ಬ್ರೇಕಿಂಗ್ ನ್ಯೂಸ್
01-02-23 12:12 pm Mangalore Correspondent ಕರಾವಳಿ
ಉಳ್ಳಾಲ, ಫೆ.1: ವಿಶೇಷ ಚೇತನ ಯುವತಿಯೋರ್ವಳು ಸಂಶಯಾಸ್ಪದ ರೀತಿಯಲ್ಲಿ ಸಾವನ್ನಪ್ಪಿರುವ ಘಟನೆ ಉಳ್ಳಾಲ ಪೊಲೀಸ್ ಠಾಣೆ ವ್ಯಾಪ್ತಿಯ ಕೊಲ್ಯ ಸಾರಸ್ವತ ಕಾಲನಿ ಬಾಡಿಗೆ ಮನೆಯಲ್ಲಿ ನಡೆದಿದೆ. ಯುವತಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದು ಬಾಯಿಗೆ ಬಟ್ಟೆಯನ್ನು ಕಟ್ಟಿರುವುದು ಕೊಲೆ ಶಂಕೆಗೆ ಕಾರಣವಾಗಿದೆ.
ಛತ್ತೀಸ್ ಗಢ ಮೂಲದ ಸರಿತಾ ವರ್ಮ(23) ನಿಗೂಢ ರೀತಿಯಲ್ಲಿ ಸಾವನ್ನಪ್ಪಿದಾಕೆ. ಇಬ್ಬರು ಸಹೋದರರು ಹಾಗೂ ಅತ್ತಿಗೆ ಜೊತೆ ಸರಿತಾ ಬಾಡಿಗೆ ಮನೆಯಲ್ಲಿ ವಾಸಿಸುತ್ತಿದ್ದಳು. ಜ.30ರಂದು ಸಂಜೆ ಘಟನೆ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ. ಘಟನೆ ವೇಳೆ ಸಹೋದರರಿಬ್ಬರು ಕೆಲಸಕ್ಕೆ ತೆರಳಿದ್ದರೆ, ಅತ್ತಿಗೆ ಆಸ್ಪತ್ರೆಗೆ ತೆರಳಿದ್ದರು. ಬಾಡಿಗೆ ಮನೆ ಮಾಲೀಕರು ವೃದ್ಧರಾಗಿದ್ದು ಅಸೌಖ್ಯದಿಂದಿದ್ದಾರೆ. ಕೆಳಗಿನ ಅಂತಸ್ತಿನಲ್ಲಿ ಮಾಲೀಕರಿದ್ದರೆ, ಮೇಲಿನ ಅಂತಸ್ತಿನಲ್ಲಿ ಬಾಡಿಗೆ ಕುಟುಂಬ ವಾಸ್ತವ್ಯವಿತ್ತು.

ಸರಿತಾ ವರ್ಮ ವಿಶೇಷ ಚೇತನರಾಗಿದ್ದು, ಮೂಗಿ ಮತ್ತು ಕಿವಿ ಕೇಳದ ಸ್ಥಿತಿಯಲ್ಲಿದ್ದರು. ಸರಿತಾ ಬಾಯಿಗೆ ಬಟ್ಟೆಯನ್ನು ಬಿಗಿಯಾಗಿ ಕಟ್ಟಲಾಗಿದೆ. ಇದು ಶಂಕೆಗೆ ಕಾರಣವಾಗಿದ್ದು, ಹತ್ಯೆ ನಡೆಸಿದ ಬಳಿಕ ಯುವತಿಯನ್ನು ನೇಣು ಹಾಕಿದರೇ ಅನ್ನುವ ಸಂಶಯವನ್ನು ಉಳ್ಳಾಲ ಪೊಲೀಸರು ವ್ಯಕ್ತಪಡಿಸಿದ್ದಾರೆ. ಕೆಳಗಿನ ಮನೆಯಲ್ಲಿರುವ ವೃದ್ಧ ಮಾಲೀಕರಿಗೆ ಯುವಕನೋರ್ವ ಮಧ್ಯಾಹ್ನ ಹಾಗೂ ರಾತ್ರಿ ಊಟ ತರುತ್ತಾನೆ. ಸರಿತಾ ವರ್ಮ ಮೃತದೇಹ ಪತ್ತೆಯಾದ ದಿನದಂದು ಆತ ಎಂದಿನಂತೆ ಬಂದಿದ್ದ. ಈ ಕುರಿತು ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಯುಡಿಆರ್ ದಾಖಲಿಸಿರುವ ಪೊಲೀಸರು ಸಂಶಯಾಸ್ಪದ ವ್ಯಕ್ತಿಗಳನ್ನು ಠಾಣೆಗೆ ಕರೆಸಿ ವಿಚಾರಣೆ ಕೈಗೆತ್ತಿಕೊಂಡಿದ್ದಾರೆ.
Mangalore Physically disabled 23 year old girl commits suicide at home in Ullal. The deceased has been idenitified as Sarita Varma.
14-05-26 10:19 am
HK News Staffer
ಬಿಜೆಪಿ ಸರ್ಕಾರ ನಿಷೇಧಿಸಿದ್ದ ಹಿಜಾಬ್ ನಿಷೇಧ ಹಿಂಪಡೆ...
13-05-26 10:18 pm
3 ಸಾವಿರ ರೂ. ಬಿಲ್ ಬಾಕಿ; 8 ತಿಂಗಳಿಂದ ಕತ್ತಲಲ್ಲಿ...
12-05-26 02:26 pm
ಶೃಂಗೇರಿ ಕ್ಷೇತ್ರದ ಅಂಚೆ ಮತ ಗೊಂದಲ; ಕಾಂಗ್ರೆಸಿನ ರಾ...
11-05-26 09:36 pm
D Sudhakar Death: ಚಿತ್ರದುರ್ಗದ ಜನಾನುರಾಗಿ ಶಾಸಕ,...
10-05-26 01:04 pm
14-05-26 12:36 pm
HK News Staffer
ಜ್ಯೋತಿಷಿಗೆ ಕೂಡದ ಜಾತಕ ; ಟೀಕೆಗಳ ಸುಳಿಯಲ್ಲಿ ವಿಜಯ್...
13-05-26 06:42 pm
ಅಗ್ನಿ ಪರೀಕ್ಷೆಯಲ್ಲಿ ಗೆದ್ದ ವಿಜಯ್; ನಿರೀಕ್ಷೆಗೂ ಮ...
13-05-26 02:26 pm
ಎಐಎಡಿಎಂಕೆ ಪಕ್ಷವೇ ಇಬ್ಭಾಗ ; 30 ಶಾಸಕರ ಬಣ ವಿಜಯ್ ಸ...
12-05-26 08:15 pm
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ; ಮೇ 3ರಂದು ನಡೆದಿದ...
12-05-26 08:01 pm
14-05-26 10:48 pm
HK News Staffer
ರಿಯಲ್ ಎಸ್ಟೇಟ್ ಉದ್ಯಮಿ, ‘ಲ್ಯಾನ್ಸಿ ಕನ್ಸ್ಟ್ರಕ್ಷನ...
14-05-26 05:39 pm
ಮಂಗಳೂರಿನಲ್ಲೂ "ಲಾಕ್ಡ್ ಹೌಸ್ ಬೀಟ್ ಸಿಸ್ಟಮ್" ಜಾರಿ...
13-05-26 11:02 pm
Gruha Lakshmi Mangalore: ಸತ್ತವರ ಖಾತೆಗೂ ಗೃಹಲಕ್...
13-05-26 04:04 pm
NEET ಪರೀಕ್ಷೆ ರದ್ದು ; 22.5 ಲಕ್ಷ ವಿದ್ಯಾರ್ಥಿಗಳ ಭ...
12-05-26 06:26 pm
14-05-26 01:41 pm
HK News Staffer
ತುಮಕೂರಿನ ಮದರಸಾದಲ್ಲಿ ಸಿಬ್ಬಂದಿಗಳಿಂದ ಮಕ್ಕಳ ಮೇಲೆ...
14-05-26 10:49 am
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; 30 ಸಾವಿರದಿಂದ 28...
13-05-26 09:25 pm
ಹಾಸನದಲ್ಲಿ ಜಿಮ್ ಕಿರಿಕ್; ವರ್ಕೌಟ್ ವೇಳೆ ಭುಜ ಟಚ್ ಆ...
13-05-26 06:36 pm
ಚಾರ್ಜ್ಗೆ ಹಾಕಿದ್ದ ಎಲೆಕ್ಟ್ರಿಕಲ್ ಬೈಕ್ ಸ್ಫೋಟ; ಮ...
13-05-26 03:39 pm