ಬ್ರೇಕಿಂಗ್ ನ್ಯೂಸ್
04-02-23 12:32 pm Mangalore Correspondent ಕರಾವಳಿ
ಉಳ್ಳಾಲ, ಫೆ.4 : ಹೆದ್ದಾರಿ ಬದಿಯಲ್ಲಿ ಮಂಗಳಮುಖಿಯರ ರೆಡ್ ಲೈಟ್ ಅಡ್ಡೆಯಾಗಿದ್ದ ಹಳೆಯ ಡಕೋಟ ಬಸ್ಸೊಂದು ಆಕಸ್ಮಿಕ ಬೆಂಕಿಗೆ ಆಹುತಿಯಾದ ಘಟನೆ ನಿನ್ನೆ ರಾತ್ರಿ ನಡೆದಿದೆ. ಹೆದ್ದಾರಿ ವೇಶ್ಯೆಯರ ಗಿರಾಕಿಗಳ ಸಿಗರೇಟ್ ಕಿಡಿಯಿಂದಲೇ ಘಟನೆ ಸಂಭವಿಸಿರುವುದಾಗಿ ಸ್ಥಳೀಯರು ಶಂಕಿಸಿದ್ದಾರೆ.
ರಾಷ್ಟ್ರೀಯ ಹೆದ್ದಾರಿ 66ರ ಜಪ್ಪಿನಮೊಗರಿನಲ್ಲಿ ಇರುವ ಗ್ಯಾರೇಜೊಂದರಲ್ಲಿ ಕಳೆದ ಹಲವು ವರ್ಷಗಳಿಂದ ದುರಸ್ತಿಗೆಂದು ನಿಲ್ಲಿಸಿದ್ದ ಹಳೆಯ ಬಸ್ಸಿಗೆ ಆಕಸ್ಮಿಕವಾಗಿ ಬೆಂಕಿ ತಗುಲಿದ್ದು ಸಂಪೂರ್ಣ ಸುಟ್ಟು ಕರಕಲಾಗಿದೆ.
ಜಪ್ಪಿನಮೊಗರು ಹೆದ್ದಾರಿ ಬದಿಯಲ್ಲಿ ವೇಶ್ಯಾವಾಟಿಕೆ ನಡೆಸುತ್ತಿರುವ ಮಂಗಳಮುಖಿಯರು ಇದೇ ಡಕೋಟ ಬಸ್ಸನ್ನು ತಮ್ಮ ಅಡ್ಡೆಯನ್ನಾಗಿಸಿದ್ದರೆಂದು ಸ್ಥಳೀಯರು ಹೇಳಿದ್ದಾರೆ.


ಮಂಗಳಮುಖಿಯರ ರಾತ್ರಿ ಪಾಳಿ ಗಿರಾಕಿಗಳು ಸಿಗರೇಟ್ ಸೇದಿ ಎಸೆದ ಪರಿಣಾಮ ಘಟನೆ ಸಂಭವಿಸಿರಬಹುದೆಂದು ಸ್ಥಳೀಯರು ಮಾಹಿತಿ ನೀಡಿದ್ದಾರೆ. ಪೊಲೀಸರು ಗ್ಯಾರೇಜ್ ಬಳಿಯಲ್ಲೇ ಇರುವ ಟ್ರಾನ್ಸ್ ಫಾರ್ಮರಿನಿಂದ ಕಿಡಿ ಹೊರಸೂಸಿ ಅದರಿಂದ ಬೆಂಕಿ ಹತ್ತಿಕೊಂಡಿರುವ ಸಾಧ್ಯತೆಯಿದೆ ಎಂದಿದ್ದಾರೆ. ಸ್ಥಳದಲ್ಲಿದ್ದ ಟೈರ್ ಗಳೂ ಬೆಂಕಿಗೆ ಆಹುತಿಯಾಗಿವೆ.


ಮಂಗಳೂರಿನ ಕದ್ರಿ, ಕೆಪಿಟಿ, ಜಪ್ಪಿನಮೊಗರು, ತಲಪಾಡಿಯ ಹೆದ್ದಾರಿ ಇಕ್ಕೆಲಗಳಲ್ಲಿ ಮಂಗಳಮುಖಿಯರು ಖುಲ್ಲಂ, ಖುಲ್ಲ ವೇಶ್ಯಾವಾಟಿಕೆ ನಡೆಸುತ್ತಿದ್ದರೂ ಪೊಲೀಸ್ ಇಲಾಖೆ ಇದಕ್ಕೆ ಬ್ರೇಕ್ ಹಾಕುವ ಗೋಜಿಗೆ ಹೋಗಿಲ್ಲ. ಘಟನೆಯಿಂದ ಕೆಲ ಹೊತ್ತು ಹೆದ್ದಾರಿ ವಾಹನ ಸಂಚಾರಕ್ಕೆ ತೊಂದರೆಯಾಗಿತ್ತು.
#Mangalore #fire breaks out at the #garage in #jeppinamogaru, buses gutted, #redlight spot by transgenders. The unused buses were used by transgenders for sex activities. Police suspect #Cigarettes may have caused this massive fire in the garage. pic.twitter.com/xYZaKmu4Hu
— Headline Karnataka (@hknewsonline) February 4, 2023
Mangalore fire breaks out at the garage in jeppinamogaru, buses gutted, redlight spot by transgenders. The unused buses were used by transgenders for sex activities. Police suspect Cigarettes may have caused this massive fire in the garage.
10-07-26 07:42 pm
HK News Staffer
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
ಬೆಳಗಾವಿಯಲ್ಲಿ ಆರೆಸ್ಸೆಸ್ ಪ್ರತಿನಿಧಿ ಸಭೆ ; ಖಾಸಗಿ...
08-07-26 02:06 pm
ಗುಂಡ್ಲುಪೇಟೆ ಬಳಿಯ ಮಲ್ಲಯ್ಯನಪುರ ಗುಡ್ಡದಲ್ಲಿ ಅಪರೂಪ...
08-07-26 01:13 pm
09-07-26 03:40 pm
HK News Staffer
18 ವರ್ಷಗಳ ಬಳಿಕ ಅಹಮದಾಬಾದ್ ಸರಣಿ ಬಾಂಬ್ ಸ್ಫೋಟ ಪ್ರ...
07-07-26 03:22 pm
ವಯನಾಡಿನಲ್ಲಿ ಮತ್ತೆ ಭೀಕರ ಭೂಕುಸಿತ ; ಭಾರೀ ಮಳೆಗೆ ಸ...
07-07-26 01:51 pm
ಮುಂಬೈನಲ್ಲಿ ಮರಣ ಮಳೆಗೆ 13 ಮಂದಿ ಬಲಿ; ಕುಸಿದ ರಸ್ತ...
06-07-26 01:14 pm
ಅಟ್ಲಾಂಟಿಕ್ ಸಾಗರದಲ್ಲಿ 80 ವರ್ಷಗಳ ಹಿಂದೆ ಮುಳುಗಿದ್...
05-07-26 08:39 pm
10-07-26 05:25 pm
HK News Staffer
ಬಾಲಕನಿಗೆ ಛಡಿಯೇಟು ; ಕಾಟಿಪಳ್ಳ ಮದ್ರಸಾ ಶಿಕ್ಷಕ ಉಸ್...
09-07-26 11:09 pm
ಮೋದಿಯನ್ನ ಪ್ರಶ್ನಿಸುವ ಕೈ ಮುಖಂಡ ಅಭಿಷೇಕ್ ಮೂಡಾ ಭ್ರ...
09-07-26 10:47 pm
ಕೆಪಿಟಿ ಜಂಕ್ಷನ್ ಬಳಿಯಲ್ಲಿ ಡಿವೈಡರ್ ಡಿಕ್ಕಿಯಾಗಿ ಬೈ...
08-07-26 11:04 pm
ಸಚಿವರಿಲ್ಲದ ಶಿಕ್ಷಣ ಇಲಾಖೆ ಬಣ ಬಣ ; ಪಿಯು ಕಾಲೇಜಿಗೆ...
08-07-26 08:38 pm
10-07-26 08:22 pm
HK News Staffer
ರಿವರ್ಸ್ ಮಾಡುವಾಗ ನಿಯಂತ್ರಣ ತಪ್ಪಿ ತೋಡಿಗೆ ಉರುಳಿ ಬ...
10-07-26 05:29 pm
ರೆಡ್ ಅಲರ್ಟ್; ರಜೆ ಆದೇಶ ಪಾಲಿಸದ ಹತ್ತಕ್ಕೂ ಹೆಚ್ಚು...
10-07-26 03:25 pm
ಕಟ್ಟಡ ಕಾರ್ಮಿಕರ ಸೋಗಿನಲ್ಲಿ ಅಡಗಿದ್ದ ಎಂಟು ಮಂದಿ ಬಾ...
10-07-26 02:22 pm
ಟೀಚರ್ ಬುದ್ಧಿವಾದ ಹೇಳಿದ್ದೇ ತಪ್ಪಾಯ್ತು ; ಈ ಅವಮಾನ...
09-07-26 09:11 pm