ಬ್ರೇಕಿಂಗ್ ನ್ಯೂಸ್
02-02-23 12:51 pm Mangalore Correspondent ಕರಾವಳಿ
ಪುತ್ತೂರು, ಫೆ.2 : ತನ್ನ ಪತ್ನಿಯ ಜೊತೆ ವಿಟ್ಲದ ಬಿಜೆಪಿ ಮುಖಂಡನೊಬ್ಬ ಕಾರಿನಲ್ಲಿ ತೆರಳುತ್ತಿದ್ದುದನ್ನು ಗಮನಿಸಿದ ಮಹಿಳೆಯ ಪತಿರಾಯ ಕಾರನ್ನು ಚೇಸ್ ಮಾಡಿ ರೆಡ್ ಹ್ಯಾಂಡ್ ಹಿಡಿದಿದ್ದಲ್ಲದೆ, ಬಿಜೆಪಿ ಮುಖಂಡನಿಗೆ ಧರ್ಮದೇಟು ನೀಡಿದ ಘಟನೆ ಸುಳ್ಯದಲ್ಲಿ ನಡೆದಿದೆ.
ಈ ವೇಳೆ, ಬಿಜೆಪಿ ಮುಖಂಡ ಮಹಿಳೆ ಹಾಗೂ ಕಾರನ್ನು ಬಿಟ್ಟು ಪಕ್ಕದ ಗುಡ್ಡದಲ್ಲಿ ಪರಾರಿಯಾಗಿದ್ದಾನೆ. ಘಟನೆಯ ವಿಡಿಯೋ ಹಾಗೂ ಫೋಟೊಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಮಹಿಳೆಯ ಪತಿ ಬಂಟ್ವಾಳ ತಾಲೂಕು ಪೆರುವಾಯಿ ಗ್ರಾಮದವರಾಗಿದ್ದು ಪುತ್ತೂರು ಪೊಲೀಸರಿಗೆ ಈ ಬಗ್ಗೆ ದೂರು ನೀಡಿದ್ದಾರೆ. ತನ್ನ ಪತ್ನಿ (29) ಹಾಗೂ ಪುತ್ತೂರು ಬಿಜೆಪಿ ಗ್ರಾಮಾಂತರ ಮಂಡಲದ ಉಪಾಧ್ಯಕ್ಷ, ಪುಣಚ ಬಿಜೆಪಿ ಶಕ್ತಿಕೇಂದ್ರದ ಅಧ್ಯಕ್ಷ ಹರಿಪ್ರಸಾದ್ ಯಾದವ್ (44) ಅನೈತಿಕ ಸಂಬಂಧ ಹೊಂದಿದ್ದಾರೆ ಎಂದು ದೂರಿನಲ್ಲಿ ಆರೋಪಿಸಿದ್ದಾರೆ.
ದೂರುದಾರ ವ್ಯಕ್ತಿ ಮಹಿಳೆಯನ್ನು ಮದುವೆಯಾಗಿ 9 ವರ್ಷವಾಗಿದ್ದು, ಅವರಿಗೆ ಎಂಟು ವರ್ಷದ ಹೆಣ್ಣು ಮಗಳಿದ್ದಾಳೆ. ಪತ್ನಿ ಕೆಲವು ವರ್ಷಗಳಿಂದ ತನ್ನ ಜತೆ ಇರದೇ ಪ್ರತ್ಯೇಕ ವಾಸಿಸುತ್ತಿದ್ದಾಳೆ. ಆದರೇ ನಾವು ವಿವಾಹ ವಿಚ್ಛೇದನ ಪಡೆದುಕೊಂಡಿಲ್ಲ. ನಮ್ಮಿಬ್ಬರ ವಿವಾಹ ಊರ್ಜಿತದಲ್ಲಿದೆಯೆಂದು ದೂರಿನಲ್ಲಿ ತಿಳಿಸಿದ್ದಾರೆ.
ಜ.31ರಂದು ಪತ್ನಿ ಸಮೀಪದ ಜಾತ್ರೆಗೆಂದು ಹೋದವಳನ್ನು ಹರಿ ಪ್ರಸಾದ್ ಅನೈತಿಕ ಸಂಬಂಧ ದುರುದ್ದೇಶದಿಂದ ಕಾರಿನಲ್ಲಿ ಕರೆದುಕೊಂಡು ಹೋಗಿದ್ದಾನೆ. ಈ ಬಗ್ಗೆ ಮಾಹಿತಿ ದೊರೆತ ಹಿನ್ನೆಲೆಯಲ್ಲಿ ಕಾರನ್ನು ನನ್ನ ಮೋಟಾರ್ ಬೈಕ್ನಲ್ಲಿ ಪುತ್ತೂರಿನಿಂದ ಹಿಂಬಾಲಿಸಿದ್ದೇನೆ. ಸುಳ್ಯ ತಾಲೂಕಿನ ಜಾಲ್ಸೂರು ಎಂಬಲ್ಲಿ ಕಾರನ್ನು ತಡೆಯಲು ಪ್ರಯತ್ನಿಸಿದಾಗ ಹರಿಪ್ರಸಾದ್ ಬೈಕ್ ಮೇಲೆ ವಾಹನ ಚಲಾಯಿಸಿ ಹತ್ಯೆಗೆ ಯತ್ನಿಸಿದ್ದಾನೆ. ತಕ್ಷಣ ತಪ್ಪಿಸಿಕೊಂಡು ಕಾರನ್ನು ತಡೆದಿದ್ದು, ಸ್ಥಳದಲ್ಲಿ ಸಾರ್ವಜನಿಕರು ಜಮಾಯಿಸಿದ್ದಾರೆ. ಕೂಡಲೇ ಹರಿ ಪ್ರಸಾದ್ ಕಾರು ಹಾಗೂ ನನ್ನ ಪತ್ನಿಯನ್ನು ಬಿಟ್ಟು ಪರಾರಿಯಾಗಿರುತ್ತಾನೆಂದು ದೂರಿನಲ್ಲಿ ಆರೋಪಿಸಲಾಗಿದೆ.
Puttur illicit affair with married woman, BJP leader Hariprasad Yadav caught red handed, thrashed by husband in Sullia. Video of this has now gone viral on social media.
14-07-25 01:43 pm
HK News Desk
Dr B Saroja Devi Death: 17ನೇ ವಯಸ್ಸಲ್ಲೇ ಚಿತ್ರರ...
14-07-25 12:50 pm
Mantralaya, Tungabhadra River, drowning: ತುಂಬ...
13-07-25 08:37 pm
ಆಧ್ಯಾತ್ಮಿಕ ಸಾಧನೆಯತ್ತ ಚಿತ್ತ ; ಗೋಕರ್ಣ ಬಳಿಯ ದಟ್ಟ...
13-07-25 04:03 pm
Shivamogga Jail News, Mobile phone: ಶಿವಮೊಗ್ಗ...
12-07-25 10:47 pm
12-07-25 09:25 pm
HK News Desk
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
Coimbatore Serial Blasts, 'Tailor Raja' Arres...
11-07-25 12:08 pm
1500ಕ್ಕೂ ಹೆಚ್ಚು ಹಿಂದು ಮಹಿಳೆಯರನ್ನು ಇಸ್ಲಾಮಿಗೆ ಮ...
10-07-25 11:07 pm
13-07-25 11:13 pm
Mangalore Correspondent
Mangalore News: ಸಾರಿಗೆ ಕಚೇರಿಗಳಿಗೆ ಸ್ವಂತ ಕಟ್ಟಡ...
13-07-25 11:11 pm
Mangalore, E Bus, MP Chowta: ಕೇಂದ್ರ ಸರ್ಕಾರದಿಂ...
13-07-25 10:12 pm
Mangalore DK Transport, DK Group Alwyn Joel N...
13-07-25 07:00 pm
ಬೆಳ್ತಂಗಡಿ ; ಶಿಕ್ಷಕಿಯಾಗಿದ್ದ ವಿವಾಹಿತ ಮಹಿಳೆ ನೇಣು...
13-07-25 05:56 pm
13-07-25 05:23 pm
Bangalore Correspondent
ಅಪ್ರಾಪ್ತ ಬಾಲಕಿಯನ್ನು ಶಾಲೆಗೆ ಕರೆದೊಯ್ಯುವ ನೆಪದಲ್ಲ...
12-07-25 11:10 pm
Dowry Harassment, Mysuru: ಮದುವೆಯಾದ ಎರಡೇ ತಿಂಗಳ...
12-07-25 01:32 pm
Mangalore Job Fraud, KCOCA, Police: ಫಾರಿನ್ ಉದ...
12-07-25 11:59 am
Robbery, Gold Workshop in Kalaburagi: ಕಲಬುರಗಿ...
11-07-25 10:10 pm