ಬ್ರೇಕಿಂಗ್ ನ್ಯೂಸ್
01-02-23 12:12 pm Mangalore Correspondent ಕರಾವಳಿ
ಉಳ್ಳಾಲ, ಫೆ.1: ವಿಶೇಷ ಚೇತನ ಯುವತಿಯೋರ್ವಳು ಸಂಶಯಾಸ್ಪದ ರೀತಿಯಲ್ಲಿ ಸಾವನ್ನಪ್ಪಿರುವ ಘಟನೆ ಉಳ್ಳಾಲ ಪೊಲೀಸ್ ಠಾಣೆ ವ್ಯಾಪ್ತಿಯ ಕೊಲ್ಯ ಸಾರಸ್ವತ ಕಾಲನಿ ಬಾಡಿಗೆ ಮನೆಯಲ್ಲಿ ನಡೆದಿದೆ. ಯುವತಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದು ಬಾಯಿಗೆ ಬಟ್ಟೆಯನ್ನು ಕಟ್ಟಿರುವುದು ಕೊಲೆ ಶಂಕೆಗೆ ಕಾರಣವಾಗಿದೆ.
ಛತ್ತೀಸ್ ಗಢ ಮೂಲದ ಸರಿತಾ ವರ್ಮ(23) ನಿಗೂಢ ರೀತಿಯಲ್ಲಿ ಸಾವನ್ನಪ್ಪಿದಾಕೆ. ಇಬ್ಬರು ಸಹೋದರರು ಹಾಗೂ ಅತ್ತಿಗೆ ಜೊತೆ ಸರಿತಾ ಬಾಡಿಗೆ ಮನೆಯಲ್ಲಿ ವಾಸಿಸುತ್ತಿದ್ದಳು. ಜ.30ರಂದು ಸಂಜೆ ಘಟನೆ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ. ಘಟನೆ ವೇಳೆ ಸಹೋದರರಿಬ್ಬರು ಕೆಲಸಕ್ಕೆ ತೆರಳಿದ್ದರೆ, ಅತ್ತಿಗೆ ಆಸ್ಪತ್ರೆಗೆ ತೆರಳಿದ್ದರು. ಬಾಡಿಗೆ ಮನೆ ಮಾಲೀಕರು ವೃದ್ಧರಾಗಿದ್ದು ಅಸೌಖ್ಯದಿಂದಿದ್ದಾರೆ. ಕೆಳಗಿನ ಅಂತಸ್ತಿನಲ್ಲಿ ಮಾಲೀಕರಿದ್ದರೆ, ಮೇಲಿನ ಅಂತಸ್ತಿನಲ್ಲಿ ಬಾಡಿಗೆ ಕುಟುಂಬ ವಾಸ್ತವ್ಯವಿತ್ತು.

ಸರಿತಾ ವರ್ಮ ವಿಶೇಷ ಚೇತನರಾಗಿದ್ದು, ಮೂಗಿ ಮತ್ತು ಕಿವಿ ಕೇಳದ ಸ್ಥಿತಿಯಲ್ಲಿದ್ದರು. ಸರಿತಾ ಬಾಯಿಗೆ ಬಟ್ಟೆಯನ್ನು ಬಿಗಿಯಾಗಿ ಕಟ್ಟಲಾಗಿದೆ. ಇದು ಶಂಕೆಗೆ ಕಾರಣವಾಗಿದ್ದು, ಹತ್ಯೆ ನಡೆಸಿದ ಬಳಿಕ ಯುವತಿಯನ್ನು ನೇಣು ಹಾಕಿದರೇ ಅನ್ನುವ ಸಂಶಯವನ್ನು ಉಳ್ಳಾಲ ಪೊಲೀಸರು ವ್ಯಕ್ತಪಡಿಸಿದ್ದಾರೆ. ಕೆಳಗಿನ ಮನೆಯಲ್ಲಿರುವ ವೃದ್ಧ ಮಾಲೀಕರಿಗೆ ಯುವಕನೋರ್ವ ಮಧ್ಯಾಹ್ನ ಹಾಗೂ ರಾತ್ರಿ ಊಟ ತರುತ್ತಾನೆ. ಸರಿತಾ ವರ್ಮ ಮೃತದೇಹ ಪತ್ತೆಯಾದ ದಿನದಂದು ಆತ ಎಂದಿನಂತೆ ಬಂದಿದ್ದ. ಈ ಕುರಿತು ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಯುಡಿಆರ್ ದಾಖಲಿಸಿರುವ ಪೊಲೀಸರು ಸಂಶಯಾಸ್ಪದ ವ್ಯಕ್ತಿಗಳನ್ನು ಠಾಣೆಗೆ ಕರೆಸಿ ವಿಚಾರಣೆ ಕೈಗೆತ್ತಿಕೊಂಡಿದ್ದಾರೆ.
Mangalore Physically disabled 23 year old girl commits suicide at home in Ullal. The deceased has been idenitified as Sarita Varma.
04-11-25 04:38 pm
Bangalore Correspondent
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
04-11-25 10:51 pm
Mangalore Correspondent
Mangalore Police, Panambur Beach: ಗಂಡ - ಹೆಂಡತ...
04-11-25 08:37 pm
ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ಹಣಕ್ಕಾಗಿ...
04-11-25 06:15 pm
ವ್ಯಾಟಿಕನ್ ಸಿಟಿಯ ಭಾರತದ ರಾಯಭಾರಿ ಆ್ಯಂಡ್ರಿಯಾ ಫಾನ್...
04-11-25 05:06 pm
ಧರ್ಮಸ್ಥಳ ಪ್ರಕರಣ ; ಎಸ್ಐಟಿ ತನಿಖಾ ಪ್ರಕ್ರಿಯೆಗೆ ಮಹ...
04-11-25 05:03 pm
04-11-25 02:11 pm
Mangalore Correspondent
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm