಲ ಕೊಡಿಸುವು...
10-02-26 04:38 pm
Belthangady Fake Kidnap: ಕಾಲೇಜು ವಿದ್ಯಾರ್ಥಿನಿ...
10-02-26 10:59 am
ಜಾಲತಾಣದಲ್ಲೇ ಪಡ್ಡೆ ಹುಡುಗರಿಗೆ ಬಲೆ, ಖತರ್ನಾಕ್ ಪ್...
09-02-26 02:04 pm
ಬೆಳ್ತಂಗಡಿ ; ಕಾಲೇಜು ತೆರಳುತ್ತಿದ್ದ ಅಪ್ರಾಪ್ತ ಯುವತ...
09-02-26 11:26 am