ಬ್ರೇಕಿಂಗ್ ನ್ಯೂಸ್
01-02-23 12:12 pm Mangalore Correspondent ಕರಾವಳಿ
ಉಳ್ಳಾಲ, ಫೆ.1: ವಿಶೇಷ ಚೇತನ ಯುವತಿಯೋರ್ವಳು ಸಂಶಯಾಸ್ಪದ ರೀತಿಯಲ್ಲಿ ಸಾವನ್ನಪ್ಪಿರುವ ಘಟನೆ ಉಳ್ಳಾಲ ಪೊಲೀಸ್ ಠಾಣೆ ವ್ಯಾಪ್ತಿಯ ಕೊಲ್ಯ ಸಾರಸ್ವತ ಕಾಲನಿ ಬಾಡಿಗೆ ಮನೆಯಲ್ಲಿ ನಡೆದಿದೆ. ಯುವತಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದು ಬಾಯಿಗೆ ಬಟ್ಟೆಯನ್ನು ಕಟ್ಟಿರುವುದು ಕೊಲೆ ಶಂಕೆಗೆ ಕಾರಣವಾಗಿದೆ.
ಛತ್ತೀಸ್ ಗಢ ಮೂಲದ ಸರಿತಾ ವರ್ಮ(23) ನಿಗೂಢ ರೀತಿಯಲ್ಲಿ ಸಾವನ್ನಪ್ಪಿದಾಕೆ. ಇಬ್ಬರು ಸಹೋದರರು ಹಾಗೂ ಅತ್ತಿಗೆ ಜೊತೆ ಸರಿತಾ ಬಾಡಿಗೆ ಮನೆಯಲ್ಲಿ ವಾಸಿಸುತ್ತಿದ್ದಳು. ಜ.30ರಂದು ಸಂಜೆ ಘಟನೆ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ. ಘಟನೆ ವೇಳೆ ಸಹೋದರರಿಬ್ಬರು ಕೆಲಸಕ್ಕೆ ತೆರಳಿದ್ದರೆ, ಅತ್ತಿಗೆ ಆಸ್ಪತ್ರೆಗೆ ತೆರಳಿದ್ದರು. ಬಾಡಿಗೆ ಮನೆ ಮಾಲೀಕರು ವೃದ್ಧರಾಗಿದ್ದು ಅಸೌಖ್ಯದಿಂದಿದ್ದಾರೆ. ಕೆಳಗಿನ ಅಂತಸ್ತಿನಲ್ಲಿ ಮಾಲೀಕರಿದ್ದರೆ, ಮೇಲಿನ ಅಂತಸ್ತಿನಲ್ಲಿ ಬಾಡಿಗೆ ಕುಟುಂಬ ವಾಸ್ತವ್ಯವಿತ್ತು.

ಸರಿತಾ ವರ್ಮ ವಿಶೇಷ ಚೇತನರಾಗಿದ್ದು, ಮೂಗಿ ಮತ್ತು ಕಿವಿ ಕೇಳದ ಸ್ಥಿತಿಯಲ್ಲಿದ್ದರು. ಸರಿತಾ ಬಾಯಿಗೆ ಬಟ್ಟೆಯನ್ನು ಬಿಗಿಯಾಗಿ ಕಟ್ಟಲಾಗಿದೆ. ಇದು ಶಂಕೆಗೆ ಕಾರಣವಾಗಿದ್ದು, ಹತ್ಯೆ ನಡೆಸಿದ ಬಳಿಕ ಯುವತಿಯನ್ನು ನೇಣು ಹಾಕಿದರೇ ಅನ್ನುವ ಸಂಶಯವನ್ನು ಉಳ್ಳಾಲ ಪೊಲೀಸರು ವ್ಯಕ್ತಪಡಿಸಿದ್ದಾರೆ. ಕೆಳಗಿನ ಮನೆಯಲ್ಲಿರುವ ವೃದ್ಧ ಮಾಲೀಕರಿಗೆ ಯುವಕನೋರ್ವ ಮಧ್ಯಾಹ್ನ ಹಾಗೂ ರಾತ್ರಿ ಊಟ ತರುತ್ತಾನೆ. ಸರಿತಾ ವರ್ಮ ಮೃತದೇಹ ಪತ್ತೆಯಾದ ದಿನದಂದು ಆತ ಎಂದಿನಂತೆ ಬಂದಿದ್ದ. ಈ ಕುರಿತು ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಯುಡಿಆರ್ ದಾಖಲಿಸಿರುವ ಪೊಲೀಸರು ಸಂಶಯಾಸ್ಪದ ವ್ಯಕ್ತಿಗಳನ್ನು ಠಾಣೆಗೆ ಕರೆಸಿ ವಿಚಾರಣೆ ಕೈಗೆತ್ತಿಕೊಂಡಿದ್ದಾರೆ.
Mangalore Physically disabled 23 year old girl commits suicide at home in Ullal. The deceased has been idenitified as Sarita Varma.
10-07-26 07:42 pm
HK News Staffer
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
ಬೆಳಗಾವಿಯಲ್ಲಿ ಆರೆಸ್ಸೆಸ್ ಪ್ರತಿನಿಧಿ ಸಭೆ ; ಖಾಸಗಿ...
08-07-26 02:06 pm
ಗುಂಡ್ಲುಪೇಟೆ ಬಳಿಯ ಮಲ್ಲಯ್ಯನಪುರ ಗುಡ್ಡದಲ್ಲಿ ಅಪರೂಪ...
08-07-26 01:13 pm
09-07-26 03:40 pm
HK News Staffer
18 ವರ್ಷಗಳ ಬಳಿಕ ಅಹಮದಾಬಾದ್ ಸರಣಿ ಬಾಂಬ್ ಸ್ಫೋಟ ಪ್ರ...
07-07-26 03:22 pm
ವಯನಾಡಿನಲ್ಲಿ ಮತ್ತೆ ಭೀಕರ ಭೂಕುಸಿತ ; ಭಾರೀ ಮಳೆಗೆ ಸ...
07-07-26 01:51 pm
ಮುಂಬೈನಲ್ಲಿ ಮರಣ ಮಳೆಗೆ 13 ಮಂದಿ ಬಲಿ; ಕುಸಿದ ರಸ್ತ...
06-07-26 01:14 pm
ಅಟ್ಲಾಂಟಿಕ್ ಸಾಗರದಲ್ಲಿ 80 ವರ್ಷಗಳ ಹಿಂದೆ ಮುಳುಗಿದ್...
05-07-26 08:39 pm
10-07-26 05:25 pm
HK News Staffer
ಬಾಲಕನಿಗೆ ಛಡಿಯೇಟು ; ಕಾಟಿಪಳ್ಳ ಮದ್ರಸಾ ಶಿಕ್ಷಕ ಉಸ್...
09-07-26 11:09 pm
ಮೋದಿಯನ್ನ ಪ್ರಶ್ನಿಸುವ ಕೈ ಮುಖಂಡ ಅಭಿಷೇಕ್ ಮೂಡಾ ಭ್ರ...
09-07-26 10:47 pm
ಕೆಪಿಟಿ ಜಂಕ್ಷನ್ ಬಳಿಯಲ್ಲಿ ಡಿವೈಡರ್ ಡಿಕ್ಕಿಯಾಗಿ ಬೈ...
08-07-26 11:04 pm
ಸಚಿವರಿಲ್ಲದ ಶಿಕ್ಷಣ ಇಲಾಖೆ ಬಣ ಬಣ ; ಪಿಯು ಕಾಲೇಜಿಗೆ...
08-07-26 08:38 pm
10-07-26 08:22 pm
HK News Staffer
ರಿವರ್ಸ್ ಮಾಡುವಾಗ ನಿಯಂತ್ರಣ ತಪ್ಪಿ ತೋಡಿಗೆ ಉರುಳಿ ಬ...
10-07-26 05:29 pm
ರೆಡ್ ಅಲರ್ಟ್; ರಜೆ ಆದೇಶ ಪಾಲಿಸದ ಹತ್ತಕ್ಕೂ ಹೆಚ್ಚು...
10-07-26 03:25 pm
ಕಟ್ಟಡ ಕಾರ್ಮಿಕರ ಸೋಗಿನಲ್ಲಿ ಅಡಗಿದ್ದ ಎಂಟು ಮಂದಿ ಬಾ...
10-07-26 02:22 pm
ಟೀಚರ್ ಬುದ್ಧಿವಾದ ಹೇಳಿದ್ದೇ ತಪ್ಪಾಯ್ತು ; ಈ ಅವಮಾನ...
09-07-26 09:11 pm